ಚಿತ್ರದುರ್ಗ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಹಾಗೂ ಪೌರತ್ವ ನೋಂದಣಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಪ್ರತಿಭಟನೆಗಳು ನಡೆದರೇ, ಇತ್ತಾ ಚಿತ್ರದುರ್ಗದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ವಕೀಲರ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ವಕೀಲರು ಮಾನವ ಸರಪಳಿ ನಿರ್ಮಿಸಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಿಎಎ, ಎನ್ಆರ್ಸಿ ಕಾಯ್ದೆ ಸ್ವಾಗತಿಸಿದರು.
ಇನ್ನು ಕೆಲ ವಕೀಲರು ಪ್ರತಿಭಟನೆ ನಡೆಸುವ ಮೂಲಕ ಕಾಯ್ದೆಗಳನ್ನು ರದ್ದುಗೊಳಿಸದಂತೆ ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದರು. ಚಿತ್ರದುರ್ಗ ಜಿಲ್ಲಾ ವಕೀಲರ ವೇದಿಕೆಯಿಂದ ನಡೆದ ಪ್ರತಿಭಟನೆ ಇದಾಗಿದ್ದು, ತಿದ್ದುಪಡಿ ಪೌರತ್ವ ಕಾಯ್ದೆ ಜಾರಿಗೆ ತರುವಂತೆ ಒತ್ತಾಯಿಸಿ ಅಕ್ರಮ ನುಸುಳುಕೋರರನ್ನು ಹೊರಹಾಕುವಂತೆ ಆಗ್ರಹಿಸಿದರು.