ETV Bharat / state

ನಮೋ ಹೇಳಿದ ಸಪ್ತ ಸೂತ್ರ ಎಲ್ಲರೂ ಪಾಲಿಸಬೇಕು: ಸಚಿವ ಶ್ರೀರಾಮುಲು - ಕೊರೊನಾ

ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿತ್ತು. ಆದರೆ ಇದೀಗ 12ಕ್ಕೆ ಇಳಿದಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.

ಶ್ರೀರಾಮುಲು
Sriramulu
author img

By

Published : Apr 14, 2020, 3:02 PM IST

ಚಿತ್ರದುರ್ಗ: ಕೋವಿಡ್​-19 ವೈರಸ್‌ಗೆ‌ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಆರೋಗ್ಯ ಸಚಿವ ಶ್ರೀರಾಮುಲು ಅಧಿಕಾರಿಗೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು

ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೆ 247 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈಗಾಗಲೇ 8 ಜನ ಸಾವಿಗೀಡಾಗಿದ್ದರೆ, 60 ಜನ ಗುಣಮುಖರಾಗಿದ್ದಾರೆ. ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿತ್ತು. ಆದರೆ ಇದೀಗ 12ಕ್ಕೆ ಇಳಿದಿದೆ ಎಂದು‌ ಮಾಹಿತಿ ನೀಡಿದರು.

ಲಾಕ್‌ಡೌನ್‌ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮೇ 3ರವರೆಗೆ ಲಾಕ್​​ಡೌನ್ ಮುಂದುವರೆಯಲಿದ್ದು, ಪ್ರಧಾನಿ ಮೋದಿ ಸೂಚಿಸಿದ ಸಪ್ತ ಸೂತ್ರ ಎಲ್ಲರೂ ಪಾಲಿಸಬೇಕು. ಹಸಿವಿನಿಂದ ಯಾರೂ ಬಳಲಬಾರದು. ಉಳ್ಳವರು ದಾನ ಮಾಡಿ, ಸರ್ಕಾರದಿಂದ ಬಡವರು, ನಿರ್ಗತಿಕರಿಗೆ ಆಹಾರದ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು. ವೈದ್ಯರು ಹೊರತುಪಡಿಸಿ ಸಾರ್ವಜನಿಕರು N-95 ಮಾಸ್ಕ್ ಧರಿಸುವ ಅಗತ್ಯವಿಲ್ಲ. ಅದರ ಬದಲಿಗೆ ಸಾರ್ವಜನಿಕರು ಬಟ್ಟೆಗಳಿಂದ ತಯಾರಿಸಿದ ಮಾಸ್ಕ್ ಧರಿಸಿ ಎಂದು ಸಲಹೆ‌ ನೀಡಿದರು.

ಚಿತ್ರದುರ್ಗ: ಕೋವಿಡ್​-19 ವೈರಸ್‌ಗೆ‌ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಆರೋಗ್ಯ ಸಚಿವ ಶ್ರೀರಾಮುಲು ಅಧಿಕಾರಿಗೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು

ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೆ 247 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈಗಾಗಲೇ 8 ಜನ ಸಾವಿಗೀಡಾಗಿದ್ದರೆ, 60 ಜನ ಗುಣಮುಖರಾಗಿದ್ದಾರೆ. ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿತ್ತು. ಆದರೆ ಇದೀಗ 12ಕ್ಕೆ ಇಳಿದಿದೆ ಎಂದು‌ ಮಾಹಿತಿ ನೀಡಿದರು.

ಲಾಕ್‌ಡೌನ್‌ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮೇ 3ರವರೆಗೆ ಲಾಕ್​​ಡೌನ್ ಮುಂದುವರೆಯಲಿದ್ದು, ಪ್ರಧಾನಿ ಮೋದಿ ಸೂಚಿಸಿದ ಸಪ್ತ ಸೂತ್ರ ಎಲ್ಲರೂ ಪಾಲಿಸಬೇಕು. ಹಸಿವಿನಿಂದ ಯಾರೂ ಬಳಲಬಾರದು. ಉಳ್ಳವರು ದಾನ ಮಾಡಿ, ಸರ್ಕಾರದಿಂದ ಬಡವರು, ನಿರ್ಗತಿಕರಿಗೆ ಆಹಾರದ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು. ವೈದ್ಯರು ಹೊರತುಪಡಿಸಿ ಸಾರ್ವಜನಿಕರು N-95 ಮಾಸ್ಕ್ ಧರಿಸುವ ಅಗತ್ಯವಿಲ್ಲ. ಅದರ ಬದಲಿಗೆ ಸಾರ್ವಜನಿಕರು ಬಟ್ಟೆಗಳಿಂದ ತಯಾರಿಸಿದ ಮಾಸ್ಕ್ ಧರಿಸಿ ಎಂದು ಸಲಹೆ‌ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.