ಚಿತ್ರದುರ್ಗ : ಟ್ರ್ಯಾಕ್ಟರ್ ಹಾಗೂ ಬೊಲೆರೊ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಹಿರಿಯೂರು ಬಳಿ ನಡೆದಿದೆ.

ಸಕ್ಕಪ್ಪ (27), ಮಾನಪ್ಪ (22), ಮಹಾದೇವಪ್ಪ (25) ಮೃತ ಕಾರ್ಮಿಕರು.
ಇವರೆಲ್ಲ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಾರನೂರು ಗ್ರಾಮದವರಾಗಿದ್ದಾರೆ. ಟ್ರ್ಯಾಕ್ಟರ್ನಲ್ಲಿದ್ದ 13 ಜನರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಕೊರೊನಾ ಭಯದಿಂದ ಜೇವರ್ಗಿಗೆ ಮರಳುತ್ತಿದ್ದರು. ಈ ವೇಳೆ ದುರ್ಘಟನೆ ಘಟಿಸಿದೆ.
ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.