ETV Bharat / state

ವಿವಿಧ ಬೇಡಿಕೆ ಈಡೇರಿಸುವಂತೆ ಬೀದಿಗಿಳಿದ ವಿಕಲಚೇತನರು..

author img

By

Published : Sep 14, 2020, 10:10 PM IST

ಎಸಿಡಿಪಿಒ ಅವರನ್ನು ವಿಕಲಚೇತನರ ತಾಲೂಕಿನ ನೋಡಲ್ ಅಧಿಕಾರಿಯಾಗಿ ಹೊರಡಿಸಿರುವ ಆದೇಶವನ್ನು ತಕ್ಷಣ ರದ್ದು ಪಡಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಯಿತು..

protest
ಪ್ರತಿಭಟನೆ

ಚಿತ್ರದುರ್ಗ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿಕಲಚೇತನರು ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ವಿಶೇಷಚೇತನರ ಪ್ರತಿಭಟನೆ

ಚಿತ್ರದುರ್ಗ ನಗರದ ಡಿಸಿ ವೃತ್ತದಲ್ಲಿ ಜಮಾವಣೆಯಾದ ವಿಕಲಚೇತನರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ವಿಕಲಚೇತನರ ಸಂಘದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ತಕ್ಷಣ ಈಡೇರಿಸುವಂತೆ ಸಿಎಂ ಯಡಿಯೂರಪ್ಪನವರಿಗೆ ಮನವಿ ಮಾಡಲಾಯಿತು.

ಎಸಿಡಿಪಿಒ ಅವರನ್ನು ವಿಕಲಚೇತನರ ತಾಲೂಕಿನ ನೋಡಲ್ ಅಧಿಕಾರಿಯಾಗಿ ಹೊರಡಿಸಿರುವ ಆದೇಶವನ್ನು ತಕ್ಷಣ ರದ್ದು ಪಡಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಯಿತು. ಚಿತ್ರದುರ್ಗ ನಗರದ ಡಿಸಿ ವೃತ್ತದಲ್ಲಿ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು. ನಂತರ ಅಪರ ಜಿಲ್ಲಾಧಿಕಾರಿ ಸಂಗಪ್ಪನವರಿಗೆ ಮನವಿ ಪತ್ರ ಸಲ್ಲಿಸಲಾಯ್ತು.

ಚಿತ್ರದುರ್ಗ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿಕಲಚೇತನರು ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ವಿಶೇಷಚೇತನರ ಪ್ರತಿಭಟನೆ

ಚಿತ್ರದುರ್ಗ ನಗರದ ಡಿಸಿ ವೃತ್ತದಲ್ಲಿ ಜಮಾವಣೆಯಾದ ವಿಕಲಚೇತನರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ವಿಕಲಚೇತನರ ಸಂಘದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ತಕ್ಷಣ ಈಡೇರಿಸುವಂತೆ ಸಿಎಂ ಯಡಿಯೂರಪ್ಪನವರಿಗೆ ಮನವಿ ಮಾಡಲಾಯಿತು.

ಎಸಿಡಿಪಿಒ ಅವರನ್ನು ವಿಕಲಚೇತನರ ತಾಲೂಕಿನ ನೋಡಲ್ ಅಧಿಕಾರಿಯಾಗಿ ಹೊರಡಿಸಿರುವ ಆದೇಶವನ್ನು ತಕ್ಷಣ ರದ್ದು ಪಡಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಯಿತು. ಚಿತ್ರದುರ್ಗ ನಗರದ ಡಿಸಿ ವೃತ್ತದಲ್ಲಿ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು. ನಂತರ ಅಪರ ಜಿಲ್ಲಾಧಿಕಾರಿ ಸಂಗಪ್ಪನವರಿಗೆ ಮನವಿ ಪತ್ರ ಸಲ್ಲಿಸಲಾಯ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.