ETV Bharat / state

ನಾನು ಎಂಪಿ ಟಿಕೆಟ್​ ಆಕಾಂಕ್ಷಿ ಅಲ್ಲ, ಭ್ರಷ್ಟ ರಾಜಕೀಯದಿಂದ ದೂರ ಉಳಿಯುವೆ: ನಾರಾಯಣಸ್ವಾಮಿ - ಈಟಿವಿ ಭಾರತ ಕರ್ನಾಟಕ

ನಾನು ಭ್ರಷ್ಟಾಚಾರದ ಚೇರ್​​ ಪಕ್ಕದಲ್ಲಿ ಕೂರುವುದಿಲ್ಲ. ಆದರೂ ಕೂತಿದ್ದೀನಿ ಎಂದು ಕೇಂದ್ರ ಸಚಿವ ನಾರಾಯಣಸ್ವಾಮಿ ಹೇಳಿದ್ದಾರೆ.

Etv Bharati-am-not-mp-ticket-aspirant-says-minister-a-naratanaswamy
ನಾನು ಎಂಪಿ ಟಿಕೆಟ್​ ಆಕಾಂಕ್ಷಿ ಅಲ್ಲ, ಭ್ರಷ್ಟ ರಾಜಕೀಯದಿಂದ ದೂರ ಉಳಿಯುವೆ: ನಾರಾಯಣಸ್ವಾಮಿ
author img

By ETV Bharat Karnataka Team

Published : Dec 22, 2023, 8:08 PM IST

Updated : Dec 22, 2023, 8:16 PM IST

ಕೇಂದ್ರ ಸಚಿವ ನಾರಾಯಣಸ್ವಾಮಿ ಪ್ರತಿಕ್ರಿಯೆ

ಚಿತ್ರದುರ್ಗ: "ನಾನು ಈ ಬಾರಿ ಲೋಕಸಭೆಯ ಟಿಕೆಟ್ ಆಕಾಂಕ್ಷಿಯಲ್ಲ. ನಾನು ಬಿಜೆಪಿಯ ನಿಷ್ಠಾವಂತ ಸೇನಾನಿ" ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ಹೇಳಿದರು. ಚಿತ್ರದುರ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಲೋಕಸಭೆ ಚುನಾವಣೆ ಟಿಕೆಟ್ ವಿಚಾರವಾಗಿ ಪ್ರತಿಕ್ರಿಯಿಸಿ, ನಾನೇ ಅಭ್ಯರ್ಥಿಯಾಗಬೇಕು, ನನ್ನ ಮಕ್ಕಳೇ ಅಭ್ಯರ್ಥಿಯಾಗಬೇಕು ಎಂದಿಲ್ಲ. ನಾನು ಎಂಪಿ ಟಿಕೆಟ್​ ಆಕಾಂಕ್ಷಿ ಅಲ್ಲ. ನನ್ನ ಪಕ್ಷ ಹೇಳಿತ್ತು, ಅದಕ್ಕೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದೆ" ಎಂದರು.

"ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಆಶೀರ್ವಾದದಿಂದ ಎಂಪಿಯಾದೆ. ಅದೇ ರೀತಿ ಪಕ್ಷ ಪ್ರೀತಿಯಿಂದ ನನ್ನನ್ನು ಮಂತ್ರಿ ಮಾಡಿತು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲು ನನಗೆ ಆಗಲಿಲ್ಲ. ಒಬ್ಬ ಚುನಾಯಿತ ಸದಸ್ಯ ಮತದಾರರಿಗೆ ಸಿಗಬೇಕು. ಆ ರೀತಿಯ ಮನಸ್ಸು ನನ್ನಲ್ಲಿದೆ. ರಾಜ್ಯದ ಲೋಕಸಭೆಯ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲಿಸಿ ದಾಖಲೆ ಮಾಡುವುದಕ್ಕೆ ನಮ್ಮ ಪಕ್ಷದ ಕಾರ್ಯಕರ್ತರು ಸಿದ್ಧವಾಗಿದ್ದಾರೆ" ಎಂದು ಹೇಳಿದರು.

"ಚಿತ್ರದುರ್ಗದಿಂದ ಎಂಪಿ ಚುನಾವಣೆಯಲ್ಲಿ ಸ್ಥಳೀಯರೇ ಗೆಲ್ಲುತ್ತಾರೆ ಎಂದು ವರದಿ ಬಂದರೆ, ನಾನೂ ಕಾರ್ಯಕರ್ತರ ಜೊತೆ ಸೇರಿ ವರದಿಯನ್ನು ಪಕ್ಷದ ವರಿಷ್ಠರಿಗೆ ಕೊಡುವ ಪ್ರಯತ್ನ ಮಾಡುತ್ತೇನೆ. ನಾನು ಭ್ರಷ್ಟ ರಾಜಕೀಯ ವ್ಯವಸ್ಥೆಯಿಂದ ದೂರ ಇರಬೇಕು ಎಂದುಕೊಂಡಿದ್ದೀನಿ. ಇಂತಹ ವ್ಯವಸ್ಥೆಯಲ್ಲಿ ಮುಂದುವರೆಯುವ ರಾಜಕಾರಣಿ ನಾನಲ್ಲ. ನಾನು ಭ್ರಷ್ಟಾಚಾರದ ಚೇರ್​​ ಪಕ್ಕದಲ್ಲಿ ಕೂರುವುದಿಲ್ಲ, ಆದರೂ ಕೂತಿದ್ದೀನಿ" ಎಂದರು.

ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಕೇಂದ್ರ ಸಚಿವ ನಾರಾಯಣಸ್ವಾಮಿ ಪ್ರತಿಕ್ರಿಯೆ

ಚಿತ್ರದುರ್ಗ: "ನಾನು ಈ ಬಾರಿ ಲೋಕಸಭೆಯ ಟಿಕೆಟ್ ಆಕಾಂಕ್ಷಿಯಲ್ಲ. ನಾನು ಬಿಜೆಪಿಯ ನಿಷ್ಠಾವಂತ ಸೇನಾನಿ" ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ಹೇಳಿದರು. ಚಿತ್ರದುರ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಲೋಕಸಭೆ ಚುನಾವಣೆ ಟಿಕೆಟ್ ವಿಚಾರವಾಗಿ ಪ್ರತಿಕ್ರಿಯಿಸಿ, ನಾನೇ ಅಭ್ಯರ್ಥಿಯಾಗಬೇಕು, ನನ್ನ ಮಕ್ಕಳೇ ಅಭ್ಯರ್ಥಿಯಾಗಬೇಕು ಎಂದಿಲ್ಲ. ನಾನು ಎಂಪಿ ಟಿಕೆಟ್​ ಆಕಾಂಕ್ಷಿ ಅಲ್ಲ. ನನ್ನ ಪಕ್ಷ ಹೇಳಿತ್ತು, ಅದಕ್ಕೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದೆ" ಎಂದರು.

"ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಆಶೀರ್ವಾದದಿಂದ ಎಂಪಿಯಾದೆ. ಅದೇ ರೀತಿ ಪಕ್ಷ ಪ್ರೀತಿಯಿಂದ ನನ್ನನ್ನು ಮಂತ್ರಿ ಮಾಡಿತು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲು ನನಗೆ ಆಗಲಿಲ್ಲ. ಒಬ್ಬ ಚುನಾಯಿತ ಸದಸ್ಯ ಮತದಾರರಿಗೆ ಸಿಗಬೇಕು. ಆ ರೀತಿಯ ಮನಸ್ಸು ನನ್ನಲ್ಲಿದೆ. ರಾಜ್ಯದ ಲೋಕಸಭೆಯ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲಿಸಿ ದಾಖಲೆ ಮಾಡುವುದಕ್ಕೆ ನಮ್ಮ ಪಕ್ಷದ ಕಾರ್ಯಕರ್ತರು ಸಿದ್ಧವಾಗಿದ್ದಾರೆ" ಎಂದು ಹೇಳಿದರು.

"ಚಿತ್ರದುರ್ಗದಿಂದ ಎಂಪಿ ಚುನಾವಣೆಯಲ್ಲಿ ಸ್ಥಳೀಯರೇ ಗೆಲ್ಲುತ್ತಾರೆ ಎಂದು ವರದಿ ಬಂದರೆ, ನಾನೂ ಕಾರ್ಯಕರ್ತರ ಜೊತೆ ಸೇರಿ ವರದಿಯನ್ನು ಪಕ್ಷದ ವರಿಷ್ಠರಿಗೆ ಕೊಡುವ ಪ್ರಯತ್ನ ಮಾಡುತ್ತೇನೆ. ನಾನು ಭ್ರಷ್ಟ ರಾಜಕೀಯ ವ್ಯವಸ್ಥೆಯಿಂದ ದೂರ ಇರಬೇಕು ಎಂದುಕೊಂಡಿದ್ದೀನಿ. ಇಂತಹ ವ್ಯವಸ್ಥೆಯಲ್ಲಿ ಮುಂದುವರೆಯುವ ರಾಜಕಾರಣಿ ನಾನಲ್ಲ. ನಾನು ಭ್ರಷ್ಟಾಚಾರದ ಚೇರ್​​ ಪಕ್ಕದಲ್ಲಿ ಕೂರುವುದಿಲ್ಲ, ಆದರೂ ಕೂತಿದ್ದೀನಿ" ಎಂದರು.

ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Last Updated : Dec 22, 2023, 8:16 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.