ಚಿತ್ರದುರ್ಗ : ಒಕ್ಕಣೆ ಮಾಡಿಟ್ಟಿದ್ದ ಮೆಕ್ಕೆಜೋಳದ ರಾಶಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ತಾಲೂಕಿನ ಕೋನಬೇವು ಗ್ರಾಮದಲ್ಲಿ ನಡೆದಿದೆ.
ಕೋನಬೇವು ಗ್ರಾಮದ ರೈತ ಕೆ ಟಿ ಮಲ್ಲಿಕಾರ್ಜುನ ಎಂಬುವರು ಒಕ್ಕಣೆ ಮಾಡಿಟ್ಟಿದ್ದ ಮೆಕ್ಕೆಜೋಳದ ರಾಶಿಗೆ ಬೆಂಕಿ ಹಚ್ಚಲಾಗಿದೆ. ಪರಿಣಾಮ ಅಂದಾಜು 4 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಮೆಕ್ಕೆಜೋಳ, 2 ಮೇವಿನ ಬಣವೆಗಳು ಬೆಂಕಿಗಾಹುತಿಯಾಗಿವೆ. ಅಲ್ಲದೆ, 3 ಜಾನುವಾರುಗಳು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಓದಿ : ಆಕಸ್ಮಿಕ ಬೆಂಕಿ : 18 ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳ ಬೆಂಕಿಗಾಹುತಿ
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ತುರುವನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.