ETV Bharat / state

ಗಣೇಶನ ವಿಸರ್ಜನೆ ಬ್ಯಾನರ್ ವಿಚಾರಕ್ಕೆ ಗಲಾಟೆ: ಚಾಕು ಇರಿತದಿಂದ ಯುವಕ ಸಾವು

ಎರಡು ಗುಂಪುಗಳ ನಡುವೆ ಘರ್ಷಣೆಯಾಗಿ ಯುವಕನಿಗೆ ಚಾಕು ಇರಿದಿರುವ ಘಟನೆ ಚಿತ್ರದುರ್ಗ  ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಅಂಬೇಡ್ಕರ್ ನಗರದಲ್ಲಿ ನಡೆದಿದೆ.

author img

By

Published : Sep 15, 2019, 3:55 AM IST

Updated : Sep 15, 2019, 5:49 AM IST

ಅಂಜನಮೂರ್ತಿ, ಮೃತಪಟ್ಟ ಯುವಕ

ಚಿತ್ರದುರ್ಗ: ಗಣೇಶನ ವಿಸರ್ಜನೆಗೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿ ಚಾಕು ಇರಿತದಿಂದ ಯುವಕನಿಗೆ ಮೃತಪಟ್ಟ ಘಟನೆ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಅಂಬೇಡ್ಕರ್ ನಗರದಲ್ಲಿ ನಡೆದಿದೆ.

ಗಣೇಶನ ವಿಸರ್ಜನೆಗೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಚಾಕು ಇರಿತದಿಂದ ಗಾಯಗೊಂಡಿದ್ದ ಯುವಕ ಸಾವನಪ್ಪಿದ್ದಾನೆ. ಅಂಜನಮೂರ್ತಿ (20) ಮೃತಪಟ್ಟ ಯುವಕ. ಗಣೇಶ್ ಎಂಬ ಯುವಕ ಚಾಕುವಿನಿಂದ ಇರಿದಿದ್ದು, ಗಾಯಾಳು ಅಂಜನಮೂರ್ತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

chitradurga
ಗಣೇಶ್ ಆರೋಪಿ

ಇನ್ನು ರವಿಚಂದ್ರ ಎಂಬಾತ ಚಾಕು ಇರಿತಕ್ಕೆ ಕುಮ್ಮಕ್ಕು ನೀಡಿದ್ದಾನೆ ಎಂದು ಮೃತ ಅಂಜನಮೂರ್ತಿ ಕುಟುಂಬಸ್ಥರು ಆರೋಪ ಮಾಡಿದ್ದಾರೆ‌. ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಹೊಳಲ್ಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ‌.

ಚಿತ್ರದುರ್ಗ: ಗಣೇಶನ ವಿಸರ್ಜನೆಗೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿ ಚಾಕು ಇರಿತದಿಂದ ಯುವಕನಿಗೆ ಮೃತಪಟ್ಟ ಘಟನೆ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಅಂಬೇಡ್ಕರ್ ನಗರದಲ್ಲಿ ನಡೆದಿದೆ.

ಗಣೇಶನ ವಿಸರ್ಜನೆಗೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಚಾಕು ಇರಿತದಿಂದ ಗಾಯಗೊಂಡಿದ್ದ ಯುವಕ ಸಾವನಪ್ಪಿದ್ದಾನೆ. ಅಂಜನಮೂರ್ತಿ (20) ಮೃತಪಟ್ಟ ಯುವಕ. ಗಣೇಶ್ ಎಂಬ ಯುವಕ ಚಾಕುವಿನಿಂದ ಇರಿದಿದ್ದು, ಗಾಯಾಳು ಅಂಜನಮೂರ್ತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

chitradurga
ಗಣೇಶ್ ಆರೋಪಿ

ಇನ್ನು ರವಿಚಂದ್ರ ಎಂಬಾತ ಚಾಕು ಇರಿತಕ್ಕೆ ಕುಮ್ಮಕ್ಕು ನೀಡಿದ್ದಾನೆ ಎಂದು ಮೃತ ಅಂಜನಮೂರ್ತಿ ಕುಟುಂಬಸ್ಥರು ಆರೋಪ ಮಾಡಿದ್ದಾರೆ‌. ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಹೊಳಲ್ಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ‌.

Intro:ಎರಡು ಗುಂಪುಗಳ ನಡುವೆ ಘರ್ಷಣೆ ಯುವಕನಿಗೆ ಚಾಕು ಇರಿತ ಸಾವು

ಆ್ಯಂಕರ್:- ರಾಜಕೀಯ ಹಳೆ ವೈಶಮ್ಯದ ಹಿನ್ನಲೆ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿ ಯುವಕನಿಗೆ ಚಾಕು ಇರಿದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಗಣೇಶನ ವಿಸರ್ಜನೆಗೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಚಾಕು ಇರಿತದಿಂದ ಗಾಯಗೊಂಡಿದ್ದ ಯುವಕ ಸಾವನಪ್ಪಿದ್ದಾನೆ.
ಅಂಜನಮೂರ್ತಿ (20) ಚಾಕು ಇರಿತದಿಂದ ಮೃತಪಟ್ಟ ಯುವಕ ಎಂದು ತಿಳಿದುಬಂದಿದ್ದು, ಗಣೇಶ್ ಎಂಬ ಯುವಕನಿಂದ ಚಾಕು ಇರಿತದ ಆರೋಪ ಕೇಳಿ ಬಂದಿದೆ. ಇನ್ನು ಗಾಯಳು ಅಂಜನಮೂರ್ತಿ ಚಿಕಿತ್ಸೆ ಪಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಸಂಬಂಧಿಕರ ಆಕ್ರಂಧನ ಮುಗಿಲುಮುಟ್ಟಿದೆ. ಇನ್ನೂ ರವಿಚಂದ್ರ ಎಂಬ ಯುವಕ ಚಾಕು ಹಾಕಲು ಕುಮ್ಮಕ್ಕು ನೀಡಿದ ಎಂಬ ಆರೋಪ ಕೂಡ ಕೇಳಿ ಬಂದಿದ್ದು, ಮೃತ ಅಂಜನಮೂರ್ತಿ ಕುಟುಂಬಸ್ಥರು ಆರೋಪ ಮಾಡಿದ್ದಾರೆ‌. ಸೋಮವಾರ ರಾತ್ರಿ ನಡೆದಿರುವ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಹೊಳಲ್ಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ‌.

ಫ್ಲೋ.....Body: ChakuConclusion:Irita
Last Updated : Sep 15, 2019, 5:49 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.