ETV Bharat / state

ಸಿದ್ದರಾಮಯ್ಯ ಹಿಂದುಳಿದ ಸಮಾಜದ ದೊಡ್ಡ ನಾಯಕರು..ಅವರ ಬಗ್ಗೆ ಗೌರವವಿದೆ: ಸಚಿವ ಶ್ರೀರಾಮುಲು

ನಾವೆಲ್ಲಾ ಹಿಂದುಳಿದ ಸಮಾಜದಿಂದ ಬಂದವರು, ಮಾಜಿ ಸಿಎಂ ಸಿದ್ದರಾಮಯ್ಯ ಹಿಂದುಳಿದ ಸಮಾಜದ ದೊಡ್ಡ ನಾಯಕರು. ಅನೇಕ ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿರುವಂತಹ ವ್ಯಕ್ತಿ- ಶ್ರೀರಾಮುಲು

author img

By

Published : Jul 13, 2021, 8:45 PM IST

Minister Sriramulu
ಸಚಿವ ಶ್ರೀರಾಮುಲು

ಚಿತ್ರದುರ್ಗ: ಸಿದ್ದರಾಮಯ್ಯ ಅವರು ಕೂಡ ದೊಡ್ಡನಾಯಕರಿದ್ದಾರೆ. ಅನೇಕ ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದವರು ಎಂದು ಬಾದಾಮಿಯಲ್ಲಿ ಸಮಾಜಕಲ್ಯಾಣ ಸಚಿವ ಶ್ರೀರಾಮುಲು ಹೇಳಿದ್ದಾರೆ. ಬಾದಾಮಿ ಕ್ಷೇತ್ರದಿಂದ ಮತ್ತೆ ಮಾಜಿ ಸಿಎಂ ಸಿದ್ಧರಾಮಯ್ಯ ಸ್ಪರ್ಧೆ ಮಾಡಲಿ, ಆದ್ರೆ ನಾನು ಸ್ಪರ್ಧೆ ಮಾಡುವ ವಿಚಾರ ಆಯಾ ಸಂದರ್ಭದಲ್ಲಿ ಪಕ್ಷ ನಿರ್ಧರಿಸಲಿದೆ ಎಂದರು.

ಸಿದ್ದರಾಮಯ್ಯ ಕುರಿತು ಶ್ರೀರಾಮುಲು ಪ್ರತಿಕ್ರಿಯೆ

ಸಾಮಾನ್ಯವಾಗಿ ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದು ಸಿಎಂ ಅಭ್ಯರ್ಥಿಗಳು. ಇಲ್ಲವೇ ನೆಹರು ಕುಟುಂಬದವರು, ಇಲ್ಲ ದೊಡ್ಡ ದೊಡ್ಡ ವ್ಯಕ್ತಿಗಳು. ಆದ್ರೆ ಭಾರತೀಯ ಜನತಾ ಪಾರ್ಟಿ ಒಬ್ಬ ಸಾಮಾನ್ಯ ಕಾರ್ಯಕರ್ತನಿಗೂ ಈ ಅವಕಾಶ ನೀಡಿತು. ಆದರೆ ಬಾದಾಮಿಯ ಜನತೆ ಕಡಿಮೆ ಅಂತರಗಳಿಂದ ಸೋಲಿಸಿದರು. ಸಿದ್ದರಾಮಯ್ಯ ಅವರ ನಸೀಬು ಚೆನ್ನಾಗಿತ್ತು ಅವರ ಕ್ಷೇತ್ರದಲ್ಲಿ ಸೋತು ಬಾದಾಮಿಯಲ್ಲಿ ಗೆದ್ದರು ಎಂದಿದ್ದಾರೆ.

ನಾವೆಲ್ಲಾ ಹಿಂದುಳಿದ ಸಮಾಜದಿಂದ ಬಂದವರು, ಮಾಜಿ ಸಿಎಂ ಸಿದ್ದರಾಮಯ್ಯ ಹಿಂದುಳಿದ ಸಮಾಜದ ದೊಡ್ಡ ನಾಯಕರು. ಅನೇಕ ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿರುವಂತಹ ವ್ಯಕ್ತಿ. ಅಂಥವರಿಗೆ ಗೌರವ ಕೊಡುವುದು ನಮ್ಮ ಸಂಪ್ರದಾಯ. ನಾನು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಗೌರವಿಸುತ್ತೇನೆ. ರಾಜಕಾರಣ ಅಂತ ಬಂದ ಸಮಯದಲ್ಲಿ ವಿರೋಧಿಸುತ್ತೇನೆ, ಬೇರೆ ಪ್ರಶ್ನೆ ಇಲ್ಲ ರಾಜಕಾರಣದಲ್ಲಿ ನಮ್ಮ ಪಕ್ಷ ಸಿದ್ಧಾಂತ ನಮ್ಮದು, ಅವರ ಪಕ್ಷ ಸಿದ್ಧಾಂತ ಅವರದ್ದು ವ್ಯಕ್ತಿತ್ವ ಮತ್ತು ಹಿಂದುಳಿದ ಸಮಾಜದ ವಿಚಾರದಲ್ಲಿ ಗೌರವ ನೀಡುತ್ತೇವೆ ಎಂದರು.

ಇದನ್ನೂ ಓದಿ: ಬಸವರಾಜ್ ಹೊರಟ್ಟಿ ಆರ್​ಎಸ್​ಎಸ್​​ 'ಕೇಶವ ಕುಂಜ' ಭೇಟಿ ಸ್ವಾಗತಾರ್ಹ : ಸಚಿವ ಜಗದೀಶ್ ಶೆಟ್ಟರ್

ಚಿತ್ರದುರ್ಗ: ಸಿದ್ದರಾಮಯ್ಯ ಅವರು ಕೂಡ ದೊಡ್ಡನಾಯಕರಿದ್ದಾರೆ. ಅನೇಕ ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದವರು ಎಂದು ಬಾದಾಮಿಯಲ್ಲಿ ಸಮಾಜಕಲ್ಯಾಣ ಸಚಿವ ಶ್ರೀರಾಮುಲು ಹೇಳಿದ್ದಾರೆ. ಬಾದಾಮಿ ಕ್ಷೇತ್ರದಿಂದ ಮತ್ತೆ ಮಾಜಿ ಸಿಎಂ ಸಿದ್ಧರಾಮಯ್ಯ ಸ್ಪರ್ಧೆ ಮಾಡಲಿ, ಆದ್ರೆ ನಾನು ಸ್ಪರ್ಧೆ ಮಾಡುವ ವಿಚಾರ ಆಯಾ ಸಂದರ್ಭದಲ್ಲಿ ಪಕ್ಷ ನಿರ್ಧರಿಸಲಿದೆ ಎಂದರು.

ಸಿದ್ದರಾಮಯ್ಯ ಕುರಿತು ಶ್ರೀರಾಮುಲು ಪ್ರತಿಕ್ರಿಯೆ

ಸಾಮಾನ್ಯವಾಗಿ ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದು ಸಿಎಂ ಅಭ್ಯರ್ಥಿಗಳು. ಇಲ್ಲವೇ ನೆಹರು ಕುಟುಂಬದವರು, ಇಲ್ಲ ದೊಡ್ಡ ದೊಡ್ಡ ವ್ಯಕ್ತಿಗಳು. ಆದ್ರೆ ಭಾರತೀಯ ಜನತಾ ಪಾರ್ಟಿ ಒಬ್ಬ ಸಾಮಾನ್ಯ ಕಾರ್ಯಕರ್ತನಿಗೂ ಈ ಅವಕಾಶ ನೀಡಿತು. ಆದರೆ ಬಾದಾಮಿಯ ಜನತೆ ಕಡಿಮೆ ಅಂತರಗಳಿಂದ ಸೋಲಿಸಿದರು. ಸಿದ್ದರಾಮಯ್ಯ ಅವರ ನಸೀಬು ಚೆನ್ನಾಗಿತ್ತು ಅವರ ಕ್ಷೇತ್ರದಲ್ಲಿ ಸೋತು ಬಾದಾಮಿಯಲ್ಲಿ ಗೆದ್ದರು ಎಂದಿದ್ದಾರೆ.

ನಾವೆಲ್ಲಾ ಹಿಂದುಳಿದ ಸಮಾಜದಿಂದ ಬಂದವರು, ಮಾಜಿ ಸಿಎಂ ಸಿದ್ದರಾಮಯ್ಯ ಹಿಂದುಳಿದ ಸಮಾಜದ ದೊಡ್ಡ ನಾಯಕರು. ಅನೇಕ ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿರುವಂತಹ ವ್ಯಕ್ತಿ. ಅಂಥವರಿಗೆ ಗೌರವ ಕೊಡುವುದು ನಮ್ಮ ಸಂಪ್ರದಾಯ. ನಾನು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಗೌರವಿಸುತ್ತೇನೆ. ರಾಜಕಾರಣ ಅಂತ ಬಂದ ಸಮಯದಲ್ಲಿ ವಿರೋಧಿಸುತ್ತೇನೆ, ಬೇರೆ ಪ್ರಶ್ನೆ ಇಲ್ಲ ರಾಜಕಾರಣದಲ್ಲಿ ನಮ್ಮ ಪಕ್ಷ ಸಿದ್ಧಾಂತ ನಮ್ಮದು, ಅವರ ಪಕ್ಷ ಸಿದ್ಧಾಂತ ಅವರದ್ದು ವ್ಯಕ್ತಿತ್ವ ಮತ್ತು ಹಿಂದುಳಿದ ಸಮಾಜದ ವಿಚಾರದಲ್ಲಿ ಗೌರವ ನೀಡುತ್ತೇವೆ ಎಂದರು.

ಇದನ್ನೂ ಓದಿ: ಬಸವರಾಜ್ ಹೊರಟ್ಟಿ ಆರ್​ಎಸ್​ಎಸ್​​ 'ಕೇಶವ ಕುಂಜ' ಭೇಟಿ ಸ್ವಾಗತಾರ್ಹ : ಸಚಿವ ಜಗದೀಶ್ ಶೆಟ್ಟರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.