ETV Bharat / state

ಕೊರೊನಾ ಮುಕ್ತವಾಗಿದ್ದ ಕೋಟೆನಾಡಿಗೆ ಮತ್ತೆ ಕಾಲಿಟ್ಟ ಮಹಾಮಾರಿ ಸೋಂಕು - ಚಿತ್ರದುರ್ಗ ಜಿಲ್ಲಾ ಆರೋಗ್ಯಧಿಕಾರಿ ಡಾ ಪಾಲಾಕ್ಷ ನ್ಯೂಸ್

ಕಳೆದ ಇಪ್ಪತ್ತು ದಿನಗಳಿಂದ ಚಿತ್ರದುರ್ಗದಲ್ಲಿ ಕೊರೊನಾ ಪ್ರಕರಣಗಳು ಕಾಣಿಸಿಕೊಳ್ಳದ ಹಿನ್ನೆಲೆ ಕೊರೊನಾ ಮುಕ್ತ ಜಿಲ್ಲೆಯಾಗಿ ಹೊರಹೊಮ್ಮಿತು. ಆದರೆ ಇಂದು ಮತ್ತೆ ಎರಡು ಪ್ರಕರಣಗಳು ಕಾಣಿಸಿಕೊಂಡಿದ್ದು, ಮತ್ತೆ ಸೋಂಕು ಜಿಲ್ಲೆಗೆ ಕಾಲಿಟ್ಟಿದೆ.

Chitradurgha
Chitradurgha
author img

By

Published : Jun 22, 2020, 3:44 PM IST

ಚಿತ್ರದುರ್ಗ: 43 ಕೊರೊನಾ ಪಾಸಿಟಿವ್ ಸೋಂಕಿತರು ಗುಣಮುಖರಾದ ಬಳಿಕ ಕೋಟೆನಾಡು‌ ಚಿತ್ರದುರ್ಗ ಕೊರೊನಾ ಮುಕ್ತ ಜಿಲ್ಲೆಯಾಗಿ ಹೊರಹೊಮ್ಮಿತು. ಆದರೆ ಇಂದು ಮತ್ತೆ ಎರಡು ಪ್ರಕರಣಗಳು ಕಾಣಿಸಿಕೊಂಡಿದ್ದು, ಮತ್ತೆ ಸೋಂಕು ಜಿಲ್ಲೆಗೆ ಕಾಲಿಟ್ಟಿದೆ.

ಕಳೆದ ಇಪ್ಪತ್ತು ದಿನಗಳಿಂದ ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿರಲಿಲ್ಲ. ಅದರೆ ಇಂದು ಹಿರಿಯೂರು ಪಟ್ಟಣದಲ್ಲಿ ಎರಡು ಕೊರೊ‌ನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಹಿರಿಯೂರು ಪಟ್ಟಣದ ಆಝಾದ್ ನಗರದ ನಿವಾಸಿಯಾದ 29 ವರ್ಷದ ಮಹಿಳೆ ಮತ್ತು ಆಕೆಯ 08 ವರ್ಷದ ಮಗನಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಬೆಂಗಳೂರಿನ ಚಿಕ್ಕಪೇಟೆಯ ತನ್ನ ಅಣ್ಣನ ಮನೆಗೆ ತೆರಳಿದ ಹಿನ್ನೆಲೆ ಮಹಿಳೆ ಮತ್ತು ಮಗುವಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.

ಇದೀಗ ಸೋಂಕಿತರನ್ನು ಚಿತ್ರದುರ್ಗ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಾಥಮಿಕ ಸಂಪರ್ಕಿತರನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯಧಿಕಾರಿ ಡಾ ಪಾಲಾಕ್ಷ ಅವರು ತಿಳಿಸಿದ್ದಾರೆ.

ಚಿತ್ರದುರ್ಗ: 43 ಕೊರೊನಾ ಪಾಸಿಟಿವ್ ಸೋಂಕಿತರು ಗುಣಮುಖರಾದ ಬಳಿಕ ಕೋಟೆನಾಡು‌ ಚಿತ್ರದುರ್ಗ ಕೊರೊನಾ ಮುಕ್ತ ಜಿಲ್ಲೆಯಾಗಿ ಹೊರಹೊಮ್ಮಿತು. ಆದರೆ ಇಂದು ಮತ್ತೆ ಎರಡು ಪ್ರಕರಣಗಳು ಕಾಣಿಸಿಕೊಂಡಿದ್ದು, ಮತ್ತೆ ಸೋಂಕು ಜಿಲ್ಲೆಗೆ ಕಾಲಿಟ್ಟಿದೆ.

ಕಳೆದ ಇಪ್ಪತ್ತು ದಿನಗಳಿಂದ ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿರಲಿಲ್ಲ. ಅದರೆ ಇಂದು ಹಿರಿಯೂರು ಪಟ್ಟಣದಲ್ಲಿ ಎರಡು ಕೊರೊ‌ನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಹಿರಿಯೂರು ಪಟ್ಟಣದ ಆಝಾದ್ ನಗರದ ನಿವಾಸಿಯಾದ 29 ವರ್ಷದ ಮಹಿಳೆ ಮತ್ತು ಆಕೆಯ 08 ವರ್ಷದ ಮಗನಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಬೆಂಗಳೂರಿನ ಚಿಕ್ಕಪೇಟೆಯ ತನ್ನ ಅಣ್ಣನ ಮನೆಗೆ ತೆರಳಿದ ಹಿನ್ನೆಲೆ ಮಹಿಳೆ ಮತ್ತು ಮಗುವಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.

ಇದೀಗ ಸೋಂಕಿತರನ್ನು ಚಿತ್ರದುರ್ಗ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಾಥಮಿಕ ಸಂಪರ್ಕಿತರನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯಧಿಕಾರಿ ಡಾ ಪಾಲಾಕ್ಷ ಅವರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.