ETV Bharat / state

ಸಚಿವ ಪ್ರಭು ಚೌಹಾಣ್ ಜಾತಿ ಪ್ರಮಾಣ ಪತ್ರ ನಕಲಿ.. ಮಾಜಿ ಸಚಿವ ಹೆಚ್‌ ಆಂಜನೇಯ ಆರೋಪ

author img

By

Published : Sep 23, 2020, 4:24 PM IST

ಜಿಲ್ಲಾಧಿಕಾರಿ ಮಹದೇವ ಎಂಬುವರು ಸಚಿವ ಪ್ರಭು ಚೌಹಣ್ ಅವರನ್ನು ವಿಚಾರಣೆಗೊಳಗಾಗುವಂತೆ ನೋಟಿಸ್ ನೀಡಿದ್ದರು. ಹಾಗಾಗಿ, ಸರ್ಕಾರದ ಮೇಲೆ ಪ್ರಭಾವ ಬೀರಿ ಜಿಲ್ಲಾಧಿಕಾರಿಯನ್ನೇ ಸಚಿವ ಚೌಹಾಣ್‌ ವರ್ಗಾವಣೆ ಮಾಡಿದ್ದಾರೆ..

Minister Prabhu Chauhan's caste certificate is fake: former minister Anjaneya accusation
ಸಚಿವ ಪ್ರಭು ಚೌಹಾಣ್ ಜಾತಿ ಪ್ರಮಾಣ ಪತ್ರ ನಕಲಿ: ಮಾಜಿ ಸಚಿವ ಹೆಚ್. ಆಂಜನೇಯ ಆರೋಪ

ಚಿತ್ರದುರ್ಗ : ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಔರಾದ್ ಮತಕ್ಷೇತ್ರದಿಂದ ಸತತ ಮೂರು ಬಾರಿ ಗೆದ್ದಿದ್ದಾರೆ ಎಂದು ಮಾಜಿ ಸಚಿವ ಹೆಚ್ ಆಂಜನೇಯ ಗಂಭೀರ ಆರೋಪ ಮಾಡಿದ್ದಾರೆ.

ಸಚಿವ ಪ್ರಭು ಚೌಹಾಣ್‌ ವಿರುದ್ಧ ಮಾಜಿ ಸಚಿವ ಹೆಚ್ ಆಂಜನೇಯ ಆರೋಪ

ನಗರದ ಪತ್ರಿಕಾ ಭವನದಲ್ಲಿ ಮಾತನಾಡಿದ ಅವರು, ಸಚಿವ ಪ್ರಭು ಚೌಹಾಣ್ ಮೂಲತಃ ಮಹಾರಾಷ್ಟ್ರದವರು. ಅಲ್ಲಿ ಲಂಬಾಣಿ ಪರಿಶಿಷ್ಟ ಪಂಗಡಕ್ಕೆ ಸೇರಿದವರು ಔರಾದ್ ಕ್ಷೇತ್ರಕ್ಕೆ ಬಂದು ಪರಿಶಿಷ್ಟ ಜಾತಿಯೊಳಗೆ ಬರುವ ಲಂಬಾಣಿ ಸಮುದಾಯಕ್ಕೆ ಸೇರಿದವನೆಂದು ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಮೂಲ ಲಂಬಾಣಿಗರಿಗೆ ಮೋಸ ಮಾಡಿದ್ದಾರೆ ಎಂದು ಆರೋಪ ಮಾಡಿದರು.

ಔರಾದ್ ಕ್ಷೇತ್ರದ ಪರಾಜಿತ ಕೈ ಅಭ್ಯರ್ಥಿ ವಿಜಯ್ ಕುಮಾರ್ ಇದರ ಬಗ್ಗೆ ಧ್ವನಿ ಎತ್ತಿ ಕಾನೂನು ಹೋರಾಟ ಮಾಡಿದ ಬಳಿಕ ಹೈಕೋರ್ಟ್, ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ತನಿಖೆ ನಡೆಸುವಂತೆ ನಿರ್ದೇಶನ ಜಾರಿಯಾಯಿತು. ಈ ಹಿನ್ನೆಲೆ ಜಿಲ್ಲಾಧಿಕಾರಿ ಮಹದೇವ ಎಂಬುವರು ಸಚಿವ ಪ್ರಭು ಚೌಹಣ್ ಅವರನ್ನು ವಿಚಾರಣೆಗೊಳಗಾಗುವಂತೆ ನೋಟಿಸ್ ನೀಡಿದ್ದರು. ಹಾಗಾಗಿ, ಸರ್ಕಾರದ ಮೇಲೆ ಪ್ರಭಾವ ಬೀರಿ ಜಿಲ್ಲಾಧಿಕಾರಿಯನ್ನೇ ವರ್ಗಾವಣೆ ಮಾಡಿದ್ದಾರೆಂದು ಆರೋಪಿಸಿದರು.

ಇದೀಗ ಮೂರ್ನಾಲ್ಕು ತಿಂಗಳ ಹಿಂದೆ ಬಂದಿರುವ ನೂತನ ಜಿಲ್ಲಾಧಿಕಾರಿ ನೋಟಿಸ್ ಕೊಡುವ ಗೋಜಿಗೆ ಹೋಗಿಲ್ಲ. ಇದರಿಂದ ಸಂಪುಟದಲ್ಲಿರುವ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಮೂಲತಃ ಮಹಾರಾಷ್ಟ್ರದವರಾಗಿದ್ದರಿಂದ ನಕಲಿ ಜಾತಿ ಪ್ರಮಾಣ ಪತ್ರ ಸೃಷ್ಟಿಸಿ ಸಚಿವರಾಗಿದ್ದಾರೆ. ಕೂಡಲೇ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಸಿಎಂ ಬಿಎಸ್​ವೈ ಅವರಿಗೆ ಮನವಿ ಮಾಡಿದರು.

ಚಿತ್ರದುರ್ಗ : ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಔರಾದ್ ಮತಕ್ಷೇತ್ರದಿಂದ ಸತತ ಮೂರು ಬಾರಿ ಗೆದ್ದಿದ್ದಾರೆ ಎಂದು ಮಾಜಿ ಸಚಿವ ಹೆಚ್ ಆಂಜನೇಯ ಗಂಭೀರ ಆರೋಪ ಮಾಡಿದ್ದಾರೆ.

ಸಚಿವ ಪ್ರಭು ಚೌಹಾಣ್‌ ವಿರುದ್ಧ ಮಾಜಿ ಸಚಿವ ಹೆಚ್ ಆಂಜನೇಯ ಆರೋಪ

ನಗರದ ಪತ್ರಿಕಾ ಭವನದಲ್ಲಿ ಮಾತನಾಡಿದ ಅವರು, ಸಚಿವ ಪ್ರಭು ಚೌಹಾಣ್ ಮೂಲತಃ ಮಹಾರಾಷ್ಟ್ರದವರು. ಅಲ್ಲಿ ಲಂಬಾಣಿ ಪರಿಶಿಷ್ಟ ಪಂಗಡಕ್ಕೆ ಸೇರಿದವರು ಔರಾದ್ ಕ್ಷೇತ್ರಕ್ಕೆ ಬಂದು ಪರಿಶಿಷ್ಟ ಜಾತಿಯೊಳಗೆ ಬರುವ ಲಂಬಾಣಿ ಸಮುದಾಯಕ್ಕೆ ಸೇರಿದವನೆಂದು ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಮೂಲ ಲಂಬಾಣಿಗರಿಗೆ ಮೋಸ ಮಾಡಿದ್ದಾರೆ ಎಂದು ಆರೋಪ ಮಾಡಿದರು.

ಔರಾದ್ ಕ್ಷೇತ್ರದ ಪರಾಜಿತ ಕೈ ಅಭ್ಯರ್ಥಿ ವಿಜಯ್ ಕುಮಾರ್ ಇದರ ಬಗ್ಗೆ ಧ್ವನಿ ಎತ್ತಿ ಕಾನೂನು ಹೋರಾಟ ಮಾಡಿದ ಬಳಿಕ ಹೈಕೋರ್ಟ್, ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ತನಿಖೆ ನಡೆಸುವಂತೆ ನಿರ್ದೇಶನ ಜಾರಿಯಾಯಿತು. ಈ ಹಿನ್ನೆಲೆ ಜಿಲ್ಲಾಧಿಕಾರಿ ಮಹದೇವ ಎಂಬುವರು ಸಚಿವ ಪ್ರಭು ಚೌಹಣ್ ಅವರನ್ನು ವಿಚಾರಣೆಗೊಳಗಾಗುವಂತೆ ನೋಟಿಸ್ ನೀಡಿದ್ದರು. ಹಾಗಾಗಿ, ಸರ್ಕಾರದ ಮೇಲೆ ಪ್ರಭಾವ ಬೀರಿ ಜಿಲ್ಲಾಧಿಕಾರಿಯನ್ನೇ ವರ್ಗಾವಣೆ ಮಾಡಿದ್ದಾರೆಂದು ಆರೋಪಿಸಿದರು.

ಇದೀಗ ಮೂರ್ನಾಲ್ಕು ತಿಂಗಳ ಹಿಂದೆ ಬಂದಿರುವ ನೂತನ ಜಿಲ್ಲಾಧಿಕಾರಿ ನೋಟಿಸ್ ಕೊಡುವ ಗೋಜಿಗೆ ಹೋಗಿಲ್ಲ. ಇದರಿಂದ ಸಂಪುಟದಲ್ಲಿರುವ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಮೂಲತಃ ಮಹಾರಾಷ್ಟ್ರದವರಾಗಿದ್ದರಿಂದ ನಕಲಿ ಜಾತಿ ಪ್ರಮಾಣ ಪತ್ರ ಸೃಷ್ಟಿಸಿ ಸಚಿವರಾಗಿದ್ದಾರೆ. ಕೂಡಲೇ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಸಿಎಂ ಬಿಎಸ್​ವೈ ಅವರಿಗೆ ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.