ETV Bharat / state

ತಣ್ಣೀರು ಬಾವಿ ಬೀಚ್​ ಅಭಿವೃದ್ಧಿಗೆ 7 ಕೋಟಿ: ಶಾಸಕ ಭರತ್ ಶೆಟ್ಟಿ - ಕರಾವಳು ಗೌರವ ಪ್ರಶಸ್ತಿ ಪ್ರದಾನ

ತಣ್ಣೀರು ಬಾವಿ ಬೀಚ್​ ಅಭಿವೃದ್ಧಿಗೆ 7 ಕೋಟಿ ಬಿಡುಗಡೆ. ಪಣಂಬೂರು ಕಡಲ ಕಿನಾರೆ ಗುತ್ತಿಗೆ ಪಡೆಯುವ ಚಿಂತನೆ ನಡೆಸಿರುವುದಾಗಿ ತಿಳಿಸಿದ ಶಾಸಕ ಭರತ್ ಶೆಟ್ಟಿ.

devlopment-of-cold-water-well-beach-in-mangalore
ಶಾಸಕ ಡಾ.ಭರತ್ ಶೆಟ್ಟಿ ಅವರಿಂದ ಪತ್ರಕರ್ತ ಮನೋಹರ ಪ್ರಸಾದ್ ಅವರಿಗೆ ಸನ್ಮಾನ
author img

By

Published : Jan 20, 2020, 4:56 AM IST

ಮಂಗಳೂರು: ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರ ಚಿಂತನೆ ನಡೆಸಿದ್ದು, ತಣ್ಣೀರು ಬಾವಿ ಬೀಚ್​ ಅಭಿವೃದ್ಧಿಗೆ 7 ಕೋಟಿ ಬಿಡುಗಡೆಗೊಳಿಸಿದೆ. ಇದರೊಟ್ಟಿಗೆ ವಿವಿಧ ಕಾಮಗಾರಿ, ಯೋಜನೆಗಳನ್ನು ಕೈಗೆತ್ತಿಕೊಳ್ಳಲಿದ್ದೇವೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಭರವಸೆ ನೀಡಿದರು.

ಶಾಸಕ ಡಾ.ಭರತ್ ಶೆಟ್ಟಿ

ಇಲ್ಲಿನ ಪಣಂಬೂರು ಕಡಲ ಕಿನಾರೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪತ್ರಕರ್ತ ಮನೋಹರ ಪ್ರಸಾದ್​ ಅವರಿಗೆ ಕರಾವಳಿ ಗೌರವ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಪ್ರವಾಸೋದ್ಯಮ ಅಭಿವೃದ್ಧಿಗೆ ಕಡಲ ಕಿನಾರೆ ಉತ್ತಮ ಪರಿಸರ. ಆದರೆ, ಪಣಂಬೂರು ಬೀಚ್​ನಲ್ಲಿ ಸ್ಥಳಾವಕಾಶ ಕೊರತೆ ಇದೆ. ಆದ್ದರಿಂದ ಪಣಂಬೂರು ಕಡಲ ಕಿನಾರೆಯನ್ನು ಎನ್ಎಂಪಿಟಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ತುಂಬಾ ವರ್ಷಗಳವರೆಗೆ ಗುತ್ತಿಗೆಕೊಳ್ಳುವ ಬಗ್ಗೆ ಚಿಂತನೆ ನಡೆಸಲಾಗಿದೆ.

ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ಕಳೆದ ಬಾರಿಯಂತೆ ಬಂಗ್ರ ಕೂಳೂರಿನ ಫಲ್ಗುಣಿ ನದಿ ತೀರದಲ್ಲಿ 'ರಿವರ್ ಫೆಸ್ಟಿವಲ್' ಅನ್ನು ಪ್ರವಾಸೋದ್ಯಮ ಇಲಾಖೆ ಆಚರಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ. ಆದ್ದರಿಂದ 18 ಎಕರೆ ರೆವಿನ್ಯೂ ಜಾಗವನ್ನು ಪ್ರವಾಸೋದ್ಯಮ ಇಲಾಖೆಗೆ ನೀಡುವ ಕೆಲಸ ನಡೆಯುತ್ತಿದೆ. ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೇ 1 ಕೋಟಿ ನದಿ ತೀರದ ರಸ್ತೆ ಅಭಿವೃದ್ಧಿಗೆ ಬಿಡುಗಡೆಗೊಳಿಸಿದೆ ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಉಪ ಜಿಲ್ಲಾಧಿಕಾರಿ ರೂಪಾ, ಮಂಗಳೂರು ಮನಪಾ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ, ಕಸಪಾ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಇದ್ದರು.

ಮಂಗಳೂರು: ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರ ಚಿಂತನೆ ನಡೆಸಿದ್ದು, ತಣ್ಣೀರು ಬಾವಿ ಬೀಚ್​ ಅಭಿವೃದ್ಧಿಗೆ 7 ಕೋಟಿ ಬಿಡುಗಡೆಗೊಳಿಸಿದೆ. ಇದರೊಟ್ಟಿಗೆ ವಿವಿಧ ಕಾಮಗಾರಿ, ಯೋಜನೆಗಳನ್ನು ಕೈಗೆತ್ತಿಕೊಳ್ಳಲಿದ್ದೇವೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಭರವಸೆ ನೀಡಿದರು.

ಶಾಸಕ ಡಾ.ಭರತ್ ಶೆಟ್ಟಿ

ಇಲ್ಲಿನ ಪಣಂಬೂರು ಕಡಲ ಕಿನಾರೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪತ್ರಕರ್ತ ಮನೋಹರ ಪ್ರಸಾದ್​ ಅವರಿಗೆ ಕರಾವಳಿ ಗೌರವ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಪ್ರವಾಸೋದ್ಯಮ ಅಭಿವೃದ್ಧಿಗೆ ಕಡಲ ಕಿನಾರೆ ಉತ್ತಮ ಪರಿಸರ. ಆದರೆ, ಪಣಂಬೂರು ಬೀಚ್​ನಲ್ಲಿ ಸ್ಥಳಾವಕಾಶ ಕೊರತೆ ಇದೆ. ಆದ್ದರಿಂದ ಪಣಂಬೂರು ಕಡಲ ಕಿನಾರೆಯನ್ನು ಎನ್ಎಂಪಿಟಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ತುಂಬಾ ವರ್ಷಗಳವರೆಗೆ ಗುತ್ತಿಗೆಕೊಳ್ಳುವ ಬಗ್ಗೆ ಚಿಂತನೆ ನಡೆಸಲಾಗಿದೆ.

ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ಕಳೆದ ಬಾರಿಯಂತೆ ಬಂಗ್ರ ಕೂಳೂರಿನ ಫಲ್ಗುಣಿ ನದಿ ತೀರದಲ್ಲಿ 'ರಿವರ್ ಫೆಸ್ಟಿವಲ್' ಅನ್ನು ಪ್ರವಾಸೋದ್ಯಮ ಇಲಾಖೆ ಆಚರಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ. ಆದ್ದರಿಂದ 18 ಎಕರೆ ರೆವಿನ್ಯೂ ಜಾಗವನ್ನು ಪ್ರವಾಸೋದ್ಯಮ ಇಲಾಖೆಗೆ ನೀಡುವ ಕೆಲಸ ನಡೆಯುತ್ತಿದೆ. ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೇ 1 ಕೋಟಿ ನದಿ ತೀರದ ರಸ್ತೆ ಅಭಿವೃದ್ಧಿಗೆ ಬಿಡುಗಡೆಗೊಳಿಸಿದೆ ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಉಪ ಜಿಲ್ಲಾಧಿಕಾರಿ ರೂಪಾ, ಮಂಗಳೂರು ಮನಪಾ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ, ಕಸಪಾ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಇದ್ದರು.

Intro:ಮಂಗಳೂರು: ನಗರದ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸಲು ಕಡಲ ಕಿನಾರೆ ಉತ್ತಮ ಪರಿಸರ. ಆದರೆ ಪಣಂಬೂರು ಬೀಚ್ ನಲ್ಲಿ ಸ್ಥಳಾವಕಾಶ ಕಡಿಮೆ ಇದೆ. ಆದ್ದರಿಂದ ಪಣಂಬೂರು ಕಡಲ ಕಿನಾರೆಯನ್ನು ಎನ್ಎಂಪಿಟಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ತುಂಬಾ ವರ್ಷಗಳವರೆಗೆ ಲೀಸ್ ಗೆ ಕೊಳ್ಳುವ ಬಗ್ಗೆ ಚಿಂತನೆ ನಡೆಸಲಾಗಿದೆ.

ನಗರದ ಪಣಂಬೂರು ಕಡಲ ಕಿನಾರೆಯಲ್ಲಿ ಪತ್ರಕರ್ತ ಮನೋಹರ ಪ್ರಸಾದ್ ಅವರಿಗೆ 'ಕರಾವಳಿ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಿ ಮಾತನಾಡಿದ ಅವರು, ತಣ್ಣೀರು ಬಾವಿ ಬೀಚ್ ಅಭಿವೃದ್ಧಿಗೆ ಸರಕಾರ ಏಳು ಕೋಟಿ ರೂ. ಹಣವನ್ನು ಮೀಸಲಿರಿಸಿದೆ. ಪಣಂಬೂರು ಬೀಚ್ ಗೂ ಇದೇ ರೀತಿಯಲ್ಲಿ ಹಣ ದೊರಕಿದ್ದಲ್ಲಿ ಇನ್ನೂ ಉತ್ತಮ ಗುಣಮಟ್ಟದಲ್ಲಿ ಅಭಿವೃದ್ಧಿ ಮಾಡಬಹುದು ಎಂದು ಹೇಳಿದರು.

ಫೆಬ್ರವರಿ ಅಥವಾ ಮಾರ್ಚ್ ತಿಂಗಳಿನಲ್ಲಿ ಕಳೆದ ಬಾರಿಯಂತೆ ಬಂಗ್ರ ಕೂಳೂರಿನ ಫಲ್ಗುಣಿ ನದೀ ತೀರದಲ್ಲಿ 'ರಿವರ್ ಫೆಸ್ಟಿವಲ್' ನ್ನು ಪ್ರವಾಸೋದ್ಯಮ ಇಲಾಖೆ ಆಚರಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ. ಆದ್ದರಿಂದ 18 ಎಕರೆ ರೆವಿನ್ಯೂ ಜಾಗವನ್ನು ಪ್ರವಾಸೋದ್ಯಮ ಇಲಾಖೆಗೆ ನೀಡುವ ಕೆಲಸ ನಡೆಯುತ್ತಿದೆ. ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೇ ಒಂದು ಕೋಟಿ ರೂ. ಬಂಗ್ರ ಕೂಳೂರಿನ ನದಿ ತೀರದ ರಸ್ತೆ ಅಭಿವೃದ್ಧಿಗೆ ನೀಡಲಾಗಿದೆ. ಇನ್ನೂ ನಾಲ್ಕೈದು ಕೋಟಿ ರೂ. ಹಣದ ಅವಶ್ಯಕತೆ ಇದೆ. ಜಲ ಕ್ರೀಡೆಗೆ ಸಾಕಷ್ಟು ಪ್ರೋತ್ಸಾಹ ನೀಡುವ ಯೋಜನೆ ಇದೆ ಎಂದು ಹೇಳಿದರು‌.


Body:ಕರಾವಳಿಯ ಸಂಸ್ಕೃತಿಯು ಕರಾವಳಿ ಉತ್ಸವದ ವೇದಿಕೆಯ ಮೂಲಕ ಅನಾವರಣಗೊಳ್ಳುತ್ತಿದೆ. ಅಲ್ಲದೆ ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವವನ್ನು ಈ ಬಾರಿ ಹಮ್ಮಿಕೊಳ್ಳಲಾಗಿದೆ. ಪ್ರವಾಹ, ಬರ ಮುಂತಾದ ಪರಿಸ್ಥಿತಿಯಲ್ಲಿ ಸರಕಾರಕ್ಕೆ ಕರಾವಳಿ ಉತ್ಸವದಂತಹ ಕಾರ್ಯಕ್ರಮಗಳಿಗೆ ಅನುದಾನಗಳನ್ನು ನೀಡಲು ಕಷ್ಟವಾಗುತ್ತಿದೆ. ಆದರೆ ಕರಾವಳಿ ಉತ್ಸವದ ಆಯೋಜಕರು ಯಾವುದೇ ರೀತಿಯ ಕೊರತೆ ಇಲ್ಲದೆ ಉತ್ಸವವನ್ನು ಆಯೋಜನೆ ಮಾಡಿದ್ದಾರೆ.

ಈ ಸಂದರ್ಭ ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಉಪ ಜಿಲ್ಲಾಧಿಕಾರಿ ರೂಪಾ, ಮಂಗಳೂರು ಮನಪಾ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ, ಕಸಪಾ ದ.ಕ.ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಮತ್ತಿತರರು ಉಪಸ್ಥಿತರಿದ್ದರು.

Reporter_Vishwanath Panjimogaru


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.