ETV Bharat / state

ಪಂಜಿಕಲ್ಲಿನಲ್ಲಿ ಮತ್ತೆ ಭೂಕುಸಿತ: ಪ್ರಾಣಾಪಾಯದಿಂದ ನಾಲ್ವರು ಪಾರು

author img

By

Published : Jul 10, 2022, 8:29 PM IST

ಮುಂದುವರಿದ ಮಳೆ- ಬಂಟ್ವಾಳ ತಾಲೂಕಿನಲ್ಲಿ ಮತ್ತೆ ಭೂಕುಸಿತ- ಮುಕುಡ ಎಂಬಲ್ಲಿ ಅದೃಷ್ಟವಶಾತ್​ ನಾಲ್ವರು ಪಾರು

ಪಂಜಿಕಲ್ಲಿನಲ್ಲಿ ಮತ್ತೆ ಭೂಕುಸಿತ
ಪಂಜಿಕಲ್ಲಿನಲ್ಲಿ ಮತ್ತೆ ಭೂಕುಸಿತ

ಬಂಟ್ವಾಳ(ದಕ್ಷಿಣ ಕನ್ನಡ): ಪಂಜಿಕಲ್ಲಿನ ಮುಕುಡ ಎಂಬಲ್ಲಿ ಜುಲೈ 6ರಂದು ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದರು. ಇದೀಗ ಮತ್ತೆ ಇಂದು (ಭಾನುವಾರ) ಸಂಜೆ ಭೂಕುಸಿತ ಉಂಟಾಗಿದೆ. ಅಧಿಕಾರಿಗಳ ಸಮಯಪ್ರಜ್ಞೆಯಿಂದ, ಸ್ಥಳದಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪಂಜಿಕಲ್ಲಿನಲ್ಲಿ ಮತ್ತೆ ಭೂಕುಸಿತ

ಭಾನುವಾರ ಸಂಜೆ ಘಟನಾ ಸ್ಥಳಕ್ಕೆ ಸೂಚನೆ ಹೊರತಾಗಿಯೂ ಸಾರ್ವಜನಿಕರು ಬರುತ್ತಿದ್ದರೂ ತಾಲೂಕು ಆಡಳಿತ ಮತ್ತು ಸ್ಥಳೀಯ ಆಡಳಿತದ ಎಚ್ಚರಿಕೆಯ ಹೊರತಾಗಿಯೂ ಘಟನಾ ಸ್ಥಳ ವೀಕ್ಷಣೆಗೆ ಜನರು ಹೋಗುತ್ತಿರುವ ವಿಷಯ ತಿಳಿದು ತಕ್ಷಣ ಕಾರ್ಯಪ್ರವೃತ್ತರಾದ ಬಂಟ್ವಾಳ ತಹಶೀಲ್ದಾರ್ ಡಾ. ಸ್ಮಿತಾರಾಮು, ಆರಕ್ಷಕ ಇಲಾಖೆ ಗ್ರಾಮ ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ತುರ್ತು ಸೇವಾ ತಂಡ ದೊಡ್ಡ ಅನಾಹುತವೊಂದನ್ನು ತಪ್ಪಿಸಿದೆ.

ಘಟನೆ ವಿವರ: ಗ್ರಾಮ ಪಂಚಾಯತ್ ಅಧ್ಯಕ್ಷ ಸಂಜೀವ ಪೂಜಾರಿ ಸೂಚನೆ ಮೇರೆಗೆ ಸ್ಥಳೀಯ ಸದಸ್ಯರಾದ ಮೋಹನ್ ದಾಸ್, ತುರ್ತು ಸೇವಾ ತಂಡದ ಸದಸ್ಯರಾದ ಯಶವಂತ್ ಜೋರಾ ಹಾಗೂ ಆರಕ್ಷಕ ಸಿಬ್ಬಂದಿ ಶೇಖರ್, ಮಹೇಂದ್ರ ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಈ ಸಂದರ್ಭ ಸ್ಥಳದಲ್ಲಿದ್ದ ನಾಲ್ಕು ಮಂದಿಯನ್ನು ತೆರವುಗೊಳಿಸಲಾಗಿದೆ. ಅದಾಗಿ ಕೆಲವೇ ಕ್ಷಣಗಳಲ್ಲಿ ಗುಡ್ಡ ಕುಸಿದು ಬಿದ್ದಿದೆ. ನಾಲ್ವರು ತಾಲೂಕು ಆಡಳಿತ ಮತ್ತು ಸ್ಥಳೀಯ ಆಡಳಿತದ ಸಮಯ ಪ್ರಜ್ಞೆಯಿಂದಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಓದಿ: ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ.. ಕರಾವಳಿಗೆ ಬದಲಿ ಮಾರ್ಗ

ಬಂಟ್ವಾಳ(ದಕ್ಷಿಣ ಕನ್ನಡ): ಪಂಜಿಕಲ್ಲಿನ ಮುಕುಡ ಎಂಬಲ್ಲಿ ಜುಲೈ 6ರಂದು ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದರು. ಇದೀಗ ಮತ್ತೆ ಇಂದು (ಭಾನುವಾರ) ಸಂಜೆ ಭೂಕುಸಿತ ಉಂಟಾಗಿದೆ. ಅಧಿಕಾರಿಗಳ ಸಮಯಪ್ರಜ್ಞೆಯಿಂದ, ಸ್ಥಳದಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪಂಜಿಕಲ್ಲಿನಲ್ಲಿ ಮತ್ತೆ ಭೂಕುಸಿತ

ಭಾನುವಾರ ಸಂಜೆ ಘಟನಾ ಸ್ಥಳಕ್ಕೆ ಸೂಚನೆ ಹೊರತಾಗಿಯೂ ಸಾರ್ವಜನಿಕರು ಬರುತ್ತಿದ್ದರೂ ತಾಲೂಕು ಆಡಳಿತ ಮತ್ತು ಸ್ಥಳೀಯ ಆಡಳಿತದ ಎಚ್ಚರಿಕೆಯ ಹೊರತಾಗಿಯೂ ಘಟನಾ ಸ್ಥಳ ವೀಕ್ಷಣೆಗೆ ಜನರು ಹೋಗುತ್ತಿರುವ ವಿಷಯ ತಿಳಿದು ತಕ್ಷಣ ಕಾರ್ಯಪ್ರವೃತ್ತರಾದ ಬಂಟ್ವಾಳ ತಹಶೀಲ್ದಾರ್ ಡಾ. ಸ್ಮಿತಾರಾಮು, ಆರಕ್ಷಕ ಇಲಾಖೆ ಗ್ರಾಮ ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ತುರ್ತು ಸೇವಾ ತಂಡ ದೊಡ್ಡ ಅನಾಹುತವೊಂದನ್ನು ತಪ್ಪಿಸಿದೆ.

ಘಟನೆ ವಿವರ: ಗ್ರಾಮ ಪಂಚಾಯತ್ ಅಧ್ಯಕ್ಷ ಸಂಜೀವ ಪೂಜಾರಿ ಸೂಚನೆ ಮೇರೆಗೆ ಸ್ಥಳೀಯ ಸದಸ್ಯರಾದ ಮೋಹನ್ ದಾಸ್, ತುರ್ತು ಸೇವಾ ತಂಡದ ಸದಸ್ಯರಾದ ಯಶವಂತ್ ಜೋರಾ ಹಾಗೂ ಆರಕ್ಷಕ ಸಿಬ್ಬಂದಿ ಶೇಖರ್, ಮಹೇಂದ್ರ ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಈ ಸಂದರ್ಭ ಸ್ಥಳದಲ್ಲಿದ್ದ ನಾಲ್ಕು ಮಂದಿಯನ್ನು ತೆರವುಗೊಳಿಸಲಾಗಿದೆ. ಅದಾಗಿ ಕೆಲವೇ ಕ್ಷಣಗಳಲ್ಲಿ ಗುಡ್ಡ ಕುಸಿದು ಬಿದ್ದಿದೆ. ನಾಲ್ವರು ತಾಲೂಕು ಆಡಳಿತ ಮತ್ತು ಸ್ಥಳೀಯ ಆಡಳಿತದ ಸಮಯ ಪ್ರಜ್ಞೆಯಿಂದಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಓದಿ: ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ.. ಕರಾವಳಿಗೆ ಬದಲಿ ಮಾರ್ಗ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.