ETV Bharat / state

ದ.ಕನ್ನಡದಲ್ಲಿ 195 ಮಂದಿಗೆ ಕೊರೊನಾ, 6 ಮಂದಿ ಬಲಿ

author img

By

Published : Aug 8, 2020, 7:49 PM IST

ಜಿಲ್ಲೆಯಲ್ಲಿಂದು 195 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು 6 ಮಂದಿ ಸಾವನ್ನಪ್ಪಿದ್ದಾರೆ. ಸೋಂಕಿತರ ಸಂಖ್ಯೆ 7,075ಕ್ಕೆ ತಲುಪಿದೆ.

Dakshina Kannada corona case
Dakshina Kannada corona case

ಮಂಗಳೂರು: ಮಹಾಮಾರಿ ಕೊರೊನಾ ಸೋಂಕು ಇಂದು ದಕ್ಷಿಣ ಕನ್ನಡ ಜಿಲ್ಲೆಯ 6 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಅಲ್ಲದೇ 195 ಮಂದಿಗೆ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಇಂದು ಮೃತಪಟ್ಟ 6 ಮಂದಿ ಮಂಗಳೂರು ತಾಲೂಕಿನವರಾಗಿದ್ದು ಜಿಲ್ಲೆಯಲ್ಲಿ ಮೃತರ ಸಂಖ್ಯೆ 214ಕ್ಕೆ ಏರಿಕೆಯಾಗಿದೆ. ಇನ್ನು, 194 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 7,075ಕ್ಕೆ ಏರಿಕೆಯಾಗಿದೆ.

ಮಂಗಳೂರು ತಾಲೂಕಿನ 129, ಬಂಟ್ವಾಳ 15, ಬೆಳ್ತಂಗಡಿ 16, ಪುತ್ತೂರು 16, ಸುಳ್ಯದ 7 ಮತ್ತು ಹೊರಜಿಲ್ಲೆಯ 11 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇದರಲ್ಲಿ 98 ಮಂದಿ ILI ಪ್ರಕರಣದಿಂದ, 12 SARI ಪ್ರಕರಣದಿಂದ, 15 ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗುಲಿದೆ. ಉಳಿದ 69 ಮಂದಿಯ ಕೊರೊನಾ ಸಂಪರ್ಕದ ಮೂಲ ಪತ್ತೆಯಾಗಿಲ್ಲ.

ಇಂದು 183 ಮಂದಿ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ 3,487 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಸದ್ಯ 3,347 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.

ಮಂಗಳೂರು: ಮಹಾಮಾರಿ ಕೊರೊನಾ ಸೋಂಕು ಇಂದು ದಕ್ಷಿಣ ಕನ್ನಡ ಜಿಲ್ಲೆಯ 6 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಅಲ್ಲದೇ 195 ಮಂದಿಗೆ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಇಂದು ಮೃತಪಟ್ಟ 6 ಮಂದಿ ಮಂಗಳೂರು ತಾಲೂಕಿನವರಾಗಿದ್ದು ಜಿಲ್ಲೆಯಲ್ಲಿ ಮೃತರ ಸಂಖ್ಯೆ 214ಕ್ಕೆ ಏರಿಕೆಯಾಗಿದೆ. ಇನ್ನು, 194 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 7,075ಕ್ಕೆ ಏರಿಕೆಯಾಗಿದೆ.

ಮಂಗಳೂರು ತಾಲೂಕಿನ 129, ಬಂಟ್ವಾಳ 15, ಬೆಳ್ತಂಗಡಿ 16, ಪುತ್ತೂರು 16, ಸುಳ್ಯದ 7 ಮತ್ತು ಹೊರಜಿಲ್ಲೆಯ 11 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇದರಲ್ಲಿ 98 ಮಂದಿ ILI ಪ್ರಕರಣದಿಂದ, 12 SARI ಪ್ರಕರಣದಿಂದ, 15 ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗುಲಿದೆ. ಉಳಿದ 69 ಮಂದಿಯ ಕೊರೊನಾ ಸಂಪರ್ಕದ ಮೂಲ ಪತ್ತೆಯಾಗಿಲ್ಲ.

ಇಂದು 183 ಮಂದಿ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ 3,487 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಸದ್ಯ 3,347 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.