ETV Bharat / state

ರಾಹುಲ್ ಗಾಂಧಿಗೆ ಲಿಂಗಧಾರಣೆ ದೀಕ್ಷೆ: 'ಇವರೇ ಮುಂದಿನ ಪ್ರಧಾನಿ' ಎಂದ ಸ್ವಾಮೀಜಿ, ಮುರುಘಾ ಶ್ರೀ ಹೇಳಿದ್ದೇನು? - ಚಿತ್ರದುರ್ಗಕ್ಕೆ ಭೇಟಿ ನೀಡಿದ ರಾಹುಲ್​ ಗಾಂಧಿ

ಸ್ಥಳೀಯ ಕಾಂಗ್ರೆಸ್‌ ನಾಯಕರೊಂದಿಗೆ ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ಶ್ರೀಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮುರುಘಾ ಶ್ರೀಗಳು ಅವರ ರಾಹುಲ್ ಹಣೆಗೆ ವಿಭೂತಿ ಹಚ್ಚಿ ಲಿಂಗಧಾರಣೆ ಮಾಡಿ ಲಿಂಗದೀಕ್ಷೆ ನೀಡಿದರು.

Rahul Gandhi Will Become PM, Said Seer Haveri Swamiji
Rahul Gandhi Will Become PM, Said Seer Haveri Swamiji
author img

By

Published : Aug 3, 2022, 4:50 PM IST

Updated : Aug 3, 2022, 7:27 PM IST

ಚಿತ್ರದುರ್ಗ: ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯ ಉತ್ಸವದಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರಿಂದು ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅಲ್ಲಿದ್ದ ಸ್ವಾಮೀಜಿಯೊಬ್ಬರು ರಾಹುಲ್ ಗಾಂಧಿ ಕುರಿತು ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.

Rahul Gandhi Will Become PM, Said Haveri Swamiji
ರಾಹುಲ್ ಗಾಂಧಿಗೆ ಲಿಂಗಧಾರಣೆ ದೀಕ್ಷೆ

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಮುಂದಿನ ಪ್ರಧಾನಿಯಾಗುತ್ತಾರೆ ಎಂದು ಹಾವೇರಿ ಹೊಸಮಠದ ಸ್ವಾಮೀಜಿ ಹೇಳುತ್ತಿದ್ದಂತೆ ಮಧ್ಯಪ್ರವೇಶಿಸಿದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು, ಅವರ ಮಾತನ್ನು ಅರ್ಧಕ್ಕೆ ನಿಲ್ಲಿಸಿದರು.

ಸಿದ್ದರಾಮೋತ್ಸವಕ್ಕೆ ಆಗಮಿಸಿರುವ ರಾಹುಲ್ ಗಾಂಧಿ ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರೊಂದಿಗೆ ಮುರುಘಾ ಮಠಕ್ಕೆ ಭೇಟಿ ನೀಡಿದರು. ಈ ಭೇಟಿಯ ಸಂದರ್ಭದಲ್ಲಿ ಹಲವು ಮಠಗಳ ಮಠಾಧೀಶರು ಆಗಮಿಸಿದ್ದರು. ಹಾವೇರಿ ಹೊಸಮಠದ ಶ್ರೀಗಳು ಮಾತನಾಡುವಾಗ, ರಾಹುಲ್ ಗಾಂಧಿಯವರು ಮುಂದಿನ ಪ್ರಧಾನಿಯಾಗುತ್ತಾರೆ ಎಂದರು. ಆಗ ಮುರುಘಾ ಶ್ರೀಗಳು ಮಧ್ಯಪ್ರವೇಶಿಸಿ ತಡೆದು, ನಮ್ಮ ಮಠಕ್ಕೆ ಯಾರೇ ಭೇಟಿ ನೀಡಿದರೂ ಅವರಿಗೆ ಆಶೀರ್ವಾದ ನೀಡುತ್ತೇವೆ ಎಂದು ಹೇಳಿದ್ದಾರೆ.

ಬಳಿಕ ರಾಹುಲ್ ಗಾಂಧಿ ಮಾತನಾಡಿ, ನಾನು ಇತ್ತೀಚೆಗೆ ಬಸವಣ್ಣನವರ ಬಗ್ಗೆ ಓದುತ್ತಿದ್ದೇನೆ. ಅವರ ತತ್ವಗಳನ್ನು ಅನುಸರಿಸುತ್ತಿದ್ದೇನೆ. ಹಾಗಾಗಿ, ಇಲ್ಲಿಗೆ ಬಂದಿರುವುದು ನಿಜವಾದ ಗೌರವ ಅನ್ನಿಸಿದೆ. ಇಷ್ಟಲಿಂಗ ಮತ್ತು ಶಿವಯೋಗದ ಬಗ್ಗೆ ಸ್ವಲ್ಪ ಹೆಚ್ಚು ವಿವರವಾಗಿ ಕಲಿಸುವ ಯಾರನ್ನಾದರೂ ನೀವು ನನಗೆ ಕಳುಹಿಸಿದರೆ, ಬಹುಶಃ ಅದರಿಂದ ನಾನು ಪ್ರಯೋಜನ ಪಡೆಯಬಹುದು ಎಂದರು.

ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ

ರಾಹುಲ್ ಗಾಂಧಿಗೆ ಲಿಂಗ ದೀಕ್ಷೆ: ರಾಹುಲ್ ಗಾಂಧಿಯವರಿಗೆ ಮುರುಘಾ ಶ್ರೀಗಳು ಹಣೆಗೆ ವಿಭೂತಿ ಹಚ್ಚಿ ಲಿಂಗಧಾರಣೆ ಮಾಡಿ ಲಿಂಗದೀಕ್ಷೆ ನೀಡಿದರು. ಮಠದ ಕರ್ತೃ ಮುರಿಗಿ ಶಾಂತವೀರ ಸ್ವಾಮೀಜಿ ಗದ್ದುಗೆಗೆ ಪುಷ್ಪಾರ್ಚನೆ ಮಾಡಿದ ರಾಹುಲ್ ಕೆಲ ಸಮಯ ಧ್ಯಾನದಲ್ಲಿ ನಿರತರಾದರು. ನಂತರ ಶಿವಮೂರ್ತಿ ಮುರುಘಾ ಶರಣರಲ್ಲಿ ಇಷ್ಟ ಲಿಂಗದ ಬಗ್ಗೆ ಮಾಹಿತಿ ಕೇಳಿದರಂತೆ.

ಇದನ್ನೂ ಓದಿ: ಚಿತ್ರದುರ್ಗ: ಮುರುಘಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ರಾಹುಲ್ ಗಾಂಧಿ

ಚಿತ್ರದುರ್ಗ: ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯ ಉತ್ಸವದಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರಿಂದು ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅಲ್ಲಿದ್ದ ಸ್ವಾಮೀಜಿಯೊಬ್ಬರು ರಾಹುಲ್ ಗಾಂಧಿ ಕುರಿತು ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.

Rahul Gandhi Will Become PM, Said Haveri Swamiji
ರಾಹುಲ್ ಗಾಂಧಿಗೆ ಲಿಂಗಧಾರಣೆ ದೀಕ್ಷೆ

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಮುಂದಿನ ಪ್ರಧಾನಿಯಾಗುತ್ತಾರೆ ಎಂದು ಹಾವೇರಿ ಹೊಸಮಠದ ಸ್ವಾಮೀಜಿ ಹೇಳುತ್ತಿದ್ದಂತೆ ಮಧ್ಯಪ್ರವೇಶಿಸಿದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು, ಅವರ ಮಾತನ್ನು ಅರ್ಧಕ್ಕೆ ನಿಲ್ಲಿಸಿದರು.

ಸಿದ್ದರಾಮೋತ್ಸವಕ್ಕೆ ಆಗಮಿಸಿರುವ ರಾಹುಲ್ ಗಾಂಧಿ ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರೊಂದಿಗೆ ಮುರುಘಾ ಮಠಕ್ಕೆ ಭೇಟಿ ನೀಡಿದರು. ಈ ಭೇಟಿಯ ಸಂದರ್ಭದಲ್ಲಿ ಹಲವು ಮಠಗಳ ಮಠಾಧೀಶರು ಆಗಮಿಸಿದ್ದರು. ಹಾವೇರಿ ಹೊಸಮಠದ ಶ್ರೀಗಳು ಮಾತನಾಡುವಾಗ, ರಾಹುಲ್ ಗಾಂಧಿಯವರು ಮುಂದಿನ ಪ್ರಧಾನಿಯಾಗುತ್ತಾರೆ ಎಂದರು. ಆಗ ಮುರುಘಾ ಶ್ರೀಗಳು ಮಧ್ಯಪ್ರವೇಶಿಸಿ ತಡೆದು, ನಮ್ಮ ಮಠಕ್ಕೆ ಯಾರೇ ಭೇಟಿ ನೀಡಿದರೂ ಅವರಿಗೆ ಆಶೀರ್ವಾದ ನೀಡುತ್ತೇವೆ ಎಂದು ಹೇಳಿದ್ದಾರೆ.

ಬಳಿಕ ರಾಹುಲ್ ಗಾಂಧಿ ಮಾತನಾಡಿ, ನಾನು ಇತ್ತೀಚೆಗೆ ಬಸವಣ್ಣನವರ ಬಗ್ಗೆ ಓದುತ್ತಿದ್ದೇನೆ. ಅವರ ತತ್ವಗಳನ್ನು ಅನುಸರಿಸುತ್ತಿದ್ದೇನೆ. ಹಾಗಾಗಿ, ಇಲ್ಲಿಗೆ ಬಂದಿರುವುದು ನಿಜವಾದ ಗೌರವ ಅನ್ನಿಸಿದೆ. ಇಷ್ಟಲಿಂಗ ಮತ್ತು ಶಿವಯೋಗದ ಬಗ್ಗೆ ಸ್ವಲ್ಪ ಹೆಚ್ಚು ವಿವರವಾಗಿ ಕಲಿಸುವ ಯಾರನ್ನಾದರೂ ನೀವು ನನಗೆ ಕಳುಹಿಸಿದರೆ, ಬಹುಶಃ ಅದರಿಂದ ನಾನು ಪ್ರಯೋಜನ ಪಡೆಯಬಹುದು ಎಂದರು.

ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ

ರಾಹುಲ್ ಗಾಂಧಿಗೆ ಲಿಂಗ ದೀಕ್ಷೆ: ರಾಹುಲ್ ಗಾಂಧಿಯವರಿಗೆ ಮುರುಘಾ ಶ್ರೀಗಳು ಹಣೆಗೆ ವಿಭೂತಿ ಹಚ್ಚಿ ಲಿಂಗಧಾರಣೆ ಮಾಡಿ ಲಿಂಗದೀಕ್ಷೆ ನೀಡಿದರು. ಮಠದ ಕರ್ತೃ ಮುರಿಗಿ ಶಾಂತವೀರ ಸ್ವಾಮೀಜಿ ಗದ್ದುಗೆಗೆ ಪುಷ್ಪಾರ್ಚನೆ ಮಾಡಿದ ರಾಹುಲ್ ಕೆಲ ಸಮಯ ಧ್ಯಾನದಲ್ಲಿ ನಿರತರಾದರು. ನಂತರ ಶಿವಮೂರ್ತಿ ಮುರುಘಾ ಶರಣರಲ್ಲಿ ಇಷ್ಟ ಲಿಂಗದ ಬಗ್ಗೆ ಮಾಹಿತಿ ಕೇಳಿದರಂತೆ.

ಇದನ್ನೂ ಓದಿ: ಚಿತ್ರದುರ್ಗ: ಮುರುಘಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ರಾಹುಲ್ ಗಾಂಧಿ

Last Updated : Aug 3, 2022, 7:27 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.