ETV Bharat / state

ಚಿತ್ರದುರ್ಗದಲ್ಲಿ ಜ.30 ರಿಂದ ಫೆ.13 ರವರೆಗೆ ಕುಷ್ಠರೋಗ ಜಾಗೃತಿ ಆಂದೋಲನ

author img

By

Published : Jan 28, 2020, 11:40 PM IST

ಚಿತ್ರದುರ್ಗದಲ್ಲಿ ಕುಷ್ಠರೋಗದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜ. 30 ರಿಂದ ಫೆ. 13 ರವರೆಗೆ ಜಿಲ್ಲೆಯಲ್ಲಿ ಅರಿವು ಆಂದೋಲನ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಕುಷ್ಠರೋಗ ಜಾಗೃತಿ ಆಂದೋಲನ
ಕುಷ್ಠರೋಗ ಜಾಗೃತಿ ಆಂದೋಲನ

ಚಿತ್ರದುರ್ಗ: ಕುಷ್ಠರೋಗದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹಾಗೂ ಕುಷ್ಠರೋಗ ಪತ್ತೆಗೆ ಅರಿವು ಆಂದೋಲನ ಆಯೋಜಿಸಲಾಗಿದ್ದು, ಸಂಬಂಧಪಟ್ಟ ಇಲಾಖೆಗಳು ತಮ್ಮ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಸೂಚನೆ ನೀಡಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಕುಷ್ಠರೋಗ ಪತ್ತೆಗಾಗಿ ಕೈಗೊಂಡ ವಿಶೇಷ ಸಮೀಕ್ಷೆ ಕಾರ್ಯಕ್ರಮದಲ್ಲಿ ಹೊಸದಾಗಿ ಒಟ್ಟು 32 ಕುಷ್ಠರೋಗ ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ.

ಈ ಪೈಕಿ 10 ಪ್ರಕರಣಗಳು ಪ್ರಾರಂಭಿಕ ಹಂತದ್ದಾಗಿದ್ದು, ಉಳಿದಂತೆ 22 ಪ್ರಕರಣಗಳು ನಂತರದ ಹಂತದ್ದಾಗಿದೆ. ಅಲ್ಲದೆ ಜಿಲ್ಲೆಯಲ್ಲಿ ಈಗಾಗಲೇ ಚಿಕಿತ್ಸೆ ಪಡೆಯುತ್ತಿರುವ ಹಳೆಯ 45 ಕುಷ್ಠರೋಗ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 77 ಕುಷ್ಠರೋಗ ಪ್ರಕರಣಗಳು ದಾಖಲಾದಂತಾಗಿದೆ. ಪ್ರಾರಂಭಿಕ ಹಂತದಲ್ಲಿಯೇ ಕುಷ್ಠರೋಗವನ್ನು ಪತ್ತೆ ಮಾಡಿದಲ್ಲಿ ಬಹುಬೇಗ ಗುಣಪಡಿಸಬಹುದಾಗಿದೆ ಎಂದು ತಿಳಿಸಿದರು.

ಚಿತ್ರದುರ್ಗ: ಕುಷ್ಠರೋಗದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹಾಗೂ ಕುಷ್ಠರೋಗ ಪತ್ತೆಗೆ ಅರಿವು ಆಂದೋಲನ ಆಯೋಜಿಸಲಾಗಿದ್ದು, ಸಂಬಂಧಪಟ್ಟ ಇಲಾಖೆಗಳು ತಮ್ಮ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಸೂಚನೆ ನೀಡಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಕುಷ್ಠರೋಗ ಪತ್ತೆಗಾಗಿ ಕೈಗೊಂಡ ವಿಶೇಷ ಸಮೀಕ್ಷೆ ಕಾರ್ಯಕ್ರಮದಲ್ಲಿ ಹೊಸದಾಗಿ ಒಟ್ಟು 32 ಕುಷ್ಠರೋಗ ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ.

ಈ ಪೈಕಿ 10 ಪ್ರಕರಣಗಳು ಪ್ರಾರಂಭಿಕ ಹಂತದ್ದಾಗಿದ್ದು, ಉಳಿದಂತೆ 22 ಪ್ರಕರಣಗಳು ನಂತರದ ಹಂತದ್ದಾಗಿದೆ. ಅಲ್ಲದೆ ಜಿಲ್ಲೆಯಲ್ಲಿ ಈಗಾಗಲೇ ಚಿಕಿತ್ಸೆ ಪಡೆಯುತ್ತಿರುವ ಹಳೆಯ 45 ಕುಷ್ಠರೋಗ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 77 ಕುಷ್ಠರೋಗ ಪ್ರಕರಣಗಳು ದಾಖಲಾದಂತಾಗಿದೆ. ಪ್ರಾರಂಭಿಕ ಹಂತದಲ್ಲಿಯೇ ಕುಷ್ಠರೋಗವನ್ನು ಪತ್ತೆ ಮಾಡಿದಲ್ಲಿ ಬಹುಬೇಗ ಗುಣಪಡಿಸಬಹುದಾಗಿದೆ ಎಂದು ತಿಳಿಸಿದರು.

Intro:ಚಿತ್ರದುರ್ಗ ಜಿಲ್ಲೆಯಲ್ಲಿ ಕುಷ್ಠರೋಗಿಗಳಿದ್ದಾರೆ ಗೊತ್ತಾ....

ಆ್ಯಂಕರ್:- ಕುಷ್ಠರೋಗವನ್ನು ಪ್ರಾರಂಭಿಕ ಹಂತದಲ್ಲಿ ಪತ್ತೆ ಮಾಡಿದಲ್ಲಿ, ಬೇಗನೆ ಗುಣಪಡಿಸಲು ಸಾಧ್ಯವಿರುವುದರಿಂದ, ಈ ದಿಸೆಯಲ್ಲಿ ಕುಷ್ಠರೋಗ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜ. 30 ರಿಂದ ಫೆ. 13 ರವರೆಗೆ ಜಿಲ್ಲೆಯಲ್ಲಿ ಸ್ಪರ್ಶ್ ಕುಷ್ಠರೋಗ ಪತ್ತೆಗೆ ಸಮೀಕ್ಷೆ ಹಾಗೂ ಅರಿವು ಆಂದೋಲನ ಆಯೋಜಿಸಲಾಗಿದ್ದು, ಸಂಬಂಧಪಟ್ಟ ಇಲಾಖೆಗಳು ತಮ್ಮ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ ಆಯೋಜಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಕುಷ್ಠರೋಗ ಪತ್ತೆಗಾಗಿ ಕೈಗೊಂಡ ವಿಶೇಷ ಸಮೀಕ್ಷೆ ಕಾರ್ಯಕ್ರಮದಲ್ಲಿ ಹೊಸದಾಗಿ ಒಟ್ಟು 32 ಕುಷ್ಠರೋಗ ಪ್ರಕರಣಗಳನ್ನು ಪತ್ತೆ ಮಾಡಲಾಗಿತ್ತು.  ಈ ಪೈಕಿ 10 ಪ್ರಕರಣಗಳು ಪ್ರಾರಂಭಿಕ ಹಂತದ್ದಾಗಿದ್ದು, ಉಳಿದಂತೆ 22 ಪ್ರಕರಣಗಳು ನಂತರದ ಹಂತದ್ದಾಗಿದೆ. ಅಲ್ಲದೆ ಜಿಲ್ಲೆಯಲ್ಲಿ ಈಗಾಗಲೆ ಚಿಕಿತ್ಸೆ ಪಡೆಯುತ್ತಿರುವ ಹಳೆಯ 45 ಕುಷ್ಠರೋಗ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 77 ಕುಷ್ಠರೋಗ ಪ್ರಕರಣಗಳು ದಾಖಲಾದಂತಾಗಿದೆ. ಪ್ರಾರಂಭಿಕ ಹಂತದಲ್ಲಿಯೇ ಕುಷ್ಠರೋಗವನ್ನು ಪತ್ತೆ ಮಾಡಿದಲ್ಲಿ ಬಹುಬೇಗ ಗುಣಪಡಿಸಬಹುದಾಗಿದೆ.  

ಫ್ಲೋ....Body:ಕುಷ್ಟೋಗ ಪತ್ತೆConclusion:ಎವಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.