ETV Bharat / state

ಬಿಜೆಪಿಯಿಂದ ಕೋಟೆನಾಡಿನಲ್ಲಿ ಜನಸೇವಕ ಸಮಾವೇಶ: ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ ಸಚಿವರು

author img

By

Published : Jan 13, 2021, 7:31 AM IST

ಕೋಟೆನಾಡು ಚಿತ್ರದುರ್ಗದಲ್ಲಿ ಜನಸೇವಕ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಮಾವೇಶಕ್ಕೆ ಆಗಮಿಸಿದ್ದ ಸಚಿವರು ಕಾರ್ಯಕ್ರಮದುದ್ದಕ್ಕೂ ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸ್ ನಾಯಕ ವಿರುದ್ಧ ಗುಡುಗಿದರು.

bjp
bjp

ಚಿತ್ರದುರ್ಗ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿಜಯಶಾಲಿಯಾದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನ ಜನಸೇವಕ ಸಮಾವೇಶದಲ್ಲಿ ಅಭಿನಂದಿಸಲಾಯಿತು. ಕೋಟೆನಾಡಿನ ರೆಡ್ಡಿ ಸಮುದಾಯ ಭವನದಲ್ಲಿ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಚಾಲನೆ ನೀಡಿದರು.

ಜನಸೇವಕ ಸಮಾವೇಶಕ್ಕೆ ಜಿಲ್ಲೆಯ ನೂರಾರು ಬಿಜೆಪಿ ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿಜಯಗಳಿಸಿದ ಸದಸ್ಯರು ಆಗಮಿಸಿದ್ದರು. ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಸೇರಿದಂತೆ ಜಿಲ್ಲೆಯ ಬಿಜೆಪಿ ಶಾಸಕರು, ಜಿಲ್ಲೆಯ ಮುಖಂಡರು, ಜಯಗಳಿಸಿದ ಅಭ್ಯರ್ಥಿಗಳನ್ನು ಅಭಿನಂದಿಸಿದರು.

ಬಿಜೆಪಿ ಜನಸೇವಕ ಸಮಾವೇಶ

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ವಿರುದ್ಧ ಸಚಿವರ ಕಿಡಿ:

ಸಮಾವೇಶಕ್ಕೆ ಆಗಮಿಸಿದ್ದ ಸಚಿವರು ಕಾರ್ಯಕ್ರಮದುದ್ದಕ್ಕೂ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಸಿದ್ದರಾಮಯ್ಯ ವಿರುದ್ಧ ಗುಡುಗಿದರು. ಸಚಿವ ಬಸವರಾಜ್ ಬೊಮ್ಮಾಯಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿ, ಕರ್ನಾಟಕಕ್ಕೆ ಭಾಗ್ಯಗಳ ದೌರ್ಭಾಗ್ಯ ಕಾಂಗ್ರೆಸ್ ಸರ್ಕಾರ ಕೊಡುಗೆ ನೀಡಿದೆ ಎಂದರು.

ಕುಡಿಯುವ ನೀರಿನ ಘಟಕ, ಗ್ರಾಮ ವಿಕಾಸ ಯೋಜನೆ ವಿಫಲವಾಗಿವೆ. ಬಿಎಸ್‌ವೈ ನೇತೃತ್ವದ‌ ಸರ್ಕಾರ ಗ್ರಾಮ ವಿಕಾಸಕ್ಕೆ ಚಾಲನೆ ನೀಡಿದೆ. ಡಿಕೆಶಿ ಹಾಗೂ ಸಿದ್ದರಾಮಯ್ಯ ಬೇರೆ ಬೇರೆ ದಿಕ್ಕಿನಲ್ಲಿ ಇದ್ದಾರೆ. ಕಾಂಗ್ರೆಸ್ ಪಕ್ಷ ಅದ್ಯಾವಾಗ ಕುಸಿದು ಬೀಳತ್ತೋ ಗೊತ್ತಿಲ್ಲ. ಕಾಂಗ್ರೆಸ್ ಪಕ್ಷ ಜಿಲ್ಲೆಗೆ ನೀರು ಹರಿಸುತ್ತೇವೆ ಎಂದು ಜನತೆಗೆ ಭರವಸೆಯನ್ನು ಮಾತ್ರ ನೀಡಿತು. ಬಿಎಸ್​ವೈ ಅಧಿಕಾರಕ್ಕೆ ಬರುತ್ತಿದ್ದಂತೆ ಚಿತ್ರದುರ್ಗ ಹಾಗೂ ತುಮಕೂರು ಭಾಗ ಸೇರಿದಂತೆ ಹಲವು ಜಿಲ್ಲೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆ ಮೂಲಕ ನೀರು ಹರಿಸಿದೆ. ಎರಡು ವರ್ಷಗಳಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಸಂಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದರು.

ಬಳಿಕ ಮಾತನಾಡಿದ ಸಚಿವ ಶ್ರೀರಾಮುಲು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು. ಬಿಜೆಪಿ ಸರ್ಕಾರದಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ. ದೇಶದ ಜನರು ರಾಮಮಂದಿರ ನಿರ್ಮಾಣಕ್ಕೆ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ ಎಂದರು.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾದ ಕಾರ್ಯಕರ್ತರು ಗ್ರಾಮದ ಅಭಿವೃದ್ಧಿಗಾಗಿ ಕೆಲಸ ಮಾಡಿದರೆ ಪಕ್ಷ ಗುರುತಿಸಿ ಒಳ್ಳೆಯ ಜವಾಬ್ದಾರಿ ನೀಡುತ್ತದೆ. ಪ್ರಾಮಾಣಿಕ ಪ್ರಯತ್ನದಿಂದ ಅಭಿವೃದ್ಧಿಯತ್ತ ಒತ್ತು ನೀಡಬೇಕು. ಗ್ರಾಮ ಪಂಚಾಯಿತಿ ಸದಸ್ಯರಿಗೆ ಮಾತ್ರ ಚೆಕ್ ಮೇಲೆ ಸಹಿ ಹಾಕುವ ಅಧಿಕಾರವಿದ್ದು, ಪಂಚಾಯಿತಿಯ ಅಭಿವೃದ್ಧಿಕಾರ್ಯಗಳನ್ನು ನೋಡಿಕೊಂಡು ಚಕ್ ಮೇಲೆ ಸಹಿ ಹಾಕುವಂತೆ ಮನವಿ ಮಾಡಿದರು.

ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ದೇಶದಲ್ಲಿ ಕಾಂಗ್ರೆಸ್ ಪಕ್ಷ ಧೂಳಿಪಟವಾಗುತ್ತಿದೆ. ಹಳ್ಳಿಯಿಂದ ದಿಲ್ಲಿವರೆಗೆ ಬಿಜೆಪಿಗೆ ಸಹಸ್ರ ಕಾರ್ಯಕರ್ತರ ಪಡೆಯಿದೆ. ಪಕ್ಷಕ್ಕೆ ನಿಷ್ಠೆಯಾಗಿ ದುಡಿದವರಿಗೆ ಬಿಜೆಪಿ ಪಕ್ಷದಲ್ಲಿ ಉತ್ತಮವಾದ ಸ್ಥಾನಮಾನ ಸಿಗುತ್ತಿದೆ ಪ್ರಾಮಾಣಿಕವಾಗಿ ದುಡಿಯುವ ಪ್ರಯತ್ನವನ್ನು ಸದಸ್ಯರು ಮಾಡಬೇಕು. ಗ್ರಾಮಸ್ಥರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸುವ ನಾಯಕರಾಗಬೇಕು ಎಂದರು.

ಪಕ್ಷಕ್ಕೆ ಪ್ರಾಮಾಣಿಕವಾಗಿ ದುಡಿದ ಅಶೋಕ್ ಗಸ್ತಿ ಹಾಗೂ ಈರಣ್ಣ ಕಡಾಡಿ ಅವರನ್ನು ರಾಜ್ಯಸಭಾ ಸದಸ್ಯರಾಗಿ ಮಾಡಿದ್ದು, ಬಿಜೆಪಿ ಪಕ್ಷ ಮಾತ್ರ. ಅದಕ್ಕಾಗಿ ಎಲ್ಲರೂ ಪ್ರಾಮಾಣಿಕವಾಗಿ ಗ್ರಾಮದ ಅಭಿವೃದ್ಧಿಗಾಗಿ ದುಡಿದರೆ ಮುಂದೊಂದು ದಿನ ಉತ್ತಮ ನಾಯಕರಾಗುವುದರಲ್ಲಿ ಎರಡು ಮಾತಿಲ್ಲ ಎಂದು ಎಂದು ಹೇಳಿದರು.

janasevaka programme by bjp in chitradurga
ಜನಸೇವಕ ಸಮಾವೇಶ

ಸಮಾವೇಶದಲ್ಲಿ ಮಾಸ್ಕ್ ಮಾಯ, ಸಾಮಾಜಿಕ‌ ಅಂತರ ಇನ್ನಷ್ಟು ಹತ್ತಿರ:

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜಯಶಾಲಿಯಾದ ಸದಸ್ಯರು ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ದೈಹಿಕ ಅಂತರ ಪಾಲನೆ ಮಾಡದೇ ಗುಂಪಾಗಿ ಸಮಾವೇಶದಲ್ಲಿ ನಿಂತುಕೊಂಡಿದ್ದು ಕಂಡು ಬಂತು. ಸಮಾವೇಶಕ್ಕೆ ಬಂದ ಹಲವರು ಮಾಸ್ಕ್ ಧರಿಸಿರಲಿಲ್ಲ. ಸಮಾವೇಶದಲ್ಲಿ ಕುಳಿತ ಜನರು ಸಾಮಾಜಿಕ ಅಂತರವನ್ನು ಕೂಡಾ ಮರೆತಿದ್ದರು.

ಸಮಾವೇಶದಲ್ಲಿ ಶಾಸಕ ಜಿಎಚ್ ತಿಪ್ಪಾರೆಡ್ಡಿ, ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಶಾಸಕ ಚಂದ್ರಪ್ಪ, ಸಂಸದ ಶಿವಕುಮಾರ ಉದಾಸಿ, ಶಾಸಕ ಗೂಳಿಹಟ್ಟಿ ಚಂದ್ರಶೇಖರ್, ಸಂಸದ ನಾರಾಯಣಸ್ವಾಮಿ ಸೇರಿದಂತೆ ಜಿಲ್ಲೆಯ ಬಿಜೆಪಿ ಶಾಸಕರು ಹಾಗೂ ಪಕ್ಷದ ಮುಖಂಡರು ಭಾಗಿಯಾಗಿದ್ದರು.

ಚಿತ್ರದುರ್ಗ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿಜಯಶಾಲಿಯಾದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನ ಜನಸೇವಕ ಸಮಾವೇಶದಲ್ಲಿ ಅಭಿನಂದಿಸಲಾಯಿತು. ಕೋಟೆನಾಡಿನ ರೆಡ್ಡಿ ಸಮುದಾಯ ಭವನದಲ್ಲಿ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಚಾಲನೆ ನೀಡಿದರು.

ಜನಸೇವಕ ಸಮಾವೇಶಕ್ಕೆ ಜಿಲ್ಲೆಯ ನೂರಾರು ಬಿಜೆಪಿ ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿಜಯಗಳಿಸಿದ ಸದಸ್ಯರು ಆಗಮಿಸಿದ್ದರು. ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಸೇರಿದಂತೆ ಜಿಲ್ಲೆಯ ಬಿಜೆಪಿ ಶಾಸಕರು, ಜಿಲ್ಲೆಯ ಮುಖಂಡರು, ಜಯಗಳಿಸಿದ ಅಭ್ಯರ್ಥಿಗಳನ್ನು ಅಭಿನಂದಿಸಿದರು.

ಬಿಜೆಪಿ ಜನಸೇವಕ ಸಮಾವೇಶ

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ವಿರುದ್ಧ ಸಚಿವರ ಕಿಡಿ:

ಸಮಾವೇಶಕ್ಕೆ ಆಗಮಿಸಿದ್ದ ಸಚಿವರು ಕಾರ್ಯಕ್ರಮದುದ್ದಕ್ಕೂ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಸಿದ್ದರಾಮಯ್ಯ ವಿರುದ್ಧ ಗುಡುಗಿದರು. ಸಚಿವ ಬಸವರಾಜ್ ಬೊಮ್ಮಾಯಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿ, ಕರ್ನಾಟಕಕ್ಕೆ ಭಾಗ್ಯಗಳ ದೌರ್ಭಾಗ್ಯ ಕಾಂಗ್ರೆಸ್ ಸರ್ಕಾರ ಕೊಡುಗೆ ನೀಡಿದೆ ಎಂದರು.

ಕುಡಿಯುವ ನೀರಿನ ಘಟಕ, ಗ್ರಾಮ ವಿಕಾಸ ಯೋಜನೆ ವಿಫಲವಾಗಿವೆ. ಬಿಎಸ್‌ವೈ ನೇತೃತ್ವದ‌ ಸರ್ಕಾರ ಗ್ರಾಮ ವಿಕಾಸಕ್ಕೆ ಚಾಲನೆ ನೀಡಿದೆ. ಡಿಕೆಶಿ ಹಾಗೂ ಸಿದ್ದರಾಮಯ್ಯ ಬೇರೆ ಬೇರೆ ದಿಕ್ಕಿನಲ್ಲಿ ಇದ್ದಾರೆ. ಕಾಂಗ್ರೆಸ್ ಪಕ್ಷ ಅದ್ಯಾವಾಗ ಕುಸಿದು ಬೀಳತ್ತೋ ಗೊತ್ತಿಲ್ಲ. ಕಾಂಗ್ರೆಸ್ ಪಕ್ಷ ಜಿಲ್ಲೆಗೆ ನೀರು ಹರಿಸುತ್ತೇವೆ ಎಂದು ಜನತೆಗೆ ಭರವಸೆಯನ್ನು ಮಾತ್ರ ನೀಡಿತು. ಬಿಎಸ್​ವೈ ಅಧಿಕಾರಕ್ಕೆ ಬರುತ್ತಿದ್ದಂತೆ ಚಿತ್ರದುರ್ಗ ಹಾಗೂ ತುಮಕೂರು ಭಾಗ ಸೇರಿದಂತೆ ಹಲವು ಜಿಲ್ಲೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆ ಮೂಲಕ ನೀರು ಹರಿಸಿದೆ. ಎರಡು ವರ್ಷಗಳಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಸಂಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದರು.

ಬಳಿಕ ಮಾತನಾಡಿದ ಸಚಿವ ಶ್ರೀರಾಮುಲು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು. ಬಿಜೆಪಿ ಸರ್ಕಾರದಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ. ದೇಶದ ಜನರು ರಾಮಮಂದಿರ ನಿರ್ಮಾಣಕ್ಕೆ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ ಎಂದರು.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾದ ಕಾರ್ಯಕರ್ತರು ಗ್ರಾಮದ ಅಭಿವೃದ್ಧಿಗಾಗಿ ಕೆಲಸ ಮಾಡಿದರೆ ಪಕ್ಷ ಗುರುತಿಸಿ ಒಳ್ಳೆಯ ಜವಾಬ್ದಾರಿ ನೀಡುತ್ತದೆ. ಪ್ರಾಮಾಣಿಕ ಪ್ರಯತ್ನದಿಂದ ಅಭಿವೃದ್ಧಿಯತ್ತ ಒತ್ತು ನೀಡಬೇಕು. ಗ್ರಾಮ ಪಂಚಾಯಿತಿ ಸದಸ್ಯರಿಗೆ ಮಾತ್ರ ಚೆಕ್ ಮೇಲೆ ಸಹಿ ಹಾಕುವ ಅಧಿಕಾರವಿದ್ದು, ಪಂಚಾಯಿತಿಯ ಅಭಿವೃದ್ಧಿಕಾರ್ಯಗಳನ್ನು ನೋಡಿಕೊಂಡು ಚಕ್ ಮೇಲೆ ಸಹಿ ಹಾಕುವಂತೆ ಮನವಿ ಮಾಡಿದರು.

ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ದೇಶದಲ್ಲಿ ಕಾಂಗ್ರೆಸ್ ಪಕ್ಷ ಧೂಳಿಪಟವಾಗುತ್ತಿದೆ. ಹಳ್ಳಿಯಿಂದ ದಿಲ್ಲಿವರೆಗೆ ಬಿಜೆಪಿಗೆ ಸಹಸ್ರ ಕಾರ್ಯಕರ್ತರ ಪಡೆಯಿದೆ. ಪಕ್ಷಕ್ಕೆ ನಿಷ್ಠೆಯಾಗಿ ದುಡಿದವರಿಗೆ ಬಿಜೆಪಿ ಪಕ್ಷದಲ್ಲಿ ಉತ್ತಮವಾದ ಸ್ಥಾನಮಾನ ಸಿಗುತ್ತಿದೆ ಪ್ರಾಮಾಣಿಕವಾಗಿ ದುಡಿಯುವ ಪ್ರಯತ್ನವನ್ನು ಸದಸ್ಯರು ಮಾಡಬೇಕು. ಗ್ರಾಮಸ್ಥರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸುವ ನಾಯಕರಾಗಬೇಕು ಎಂದರು.

ಪಕ್ಷಕ್ಕೆ ಪ್ರಾಮಾಣಿಕವಾಗಿ ದುಡಿದ ಅಶೋಕ್ ಗಸ್ತಿ ಹಾಗೂ ಈರಣ್ಣ ಕಡಾಡಿ ಅವರನ್ನು ರಾಜ್ಯಸಭಾ ಸದಸ್ಯರಾಗಿ ಮಾಡಿದ್ದು, ಬಿಜೆಪಿ ಪಕ್ಷ ಮಾತ್ರ. ಅದಕ್ಕಾಗಿ ಎಲ್ಲರೂ ಪ್ರಾಮಾಣಿಕವಾಗಿ ಗ್ರಾಮದ ಅಭಿವೃದ್ಧಿಗಾಗಿ ದುಡಿದರೆ ಮುಂದೊಂದು ದಿನ ಉತ್ತಮ ನಾಯಕರಾಗುವುದರಲ್ಲಿ ಎರಡು ಮಾತಿಲ್ಲ ಎಂದು ಎಂದು ಹೇಳಿದರು.

janasevaka programme by bjp in chitradurga
ಜನಸೇವಕ ಸಮಾವೇಶ

ಸಮಾವೇಶದಲ್ಲಿ ಮಾಸ್ಕ್ ಮಾಯ, ಸಾಮಾಜಿಕ‌ ಅಂತರ ಇನ್ನಷ್ಟು ಹತ್ತಿರ:

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜಯಶಾಲಿಯಾದ ಸದಸ್ಯರು ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ದೈಹಿಕ ಅಂತರ ಪಾಲನೆ ಮಾಡದೇ ಗುಂಪಾಗಿ ಸಮಾವೇಶದಲ್ಲಿ ನಿಂತುಕೊಂಡಿದ್ದು ಕಂಡು ಬಂತು. ಸಮಾವೇಶಕ್ಕೆ ಬಂದ ಹಲವರು ಮಾಸ್ಕ್ ಧರಿಸಿರಲಿಲ್ಲ. ಸಮಾವೇಶದಲ್ಲಿ ಕುಳಿತ ಜನರು ಸಾಮಾಜಿಕ ಅಂತರವನ್ನು ಕೂಡಾ ಮರೆತಿದ್ದರು.

ಸಮಾವೇಶದಲ್ಲಿ ಶಾಸಕ ಜಿಎಚ್ ತಿಪ್ಪಾರೆಡ್ಡಿ, ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಶಾಸಕ ಚಂದ್ರಪ್ಪ, ಸಂಸದ ಶಿವಕುಮಾರ ಉದಾಸಿ, ಶಾಸಕ ಗೂಳಿಹಟ್ಟಿ ಚಂದ್ರಶೇಖರ್, ಸಂಸದ ನಾರಾಯಣಸ್ವಾಮಿ ಸೇರಿದಂತೆ ಜಿಲ್ಲೆಯ ಬಿಜೆಪಿ ಶಾಸಕರು ಹಾಗೂ ಪಕ್ಷದ ಮುಖಂಡರು ಭಾಗಿಯಾಗಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.