ETV Bharat / state

ಹೃದಯಾಘಾತದಿಂದ ಪೊಲೀಸ್​ ಪ್ರಶಿಕ್ಷಣಾರ್ಥಿ ಸಾವು

author img

By

Published : Jun 6, 2021, 11:00 PM IST

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಪೊಲೀಸ್​ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದ ಪೊಲೀಸ್​ ಪ್ರಶಿಕ್ಷಣಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

death
death

ಚಿತ್ರದುರ್ಗ: ಪೊಲೀಸ್​ ಪ್ರಶಿಕ್ಷಣಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ತರಬೇತಿ ಕೇಂದ್ರದಲ್ಲಿ ನಡೆದಿದೆ.

ಶರಣಪ್ಪ ಸಣ್ಣಗೌಡ (27) ಮೃತ ಪ್ರಶಿಕ್ಷಣಾರ್ಥಿ ಬೆಂಗಳೂರು ನಗರದಲ್ಲಿ ಹೊಸದಾಗಿ ನೇಮಕಾತಿ ಹೊಂದಿದ್ದ. 431 ಪೋಲಿಸ್ ಪ್ರಶಿಕ್ಷಣಾರ್ಥಿಗಳು ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಪೊಲೀಸ್​ ತರಬೇತಿ ಕೇಂದ್ರದಲ್ಲಿ ಕಳೆದ ನಾಲ್ಕು ತಿಂಗಳಿಂದ ತರಬೇತಿ ಪಡೆಯುತ್ತಿದ್ದರು. ಮೃತ ಶರಣಪ್ಪ ಸಣ್ಣ ಗೌಡ ಮೂಲತಃ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮದ್ದೂರು ಗ್ರಾಮದವರು.

ಶನಿವಾರ ಸಂಜೆ 7:30 ರ ಸಮಯದಲ್ಲಿ ತನ್ನ ಕೊಠಡಿಯಲ್ಲಿ ಫೋನ್​ನಲ್ಲಿ ಮಾತನಾಡುತ್ತಿರುವಾಗ ಆಕಸ್ಮಿಕವಾಗಿ ಕುಸಿದು ಬಿದ್ದು ಅಸ್ವಸ್ಥರಾಗಿದ್ದು, ತಕ್ಷಣ ಅವರನ್ನು ಚಿತ್ರದುರ್ಗ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಐಮಂಗಲ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಚಿತ್ರದುರ್ಗ: ಪೊಲೀಸ್​ ಪ್ರಶಿಕ್ಷಣಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ತರಬೇತಿ ಕೇಂದ್ರದಲ್ಲಿ ನಡೆದಿದೆ.

ಶರಣಪ್ಪ ಸಣ್ಣಗೌಡ (27) ಮೃತ ಪ್ರಶಿಕ್ಷಣಾರ್ಥಿ ಬೆಂಗಳೂರು ನಗರದಲ್ಲಿ ಹೊಸದಾಗಿ ನೇಮಕಾತಿ ಹೊಂದಿದ್ದ. 431 ಪೋಲಿಸ್ ಪ್ರಶಿಕ್ಷಣಾರ್ಥಿಗಳು ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಪೊಲೀಸ್​ ತರಬೇತಿ ಕೇಂದ್ರದಲ್ಲಿ ಕಳೆದ ನಾಲ್ಕು ತಿಂಗಳಿಂದ ತರಬೇತಿ ಪಡೆಯುತ್ತಿದ್ದರು. ಮೃತ ಶರಣಪ್ಪ ಸಣ್ಣ ಗೌಡ ಮೂಲತಃ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮದ್ದೂರು ಗ್ರಾಮದವರು.

ಶನಿವಾರ ಸಂಜೆ 7:30 ರ ಸಮಯದಲ್ಲಿ ತನ್ನ ಕೊಠಡಿಯಲ್ಲಿ ಫೋನ್​ನಲ್ಲಿ ಮಾತನಾಡುತ್ತಿರುವಾಗ ಆಕಸ್ಮಿಕವಾಗಿ ಕುಸಿದು ಬಿದ್ದು ಅಸ್ವಸ್ಥರಾಗಿದ್ದು, ತಕ್ಷಣ ಅವರನ್ನು ಚಿತ್ರದುರ್ಗ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಐಮಂಗಲ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.