ಚಿತ್ರದುರ್ಗ: ಜಿಲ್ಲೆಯ ಪರಶುರಾಂಪುರ ಗ್ರಾಮದಲ್ಲಿ ನಡೆದಿದ್ದ ಅದ್ಧೂರಿ ಮೆರವಣಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಲಾಕ್ಡೌನ್ ನಿಯಮಾವಳಿಗಳನ್ನು ಗಾಳಿಗೆ ತೂರಿ ಜನರ ಆಕ್ರೋಶಕ್ಕೆ ಕಾರಣವಾಗಿದ್ದ ಆರೋಗ್ಯ ಸಚಿವ ಶ್ರೀ ರಾಮುಲು ಮತ್ತೆ ಉದ್ಧಟತನ ಮೆರೆದಿದ್ದಾರೆ.
ಸ್ವಕ್ಷೇತ್ರ ಮೊಳಕಾಲ್ಮೂರಿನ ಪ್ರವಾಸದಲ್ಲಿ ಬ್ಯುಸಿಯಾಗಿರುವ ಆರೋಗ್ಯ ಸಚಿವ ಶ್ರೀ ರಾಮುಲು ಮತ್ತೆ ಲಾಕ್ಡೌನ್ ನಿಯಮಾವಳಿಗಳನ್ನು ಪಾಲಿಸದೇ ಇರುವುದು ಕಂಡುಬಂದಿದೆ. ಮೊಳಕಾಲ್ಮೂರು ತಾಲೂಕಿನ ಮೇಗಳಹಟ್ಟಿಯಲ್ಲಿ ರಸ್ತೆ ಡಾಂಬರೀಕರಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಅವರು ಗುದ್ದಲಿ ಪೂಜೆ ವೇಳೆ ಸಾಮಾಜಿಕ ಅಂತರ ಗಾಳಿಗೆ ತೂರಿದ್ದಾರೆ.
ಪದೇ ಪದೆ ಸಾಮಾಜಿಕ ಅಂತರ ಕಾಪಾಡದೆ, ಜನಸಾಮಾನ್ಯರಿಗೆ ಸಾಮಾಜಿಕ ಅಂತರವನ್ನು ಕಾಪಾಡಿ ಎಂದು ಪಾಠ ಮಾಡುವ ಸಚಿವರು ತಾವೇ ನಿಯಮ ಪಾಲಿಸದೇ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಸಚಿವರನ್ನು ನೋಡಲು ಕಾರ್ಯಕರ್ತರು ನೂಕುನುಗ್ಗಲು ಉಂಟಾಗಿದ್ದು, ಸಾಮಾಜಿಕ ಅಂತರವೇ ಮಾಯವಾಗಿತ್ತು.