ETV Bharat / state

ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ: ವಕೀಲರ ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಎನ್ಆರ್​ಸಿ ಹಾಗೂ ಸಿಎಎ ಕಾಯ್ದೆಗಳನ್ನು ವಿರೋಧಿಸಿ ಜಿಲ್ಲಾ ಮುಸ್ಲಿಂ ಅಡ್ವೋಕೆಟ್ಸ್ ವೆಲ್ಫೆರ್ ಟ್ರಸ್ಟ್​​ನಿಂದ ವಕೀಲರು ಪ್ರತಿಭಟನೆ ನಡೆಸಿದರು.

author img

By

Published : Feb 3, 2020, 12:31 PM IST

chitradurga
ವಕೀಲರ ಪ್ರತಿಭಟನೆ

ಚಿತ್ರದುರ್ಗ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಎನ್ಆರ್​ಸಿ ಹಾಗೂ ಸಿಎಎ ಕಾಯ್ದೆಗಳನ್ನು ವಿರೋಧಿಸಿ ಜಿಲ್ಲಾ ಮುಸ್ಲಿಂ ಅಡ್ವೋಕೆಟ್ಸ್ ವೆಲ್ಫೆರ್ ಟ್ರಸ್ಟ್ ವತಿಯಿಂದ ವಕೀಲರು ಪ್ರತಿಭಟನೆ ನಡೆಸಿದರು.

ಎನ್ಆರ್​ಸಿ ಹಾಗೂ ಸಿಎಎ ಕಾಯ್ದೆಗಳನ್ನು ವಿರೋಧಿಸಿ ವಕೀಲರ ಪ್ರತಿಭಟನೆ.

ನಗರದ ಒನಕೆ ಓಬವ್ವ ವೃತ್ತದಲ್ಲಿ ವಕೀಲರು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟನೆ ಮಾಡಿದರು. ಭಾರತ ಸಂವಿಧಾನದ 14 ಮತ್ತು 15 ನೇ ವಿಧಿಗಳು ಧರ್ಮ ಜಾತಿಗಳ ಆಧಾರದ ಮೇಲೆ ತಾರತಮ್ಯ ಮಾಡದಂತೆ ನಿರ್ಬಂಧಿಸುತ್ತದೆ. ಆದರೆ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾಯ್ದೆ ಅಸಂವಿಧಾನಿಕ ರೀತಿಯಲ್ಲಿದ್ದು, ಕೇವಲ ಒಂದು ಧರ್ಮಕ್ಕೆ ಅನ್ವಯಿಸುವಂತೆ ಮಾಡಿರುವುದನ್ನು ವಕೀಲರು ವಿರೋಧಿಸಿದ್ದಾರೆ.

ಇನ್ನು ಈ ಕಾಯ್ದೆಯನ್ನು ತಕ್ಷಣ ಹಿಂಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಯಿತು.

ಚಿತ್ರದುರ್ಗ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಎನ್ಆರ್​ಸಿ ಹಾಗೂ ಸಿಎಎ ಕಾಯ್ದೆಗಳನ್ನು ವಿರೋಧಿಸಿ ಜಿಲ್ಲಾ ಮುಸ್ಲಿಂ ಅಡ್ವೋಕೆಟ್ಸ್ ವೆಲ್ಫೆರ್ ಟ್ರಸ್ಟ್ ವತಿಯಿಂದ ವಕೀಲರು ಪ್ರತಿಭಟನೆ ನಡೆಸಿದರು.

ಎನ್ಆರ್​ಸಿ ಹಾಗೂ ಸಿಎಎ ಕಾಯ್ದೆಗಳನ್ನು ವಿರೋಧಿಸಿ ವಕೀಲರ ಪ್ರತಿಭಟನೆ.

ನಗರದ ಒನಕೆ ಓಬವ್ವ ವೃತ್ತದಲ್ಲಿ ವಕೀಲರು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟನೆ ಮಾಡಿದರು. ಭಾರತ ಸಂವಿಧಾನದ 14 ಮತ್ತು 15 ನೇ ವಿಧಿಗಳು ಧರ್ಮ ಜಾತಿಗಳ ಆಧಾರದ ಮೇಲೆ ತಾರತಮ್ಯ ಮಾಡದಂತೆ ನಿರ್ಬಂಧಿಸುತ್ತದೆ. ಆದರೆ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾಯ್ದೆ ಅಸಂವಿಧಾನಿಕ ರೀತಿಯಲ್ಲಿದ್ದು, ಕೇವಲ ಒಂದು ಧರ್ಮಕ್ಕೆ ಅನ್ವಯಿಸುವಂತೆ ಮಾಡಿರುವುದನ್ನು ವಕೀಲರು ವಿರೋಧಿಸಿದ್ದಾರೆ.

ಇನ್ನು ಈ ಕಾಯ್ದೆಯನ್ನು ತಕ್ಷಣ ಹಿಂಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.