ಮಂಗಳೂರು: ಅತೀ ವೇಗದಿಂದ ಬಂದ ಬಸ್ಸೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಮೇಲೆ ಹಿಂಬದಿ ಸವಾರನಾಗಿದ್ದ 12 ವರ್ಷದ ಬಾಲಕ ಮೃತಪಟ್ಟ ಘಟನೆ ನಗರದ ಲಾಲ್ಭಾಗ್ ಬಳಿ ನಡೆದಿದೆ.
ಪಡೀಲ್ ಕಣ್ಣೂರು ನಿವಾಸಿ ರಕ್ಷಣ್ (13) ಮೃತಪಟ್ಟ ಬಾಲಕ. ಬಾಲಕ ಸಂಬಂಧಿ ನಾರಾಯಣ ಎಂಬುವರು ಚಲಾಯಿಸುತ್ತಿದ್ದ ಸ್ಕೂಟರ್ನಲ್ಲಿ ಹಿಂಬದಿ ಕುಳಿತಿದ್ದ. ಸ್ಕೂಟರ್ ಕೊಟ್ಟಾರ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಮಂಗಳೂರು - ಕಿನ್ನಿಗೋಳಿ - ಕಟೀಲು ನಡುವೆ ಸಂಚರಿಸುವ ಖಾಸಗಿ ಬಸ್ಸು ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬಂದು ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ.
ಸವಾರ ನಾರಾಯಣ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದರೆ, ಸಂಬಂಧಿ ಬಾಲಕ ರಕ್ಷಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಂಚಾರಿ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.