ETV Bharat / state

ಸರ್ಕಾರದ ಆದೇಶದಕ್ಕೂ ಡೋಂಟ್‌ಕೇರ್​.. ಅಧಿಕಾರಿಗಳು ದಾಳಿ ನಡೆಸಿದ್ಮೇಲೆ ಬುದ್ಧಿ ಬಂತು..

author img

By

Published : Apr 14, 2020, 5:01 PM IST

ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಈಗ ಎಲ್ಲಾ ಅಂಗಡಿಗಳ ಮಾಲೀಕರು ಉಚಿತವಾಗಿ ಪಡಿತರ ವಿತರಣೆ ಮಾಡುತ್ತಿದ್ದಾರೆ.

ration shops
ಪಡಿತರ ಅಂಗಡಿಗಳು

ಚಿತ್ರದುರ್ಗ : ಉಚಿತವಾಗಿ ಪಡಿತರ ನೀಡಬೇಕೆಂದು ಸರ್ಕಾರ ಆದೇಶಿಸಿದ್ದರೂ ಕೂಡಾ ಕಾನೂನು ಉಲ್ಲಂಘನೆ ಮಾಡಿದ ಆರೋಪ ಜಿಲ್ಲೆಯಲ್ಲಿ ಕೇಳಿ ಬಂದಿದೆ. ಕೆಲ ಪಡಿತರ ಅಂಗಡಿಗಳಲ್ಲಿ ಇಪ್ಪತ್ತು ರೂಪಾಯಿಗೆ ಪಡಿತರ ವಿತರಣೆ ಮಾಡಲಾಗುತ್ತಿದೆ. ಈ ಅಂಗಡಿಗಳ ಮೇಲೆ ಆಹಾರ ಸರಬರಾಜು ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ ಕೆಲವರ ಲೈಸೆನ್ಸ್​ ರದ್ದು ಮಾಡಿದ್ದಾರೆ.

ಪಡಿತರ ಅಂಗಡಿಗಳ ಮೇಲೆ ದಾಳಿ..

ಚಿತ್ರದುರ್ಗ ನಗರದ ಗಾಂಧಿನಗರ, ಹಿರಿಯೂರು ತಾಲೂಕಿನ ಬಬ್ಬೂರು, ಚಳ್ಳಕೆರೆ ತಾಲೂಕಿನ ಕರಿಕೆರೆ ಗ್ರಾಮದ ನ್ಯಾಯಬೆಲೆ ಅಂಗಡಿಗಳ ಮಾಲೀಕರ ಪರವಾನಗಿ ರದ್ದಾಗಿದೆ. ಈ ವಿಚಾರ ಗೊತ್ತಾದ ಮೇಲೆ ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಈಗ ಎಲ್ಲಾ ಅಂಗಡಿಗಳ ಮಾಲೀಕರು ಉಚಿತವಾಗಿ ಪಡಿತರ ವಿತರಣೆ ಮಾಡುತ್ತಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 580 ನ್ಯಾಯಬೆಲೆ ಅಂಗಡಿಗಳಿವೆ. 15,146 ಮೆಟ್ರಿಕ್ ಟನ್​ ಅಕ್ಕಿ, 14,070 ಮೆಟ್ರಿಕ್​ ಟನ್​ ಗೋಧಿ ವಿತರಿಸಲಾಗುತ್ತಿದೆ. ಆಹಾರ ಇಲಾಖೆಗೆ ನೂತನ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದ ಪ್ರತಿಯೊಬ್ಬರಿಗೂ ತಾತ್ಕಾಲಿಕ ಪಡಿತರ ಚೀಟಿ ನೀಡಿ ಅಕ್ಕಿ, ಗೋಧಿ ವಿತರಣೆ ಮಾಡಲಾಗುತ್ತಿದೆ.

ಚಿತ್ರದುರ್ಗ : ಉಚಿತವಾಗಿ ಪಡಿತರ ನೀಡಬೇಕೆಂದು ಸರ್ಕಾರ ಆದೇಶಿಸಿದ್ದರೂ ಕೂಡಾ ಕಾನೂನು ಉಲ್ಲಂಘನೆ ಮಾಡಿದ ಆರೋಪ ಜಿಲ್ಲೆಯಲ್ಲಿ ಕೇಳಿ ಬಂದಿದೆ. ಕೆಲ ಪಡಿತರ ಅಂಗಡಿಗಳಲ್ಲಿ ಇಪ್ಪತ್ತು ರೂಪಾಯಿಗೆ ಪಡಿತರ ವಿತರಣೆ ಮಾಡಲಾಗುತ್ತಿದೆ. ಈ ಅಂಗಡಿಗಳ ಮೇಲೆ ಆಹಾರ ಸರಬರಾಜು ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ ಕೆಲವರ ಲೈಸೆನ್ಸ್​ ರದ್ದು ಮಾಡಿದ್ದಾರೆ.

ಪಡಿತರ ಅಂಗಡಿಗಳ ಮೇಲೆ ದಾಳಿ..

ಚಿತ್ರದುರ್ಗ ನಗರದ ಗಾಂಧಿನಗರ, ಹಿರಿಯೂರು ತಾಲೂಕಿನ ಬಬ್ಬೂರು, ಚಳ್ಳಕೆರೆ ತಾಲೂಕಿನ ಕರಿಕೆರೆ ಗ್ರಾಮದ ನ್ಯಾಯಬೆಲೆ ಅಂಗಡಿಗಳ ಮಾಲೀಕರ ಪರವಾನಗಿ ರದ್ದಾಗಿದೆ. ಈ ವಿಚಾರ ಗೊತ್ತಾದ ಮೇಲೆ ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಈಗ ಎಲ್ಲಾ ಅಂಗಡಿಗಳ ಮಾಲೀಕರು ಉಚಿತವಾಗಿ ಪಡಿತರ ವಿತರಣೆ ಮಾಡುತ್ತಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 580 ನ್ಯಾಯಬೆಲೆ ಅಂಗಡಿಗಳಿವೆ. 15,146 ಮೆಟ್ರಿಕ್ ಟನ್​ ಅಕ್ಕಿ, 14,070 ಮೆಟ್ರಿಕ್​ ಟನ್​ ಗೋಧಿ ವಿತರಿಸಲಾಗುತ್ತಿದೆ. ಆಹಾರ ಇಲಾಖೆಗೆ ನೂತನ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದ ಪ್ರತಿಯೊಬ್ಬರಿಗೂ ತಾತ್ಕಾಲಿಕ ಪಡಿತರ ಚೀಟಿ ನೀಡಿ ಅಕ್ಕಿ, ಗೋಧಿ ವಿತರಣೆ ಮಾಡಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.