ಚಿತ್ರದುರ್ಗ: ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಫಲಾನುಭವಿಗಳಿಗೆ ಪಂಪ್ಸೆಟ್ಗಳನ್ನು ಶಾಸಕ ತಿಪ್ಪಾರೆಡ್ಡಿ ವಿತರಿಸಿದರು.
ಈ ವೇಳೆ ಮಾತನಾಡಿದ ಶಾಸಕರು, ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಫಲಾನುಭವಿಗಳಿಗೆ ಮನವಿ ಮಾಡಿದರು. ಒಟ್ಟು 40 ಜನ ಫಲಾನುಭವಿಗಳಿಗೆ ಕೇಬಲ್, ಕಬ್ಬಿಣದ ಪೈಪ್, ನೀರು ಎತ್ತುವ ಮೋಟರ್ ಸೇರಿದಂತೆ ವಿವಿಧ ವಿದ್ಯುತ್ ಉಪಕರಣಗಳನ್ನು ವಿತರಿಸಲಾಯಿತು.
ಈ ವೇಳೆ ನೆರೆದಿದ್ದ ಜನಕ್ಕೆ ಸಾಮಾಜಿಕ ಅಂತರ ಕಾಪಾಡುವಂತೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮನವಿ ಮಾಡಿದರು.