ETV Bharat / state

ಮುಖ್ಯಮಂತ್ರಿ ಪರಿಹಾರ ನಿಧಿಗೆ ₹ 25 ಕೋಟಿ ನೀಡಿದ ಡಾ.ವೀರೇಂದ್ರ ಹೆಗ್ಗಡೆ.. - Chief Minister's Relief Fund

ಧರ್ಮಸ್ಥಳ ಧರ್ಮಾಧಿಕಾರಿ ಶ್ರೀವೀರೇಂದ್ರ ಹೆಗ್ಗಡೆ ಅವರು ಮುಖ್ಯಮಂತ್ರಿ ಪರಿಹಾರ ನಿಧಿಗೆ ₹ 25 ಕೋಟಿ ಧರ್ಮ ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರು ಮಾಡಿದ್ದಾರೆ.

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
author img

By

Published : Aug 17, 2019, 8:53 PM IST

ಮಂಗಳೂರು: ರಾಜ್ಯದಲ್ಲಿ ಹಿಂದೆಂದೂ ಸಂಭವಿಸದಂತಹ ನೆರೆ ಹಾನಿ ಉಂಟಾದ ಹಿನ್ನೆಲೆಯಲ್ಲಿ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹ 25 ಕೋಟಿ ಮಂಜೂರು ಮಾಡಲಾಗುತ್ತಿದೆ. ಇದನ್ನ ಮುಖ್ಯಮಂತ್ರಿ ಪರಿಹಾರ ನಿಧಿಗೆ ವರ್ಗಾಯಿಸಲಾಗುವುದು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದರು.

ಧರ್ಮಸ್ಥಳ ಧರ್ಮಾಧಿಕಾರಿ ಶ್ರೀವೀರೇಂದ್ರ ಹೆಗ್ಗಡೆ..

ಧರ್ಮಸ್ಥಳದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ಗದಗ, ಹಾವೇರಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ನೆರೆ ಬಂದಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ ಸಮೀಕ್ಷೆಯಂತೆ ರಾಜ್ಯದಾದ್ಯಂತ ಸುಮಾರು 20 ಸಾವಿರ ಮನೆಗಳು, 28 ಸಾವಿರ ಕುಟುಂಬಗಳ ಕೃಷಿ ಭೂಮಿ ನೀರು ಪಾಲಾಗಿವೆ. ಇದೊಂದು ಭೀಕರ ದುರಂತ ಎಂದರು.

ಎಸ್‌ಡಿಎಂ ಶಿಕ್ಷಣ ಸಂಸ್ಥೆ ಬೆಳ್ತಂಗಡಿ ತಾಲೂಕಿನ ಶಾಲಾ ಕಾಲೇಜುಗಳಲ್ಲಿ ಅಭ್ಯಸಿಸುತ್ತಿರುವ ನೆರೆ ಹಾವಳಿ ಬಾಧಿತ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಅನೇಕ ರೀತಿಯ ಸೌಲಭ್ಯಗಳನ್ನು ಘೋಷಿಸಿದೆ. ಈವರೆಗೆ ಸುಮಾರು 19 ಸಾವಿರ ಬೆಡ್‍ಶೀಟ್‍ಗಳನ್ನು ಹಂಚಲಾಗಿದೆ. ಮುಳುಗಡೆಯಾದ ಮನೆಗಳನ್ನು ಸ್ವಚ್ಛಗೊಳಿಸಲು ಸುಮಾರು 2 ಟನ್‍ನಷ್ಟು ಬ್ಲೀಚಿಂಗ್ ಪೌಡರ್​ ನೀಡಿದೆ. ಸುಮಾರು 4 ಸಾವಿರ ಕುಟುಂಬಗಳಿಗೆ ತಲಾ ₹ 1 ಸಾವಿರ ಮೌಲ್ಯದ ತುರ್ತು ಗೃಹ ಉಪಯೋಗಿ ವಸ್ತುಗಳನ್ನು ಒದಗಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಯೋಜನೆಯ ವತಿಯಿಂದ ₹ 50 ಲಕ್ಷ ಮೊತ್ತವನ್ನು ‘ಕಾಳಜಿ ಬೆಳ್ತಂಗಡಿ ಫ್ಲಡ್ ರಿಲೀಫ್‍ಫಂಡ್‍ಗೆ’ ವರ್ಗಾಯಿಸಲಾಗುವುದು ಎಂದರು.

ವಿಪತ್ತು ನಿರ್ವಹಣಾ ವೇದಿಕೆ ಸ್ಥಾಪನೆ : ನೆರೆ ಹಾವಳಿ, ಭೂಕುಸಿತ, ಬಿರುಗಾಳಿ ಮುಂತಾದ ಪ್ರಕೃತಿ ವಿಕೋಪಗಳು ಪುನರಾವರ್ತಿಸುತ್ತಿರುವ ಹಿನ್ನಲೆಯಲ್ಲಿ ತುರ್ತು ರಕ್ಷಣೆಗೆಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗ ಸಂಸ್ಥೆಗಳ ಪೈಕಿ ಜನ ಜಾಗೃತಿ ವೇದಿಕೆ, ಪ್ರಗತಿಬಂಧು ಒಕ್ಕೂಟಗಳು, ಜ್ಞಾನವಿಕಾಸ ಕೇಂದ್ರಗಳು, ಸ್ವಸಹಾಯ ಸಂಘಗಳು ಜಂಟಿ ಗುಂಪುಗಳು, ಸಕ್ರಿಯವಾಗಿವೆ. ಆಯ್ದ ಸದಸ್ಯರ ತಂಡವೊಂದನ್ನು ಪ್ರತಿ ತಾಲೂಕು ಮಟ್ಟದಲ್ಲಿ ರಚಿಸಲಾಗುವುದು.

ಪಶ್ಚಿಮ ಘಟ್ಟ ಅಧ್ಯಯನ ಪೀಠ ಸ್ಥಾಪನೆ: ಜೀವ ವೈವಿಧ್ಯಗಳಿಂದ ಕೂಡಿರುವ ಪಶ್ಚಿಮ ಘಟ್ಟ ಶ್ರೇಣಿಯು ಹಲವಾರು ಕಾರಣಗಳಿಂದ ಸೂಕ್ಷ್ಮ ಸನ್ನಿವೇಶ ನಿರ್ಮಾಣವಾಗಿದೆ. ಘಟ್ಟ ಪ್ರದೇಶದಲ್ಲಿ ಸುಮಾರು 500ಕ್ಕೂ ಹೆಚ್ಚಿನ ಸ್ಥಳಗಳಲ್ಲಿ ಭೂಕುಸಿತ ಉಂಟಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಾಕೃತಿಕ ಸಮತೋಲನವನ್ನು ಪಶ್ಚಿಮ ಘಟ್ಟದಲ್ಲಿ ಕಾಪಾಡಿಕೊಳ್ಳಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತಂತೆ, ಧರ್ಮಸ್ಥಳದ ವತಿಯಿಂದ ರಾಷ್ಟ್ರೀಯ ಮಟ್ಟದ ಸಂಶೋಧನಾ ಸಂಸ್ಥೆಯಲ್ಲಿ ₹ 2 ಕೋಟಿ ನೆರವಿನೊಂದಿಗೆ ಪಶ್ಚಿಮ ಘಟ್ಟ ಅಧ್ಯಯನ ಪೀಠ’ವನ್ನು ಸ್ಥಾಪಿಸಲಾಗುವುದು ಎಂದರು. ಶಾಸಕ ಹರೀಶ್ ಪೂಂಜಾ ಇದ್ದರು.

ಕೇಂದ್ರ ಸರ್ಕಾರಕ್ಕೆ ಮನವಿ: ಕೂಡಲೇ ರಾಜ್ಯದಲ್ಲಿನ ನೆರೆ ಹಾವಳಿಗೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ಮಟ್ಟದಲ್ಲಿ ಅನುದಾನ ಬಿಡುಗಡೆಗೊಳಸಬೇಕು ಎಂದು ಮನವಿ ಮಾಡಿಕೊಂಡರು.

ಮಂಗಳೂರು: ರಾಜ್ಯದಲ್ಲಿ ಹಿಂದೆಂದೂ ಸಂಭವಿಸದಂತಹ ನೆರೆ ಹಾನಿ ಉಂಟಾದ ಹಿನ್ನೆಲೆಯಲ್ಲಿ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹ 25 ಕೋಟಿ ಮಂಜೂರು ಮಾಡಲಾಗುತ್ತಿದೆ. ಇದನ್ನ ಮುಖ್ಯಮಂತ್ರಿ ಪರಿಹಾರ ನಿಧಿಗೆ ವರ್ಗಾಯಿಸಲಾಗುವುದು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದರು.

ಧರ್ಮಸ್ಥಳ ಧರ್ಮಾಧಿಕಾರಿ ಶ್ರೀವೀರೇಂದ್ರ ಹೆಗ್ಗಡೆ..

ಧರ್ಮಸ್ಥಳದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ಗದಗ, ಹಾವೇರಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ನೆರೆ ಬಂದಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ ಸಮೀಕ್ಷೆಯಂತೆ ರಾಜ್ಯದಾದ್ಯಂತ ಸುಮಾರು 20 ಸಾವಿರ ಮನೆಗಳು, 28 ಸಾವಿರ ಕುಟುಂಬಗಳ ಕೃಷಿ ಭೂಮಿ ನೀರು ಪಾಲಾಗಿವೆ. ಇದೊಂದು ಭೀಕರ ದುರಂತ ಎಂದರು.

ಎಸ್‌ಡಿಎಂ ಶಿಕ್ಷಣ ಸಂಸ್ಥೆ ಬೆಳ್ತಂಗಡಿ ತಾಲೂಕಿನ ಶಾಲಾ ಕಾಲೇಜುಗಳಲ್ಲಿ ಅಭ್ಯಸಿಸುತ್ತಿರುವ ನೆರೆ ಹಾವಳಿ ಬಾಧಿತ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಅನೇಕ ರೀತಿಯ ಸೌಲಭ್ಯಗಳನ್ನು ಘೋಷಿಸಿದೆ. ಈವರೆಗೆ ಸುಮಾರು 19 ಸಾವಿರ ಬೆಡ್‍ಶೀಟ್‍ಗಳನ್ನು ಹಂಚಲಾಗಿದೆ. ಮುಳುಗಡೆಯಾದ ಮನೆಗಳನ್ನು ಸ್ವಚ್ಛಗೊಳಿಸಲು ಸುಮಾರು 2 ಟನ್‍ನಷ್ಟು ಬ್ಲೀಚಿಂಗ್ ಪೌಡರ್​ ನೀಡಿದೆ. ಸುಮಾರು 4 ಸಾವಿರ ಕುಟುಂಬಗಳಿಗೆ ತಲಾ ₹ 1 ಸಾವಿರ ಮೌಲ್ಯದ ತುರ್ತು ಗೃಹ ಉಪಯೋಗಿ ವಸ್ತುಗಳನ್ನು ಒದಗಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಯೋಜನೆಯ ವತಿಯಿಂದ ₹ 50 ಲಕ್ಷ ಮೊತ್ತವನ್ನು ‘ಕಾಳಜಿ ಬೆಳ್ತಂಗಡಿ ಫ್ಲಡ್ ರಿಲೀಫ್‍ಫಂಡ್‍ಗೆ’ ವರ್ಗಾಯಿಸಲಾಗುವುದು ಎಂದರು.

ವಿಪತ್ತು ನಿರ್ವಹಣಾ ವೇದಿಕೆ ಸ್ಥಾಪನೆ : ನೆರೆ ಹಾವಳಿ, ಭೂಕುಸಿತ, ಬಿರುಗಾಳಿ ಮುಂತಾದ ಪ್ರಕೃತಿ ವಿಕೋಪಗಳು ಪುನರಾವರ್ತಿಸುತ್ತಿರುವ ಹಿನ್ನಲೆಯಲ್ಲಿ ತುರ್ತು ರಕ್ಷಣೆಗೆಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗ ಸಂಸ್ಥೆಗಳ ಪೈಕಿ ಜನ ಜಾಗೃತಿ ವೇದಿಕೆ, ಪ್ರಗತಿಬಂಧು ಒಕ್ಕೂಟಗಳು, ಜ್ಞಾನವಿಕಾಸ ಕೇಂದ್ರಗಳು, ಸ್ವಸಹಾಯ ಸಂಘಗಳು ಜಂಟಿ ಗುಂಪುಗಳು, ಸಕ್ರಿಯವಾಗಿವೆ. ಆಯ್ದ ಸದಸ್ಯರ ತಂಡವೊಂದನ್ನು ಪ್ರತಿ ತಾಲೂಕು ಮಟ್ಟದಲ್ಲಿ ರಚಿಸಲಾಗುವುದು.

ಪಶ್ಚಿಮ ಘಟ್ಟ ಅಧ್ಯಯನ ಪೀಠ ಸ್ಥಾಪನೆ: ಜೀವ ವೈವಿಧ್ಯಗಳಿಂದ ಕೂಡಿರುವ ಪಶ್ಚಿಮ ಘಟ್ಟ ಶ್ರೇಣಿಯು ಹಲವಾರು ಕಾರಣಗಳಿಂದ ಸೂಕ್ಷ್ಮ ಸನ್ನಿವೇಶ ನಿರ್ಮಾಣವಾಗಿದೆ. ಘಟ್ಟ ಪ್ರದೇಶದಲ್ಲಿ ಸುಮಾರು 500ಕ್ಕೂ ಹೆಚ್ಚಿನ ಸ್ಥಳಗಳಲ್ಲಿ ಭೂಕುಸಿತ ಉಂಟಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಾಕೃತಿಕ ಸಮತೋಲನವನ್ನು ಪಶ್ಚಿಮ ಘಟ್ಟದಲ್ಲಿ ಕಾಪಾಡಿಕೊಳ್ಳಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತಂತೆ, ಧರ್ಮಸ್ಥಳದ ವತಿಯಿಂದ ರಾಷ್ಟ್ರೀಯ ಮಟ್ಟದ ಸಂಶೋಧನಾ ಸಂಸ್ಥೆಯಲ್ಲಿ ₹ 2 ಕೋಟಿ ನೆರವಿನೊಂದಿಗೆ ಪಶ್ಚಿಮ ಘಟ್ಟ ಅಧ್ಯಯನ ಪೀಠ’ವನ್ನು ಸ್ಥಾಪಿಸಲಾಗುವುದು ಎಂದರು. ಶಾಸಕ ಹರೀಶ್ ಪೂಂಜಾ ಇದ್ದರು.

ಕೇಂದ್ರ ಸರ್ಕಾರಕ್ಕೆ ಮನವಿ: ಕೂಡಲೇ ರಾಜ್ಯದಲ್ಲಿನ ನೆರೆ ಹಾವಳಿಗೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ಮಟ್ಟದಲ್ಲಿ ಅನುದಾನ ಬಿಡುಗಡೆಗೊಳಸಬೇಕು ಎಂದು ಮನವಿ ಮಾಡಿಕೊಂಡರು.

Intro:ಮಂಗಳೂರು; ರಾಜ್ಯದಲ್ಲಿ ಹಿಂದೆಂದೂ ಕಾಣದಷ್ಟು ಪ್ರಮಾಣದಲ್ಲಿ ನೆರೆ ಹಾನಿ ಸಂಭವಿಸಿರುವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ. 25 ಕೋಟಿ ಮಂಜೂರು ಮಾಡಲಾಗಿದೆ. ಈ ಮೊತ್ತವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ವರ್ಗಾಯಿಸಲಾಗುವುದು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.Body:
ಧರ್ಮಸ್ಥಳದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ
ಕನ್ನಡ, ಉತ್ತರ ಕನ್ನಡ, ಬೆಳಗಾಮ್, ಧಾರವಾಡ, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ಗದಗ, ಹಾವೇರಿ, ಕೊಡಗು,
ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಹಾನಿಯಾಗಿರುವುದು ನಮ್ಮ ಗಮನಕ್ಕೆ ಬಂದಿರುತ್ತದೆ. ಶ್ರೀ ಕ್ಷೇತ್ರ ಧರ್ಮಸ್ಥಳ
ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ ಸಮೀಕ್ಷೆಯಂತೆ ರಾಜ್ಯದಾದ್ಯಂತ 20,827 ಮನೆಗಳು ಹಾನಿಗೊಳಗಾಗಿವೆ. 28,288
ಕುಟುಂಬಗಳ ಕೃಷಿಭೂಮಿಗಳು ನೀರು ಪಾಲಾಗಿವೆ. ಕಡುಬಡವರು ಕಷ್ಟಪಟ್ಟು ಗಳಿಸಿಕೊಂಡ ಗೃಹೋಪಯೋಗಿ ವಸ್ತುಗಳು
22,711 ಕುಟುಂಬಗಳಲ್ಲಿ ನಾಶವಾಗಿವೆ. ಇದೊಂದು ಭೀಕರ ದುರಂತವಾಗಿದ್ದು ಇದರಿಂದ ಚೇತರಿಸಿಕೊಳ್ಳಲು ರಾಜ್ಯಕ್ಕೆ ಬಹಳಷ್ಟು
ಸಮಯ ಬೇಕಾಗಬಹುದಾಗಿದೆ.ತನ್ನ ವಿವಿಧ ಸಂಸ್ಥೆಗಳ ಮುಖಾಂತರ ಸಮಾಜ ಸೇವಾ ಕೆಲಸಗಳಲ್ಲಿ ತೊಡಗಿಕೊಂಡಿರುವ ಕ್ಷೇತ್ರ ಧರ್ಮಸ್ಥಳವು ಜನರ
ಸಂಕಷ್ಟಗಳಿಗೆ ಸ್ಪಂದಿಸುತ್ತಿದೆ.
ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ ತನ್ನ ಬೆಳ್ತಂಗಡಿ ತಾಲೂಕಿನ ಶಾಲಾ ಕಾಲೇಜಿಗಳಲ್ಲಿ ಓದುತ್ತಿರುವ ಬಾಧಿತ ವಿದ್ಯಾರ್ಥಿ,
ವಿದ್ಯಾರ್ಥಿನಿಯರಿಗೆ ಅನೇಕ ರೀತಿಯ ಸೌಲಭ್ಯಗಳನ್ನು ಘೋಷಿಸಲಾಗಿದೆ. ಯೂನಿಫಾರ್ಮ್ ಕಳೆದುಕೊಂಡವರಿಗೆ ಎರಡು ಜೊತೆ
ಯೂನಿಫಾರ್ಮ್, ಅಗತ್ಯ ಬಿದ್ದಿರುವ ವಿದ್ಯಾಥಿಗಳಿಗೆ ಪಠ್ಯಪುಸ್ತಕಗಳು, ನೋಟ್‍ಬುಕ್, ಸ್ಕೂಲ್ ಬ್ಯಾಗ್, ಬಟ್ಟೆ, ಸಂಸ್ಥೆಯ
ವಾಹನ ಹೋಗುತ್ತಿರುವಲ್ಲಿ ವಾಹನದ ವವಸ್ಥೆ, ಅಗತ್ಯವಿರುವ ಮಕ್ಕಳಿಗೆ ಉಚಿತ ಹಾಸ್ಟೆಲ್ ವ್ಯವಸ್ಥೆಯನ್ನು ಘೋಷಿಸಿದೆ. ಈ
ಸೌಲಭ್ಯಗಳನ್ನು ಪಡೆದುಕೊಳ್ಳಲು ಸಂತ್ರಸ್ಥ ವಿದ್ಯಾರ್ಥಿಗಳು ತಮ್ಮ ತಮ್ಮ ಶಾಲಾ ಕಾಲೇಜುಗಳ ಮುಖ್ಯೋಪಾಧ್ಯಾಯರು,
ಪ್ರಿನ್ಸಿಪಾಲರನ್ನು ತುರ್ತಾಗಿ ಭೇಟಿಯಾಗಲು ತಿಳಿಸಿದೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಇದುವರೆಗೆ ಸುಮಾರು 19,000 ಬೆಡ್‍ಶೀಟ್‍ಗಳನ್ನು ಹಂಚಲಾಗಿದೆ.ಮುಳುಗಡೆಯಾದ ಮನೆಗಳನ್ನು ಸ್ವಚ್ಛಗೊಳಿಸಲು ಸುಮಾರು 2 ಟನ್‍ನಷ್ಟು ಬ್ಲೀಚಿಂಗ್ ಪೌಡರ್‍ಗಳನ್ನು
ಒದಗಿಸಿಕೊಡಲಾಗಿದೆ. ನೆರೆ ಇಳಿದ ನಂತರ ಮನೆಗೆ ತೆರಳುತ್ತಿರುವ 4,990 ಕುಟುಂಬಗಳಿಗೆ ತಲಾ ರೂ. 1,000 ಮೌಲ್ಯದ ತುರ್ತು
ನಿತ್ಯೋಪಯೋಗಿ ವಸ್ತುಗಳನ್ನು ಒದಗಿಸಲಾಗಿದೆ.ಬೆಳ್ತಂಗಡಿ ತಾಲೂಕಿನಲ್ಲಿ ಜಾನುವಾರುಗಳಿಗೆ ಮೇವು ಕಡಿಮೆಯಾಗಿರುವ ಹಿನ್ನಲೆಯಲ್ಲಿ ತೀರ್ಥಹಳ್ಳಿಯಿಂದ ತಾಲೂಕಿನಿಂದ
ಎರಡು ಲೋಡ್ ಹುಲ್ಲು ತರಿಸಲಾಗುತ್ತಿದ್ದು, ಹೊಳೆನರಸೀಪುರದಿಂದ ಸೋಮವಾರ ಮೂರು ಲೋಡ್ ಹುಲ್ಲನ್ನು
ಒದಗಿಸಲಾಗುವುದು. ಇದಲ್ಲದೆ ಸಮಸ್ಯೆಗೊಳಗಾಗಿರುವ ಕುಟುಂಬಗಳಿಗೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರವನ್ನು ನೀಡಲಾಗುತ್ತಿದೆ. ಸ್ವಸಹಾಯ ಸಂಘಗಳ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ಯೋಜನೆಯ ಕಾರ್ಯಕರ್ತರು ನೆರೆಪರಿಹಾರ
ಕಾರ್ಯಕ್ರಮದಲ್ಲಿ ಈಗಾಗಲೇ ತೊಡಗಿಕೊಂಡಿದ್ದಾರೆ ಎಂದರು.

ಬೆಳ್ತಂಗಡಿ ತಾಲೂಕಿನಲ್ಲಿ 174 ಮನೆಗಳು ಹಾನಿಯಾಗಿರುವ ಮಾಹಿತಿ ಇದ್ದು ಬೆಳ್ತಂಗಡಿ
ತಾಲೂಕಿನ ಸಂತ್ರಸ್ಥ ಕುಟುಂಬಗಳಿಗೆ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಯೋಜನೆಯ ವತಿಯಿಂದ ರೂ. 50 ಲಕ್ಷ
ಮೊತ್ತವನ್ನು ‘ಕಾಳಜಿ ಬೆಳ್ತಂಗಡಿ ಫ್ಲಡ್ ರಿಲೀಫ್‍ಫಂಡ್‍ಗೆ’ ವರ್ಗಾಯಿಸಲಾಗುವುದು ಎಂದು ತಿಳಿಸಿದರು.


ವಿಪತ್ತು ನಿರ್ವಹಣಾ ವೇದಿಕೆ ಸ್ಥಾಪನೆ :
ನೆರೆ ಹಾವಳಿ, ಭೂಕುಸಿತ, ಬಿರುಗಾಳಿ ಮುಂತಾದ ಪ್ರಕೋಪಗಳು ಪುನರಾವರ್ತಿಸುತ್ತಿರುವ ಹಿನ್ನಲೆಯಲ್ಲಿ ತುರ್ತು ರಕ್ಷಣೆಗೆಂದು
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆಗಳ ಪೈಕಿ ಜನಜಾಗೃತಿ ವೇದಿಕೆ, ಪ್ರಗತಿಬಂಧು ಒಕ್ಕೂಟಗಳು, ಜ್ಞಾನವಿಕಾಸ
ಕೇಂದ್ರಗಳು, ಸ್ವಸಹಾಯ ಸಂಘಗಳು ಜಂಟಿ ಬಾಧ್ಯತಾ ಗುಂಪುಗಳು, ಸಕ್ರಿಯವಾಗಿದ್ದು ಇವರುಗಳಿಂದ ಆಯ್ದ ಸದಸ್ಯರ
ತಂಡವೊಂದನ್ನು ಪ್ರತಿ ತಾಲೂಕು ಮಟ್ಟದಲ್ಲಿ ರಚಿಸಲಾಗುವುದು. ಪ್ರತಿಯೊಂದು ತಾಲೂಕಿನಲ್ಲಿಯೂ 100 ಸದಸ್ಯರುಗಳ ವಿಪತ್ತು
ನಿರ್ವಹಣಾ ತಂಡವೊಂದನ್ನು ರಚಿಸಲಾಗುವುದು. ರಾಜ್ಯದಾದ್ಯಂತ ಸುಮಾರು 2 ಲಕ್ಷ ಸದಸ್ಯರುಗಳುಳ್ಳ
‘ವಿಪತ್ತು ನಿರ್ವಹಣಾ ವೇದಿಕೆ’ಯನ್ನು ಸ್ಥಾಪಿಸಲಾಗುವುದು. ಇವರಿಗೆ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆಯಿಂದ ತರಬೇತಿ
ದೊರಕಿಸುವುದಲ್ಲದೆ, ಅಗತ್ಯವಿರುವ ಉಪಕರಣಗಳನ್ನು ದಾಸ್ತಾನು ಇರಿಸಲಾಗುವುದು. ಮುಂದಿನ ದಿನಗಳಲ್ಲಿ ಯಾವುದೇ
ತಾಲೂಕಿನಲ್ಲಿ ಯಾವುದೇ ಪ್ರಾಕೃತಿಕ ವಿಕೋಪ ಉಂಟಾದಲ್ಲಿ ಕೂಡಲೇ ಸ್ಪಂದಿಸುವಂತೆ ವೇದಿಕೆಯು ಕಾರ್ಯನಿರ್ವಹಿಸುವುದು . ಈ ಕುರಿತಂತೆ ಎನ್.ಡಿ.ಆರ್.ಎಫ್ (ನ್ಯಾಶನಲ್ ಡಿಸಾಸ್ಟರ್ ರೆಸ್ಪಾನ್ಸ್ ಫೋರ್ಸ್) ಮತ್ತು ಸಮಾನ ಮನಸ್ಕರೊಂದಿಗೆ
ಸಮಾಲೋಚನೆ ನಡೆಸಿ ಸದ್ಯದಲ್ಲಿಯೇ ಇದಕ್ಕೆ ಅಂತಿಮ ಸ್ವರೂಪವನ್ನು ನೀಡಲಾಗುವುದು. ಈ ಕಾರ್ಯಕ್ರಮಕ್ಕೆ ಅಗತ್ಯವಿರುವ
ಹಣವನ್ನು ಕ್ಷೇತ್ರದಿಂದ ಒದಗಿಸಲಾಗುವುದು ಎಂದು ತಿಳಿಸಿದರು.


ಪಶ್ಚಿಮ ಘಟ್ಟ ಅಧ್ಯಯನ ಪೀಠ ಸ್ಥಾಪನೆ :
ಜೀವವೈವಿದ್ಯಗಳಿಂದ ಕೂಡಿರುವ ಪಶ್ಚಿಮ ಘಟ್ಟ ಶ್ರೇಣಿಯು ಹಲವಾರು ಕಾರಣಗಳಿಂದ ಸೂಕ್ಷ್ಮ ಸನ್ನಿವೇಶ ನಿರ್ಮಾಣವಾಗಿದೆ.
ಈ ವರ್ಷ ಘಟ್ಟ ಪ್ರದೇಶದಲ್ಲಿ ಸುಮಾರು 500 ಕ್ಕೂ ಮಿಕ್ಕಿದ ಸ್ಥಳಗಳಲ್ಲಿ ಭೂಕುಸಿತ ಉಂಟಾಗಿರುವುದು ಆತಂಕಕ್ಕೆ
ಕಾರಣವಾಗಿದೆ. ಜೊತೆಯಲ್ಲಿ ಈ ಘಟ್ಟ ಪ್ರದೇಶದಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಪ್ರಾಕೃತಿಕ ದುರಂತದ ಸಾಧ್ಯತೆಗಳು
ಹೆಚ್ಚಾಗ ತೊಡಗಿವೆ. ಈ ಹಿನ್ನಲೆಯಲ್ಲಿ ಪ್ರಾಕೃತಿಕ ಸಮತೋಲನವನ್ನು ಪಶ್ಚಿಮ ಘಟ್ಟದಲ್ಲಿ ಕಾಪಾಡಿಕೊಳ್ಳಲು
ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತಂತೆ, ಇಲ್ಲಿ ವಾಸಿಸುತ್ತಿರುವ ಜನಸಮೂಹದ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳುವ ಕುರಿತಂತೆ
ಕ್ಷೇತ್ರ ಧರ್ಮಸ್ಥಳದ ವತಿಯಿಂದ ರಾಷ್ಟ್ರೀಯ ಮಟ್ಟದ ಸಂಶೋಧನಾ ಸಂಸ್ಥೆಯಲ್ಲಿ ರೂ. 2 ಕೋಟಿ ನೆರವಿನೊಂದಿಗೆ ಪಶ್ಚಿಮ ಘಟ್ಟ ಅಧ್ಯಯನ ಪೀಠ’ವನ್ನು ಸ್ಥಾಪಿಸಲಾಗುವುದು. ಪಶ್ಚಿಮ ಘಟ್ಟದ ಪ್ರಸ್ತುತ ಪರಿಸ್ಥಿತಿ ಮತ್ತು ಭವಿಷ್ಯದ ಕ್ರಮಗಳ
ಕುರಿತಂತೆ ಸಂಶೋಧನಾ ವರದಿಯೊಂದನ್ನು ತಯಾರಿಸಲಾಗುವುದು. ನಂತರ ಸಮಾನ ಮನಸ್ಕರ ಭಾಗವಹಿಸುವಿಕೆಯೊಂದಿಗೆ
ಸರಕಾರದ ಗಮನ ಸೆಳೆಯಲಾಗುವುದು. ಇದಕ್ಕಾಗಿ ಎರಡು ವರ್ಷಗಳ ಕಾಲಮಿತಿಯೊಂದಿಗೆ ಅಧ್ಯಯನ ಪೀಠವು
ಕ್ರಿಯಾಯೋಜನೆಯನ್ನು ರೂಪಿಸಿಕೊಂಡು ಕಾರ್ಯನಿರ್ವಹಿಸಲಾಗುವುದು ಎಂದರು.
ಈ ಸಂದರ್ಬದಲ್ಲಿ ಶಾಸಕ ಹರೀಶ್ ಪೂಂಜಾ ಉಪಸ್ಥಿತರಿದ್ದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.