ಚಿತ್ರದುರ್ಗ: ವಿಷಪೂರಿತ ಬ್ಯಾಲದ ಕಾಯಿ ತಿಂದು 30ಕ್ಕೂ ಹೆಚ್ಚು ಮೇಕೆಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಎರ್ರೇನಹಳ್ಳಿಯಲ್ಲಿ ನಡೆದಿದೆ.
ಇದೇ ಗ್ರಾಮದ ಕುಮಾರಸ್ವಾಮಿ ಎಂಬುವವರಿಗೆ ಸೇರಿದ ಮೇಕೆಗಳಾಗಿದ್ದು, ಸುಮಾರು 1 ಲಕ್ಷಕ್ಕೂ ಅಧಿಕ ನಷ್ಟವಾಗಿದೆ. ಗ್ರಾಮದ ಹೊರ ವಲಯದಲ್ಲಿ ಮೇಯುತ್ತಿದ್ದಾಗ ಈ ಅವಘಡ ನಡೆದಿದೆ. ಮೊಳಕಾಲ್ಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರೈತ ಕುಮಾರಸ್ವಾಮಿ ಅಕ್ರಂದನ ಮುಗಿಲು ಮುಟ್ಟಿದೆ.