ETV Bharat / state

ವಿವಾಹೇತರ ಸಂಬಂಧ ಶಂಕೆ : ಕಟ್ಟಿಗೆಯಿಂದ ಹೊಡೆದು ವ್ಯಕ್ತಿಯ ಕೊಲೆ

author img

By

Published : Jan 17, 2021, 10:06 AM IST

ವಿವಾಹೇತರ ಸಂಬಂಧ ಶಂಕೆ ಹಿನ್ನೆಲೆ ವ್ಯಕ್ತಿವೋರ್ವ ಕೊಲೆಗೀಡಾಗಿದ್ದಾನೆ. ಹೊಸದುರ್ಗ ತಾಲೂಕಿನ ವೆಂಗಲಾಪುರ ಗ್ರಾಮದಲ್ಲಿ ಪ್ರಕರಣ ನಡೆದಿದೆ.

chitradurga
ಕಟ್ಟಿಗೆಯಿಂದ ಹೊಡೆದು ವ್ಯಕ್ತಿ ಕೊಲೆ

ಚಿತ್ರದುರ್ಗ: ವಿವಾಹೇತರ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವ್ಯಕ್ತಿವೋರ್ವನನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಲಾಗಿದೆ. ಈ ಘಟನೆ ಹೊಸದುರ್ಗ ತಾಲೂಕಿನ ವೆಂಗಲಾಪುರ ಗ್ರಾಮದಲ್ಲಿ ನಡೆದಿದೆ.

ಯೋಗರಾಜ್ (40) ಹತ್ಯೆಗೀಡಾದ ವ್ಯಕ್ತಿ. ಚಿದಾನಂದ ಹಾಗೂ ಆತನ ಅಳಿಯ ವಿನಯ್ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಚಿದಾನಂದ ಪತ್ನಿಯೊಂದಿಗೆ ಯೋಗರಾಜ್ ವಿವಾಹೇತರ ಸಂಬಂಧ ಇಟ್ಟುಕೊ‌ಂಡಿದ್ದ ಎಂದು ಹೇಳಲಾಗುತ್ತಿದೆ. ಇದರಿಂದ ಬೇಸತ್ತ ಚಿದಾನಂದ್​, ತನ್ನ ಅಳಿಯ ವಿನಯ್​ ಜೊತೆ ಸೇರಿ ಯೋಗರಾಜ್​ನನ್ನು ಕೊಲೆ ಮಾಡಿದ್ದಾರೆ ಎನ್ನಲಾಗ್ತಿದೆ.

ಹತ್ಯೆ ಬಳಿಕ ಆರೋಪಿಗಳು ನಾಪತ್ತೆಯಾಗಿದ್ದು, ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿತ್ರದುರ್ಗ: ವಿವಾಹೇತರ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವ್ಯಕ್ತಿವೋರ್ವನನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಲಾಗಿದೆ. ಈ ಘಟನೆ ಹೊಸದುರ್ಗ ತಾಲೂಕಿನ ವೆಂಗಲಾಪುರ ಗ್ರಾಮದಲ್ಲಿ ನಡೆದಿದೆ.

ಯೋಗರಾಜ್ (40) ಹತ್ಯೆಗೀಡಾದ ವ್ಯಕ್ತಿ. ಚಿದಾನಂದ ಹಾಗೂ ಆತನ ಅಳಿಯ ವಿನಯ್ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಚಿದಾನಂದ ಪತ್ನಿಯೊಂದಿಗೆ ಯೋಗರಾಜ್ ವಿವಾಹೇತರ ಸಂಬಂಧ ಇಟ್ಟುಕೊ‌ಂಡಿದ್ದ ಎಂದು ಹೇಳಲಾಗುತ್ತಿದೆ. ಇದರಿಂದ ಬೇಸತ್ತ ಚಿದಾನಂದ್​, ತನ್ನ ಅಳಿಯ ವಿನಯ್​ ಜೊತೆ ಸೇರಿ ಯೋಗರಾಜ್​ನನ್ನು ಕೊಲೆ ಮಾಡಿದ್ದಾರೆ ಎನ್ನಲಾಗ್ತಿದೆ.

ಹತ್ಯೆ ಬಳಿಕ ಆರೋಪಿಗಳು ನಾಪತ್ತೆಯಾಗಿದ್ದು, ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.