ETV Bharat / state

ಕುಡಿದ ಮತ್ತಿನಲ್ಲಿ ತಮ್ಮನನ್ನು ಕೊಂದು ಪರಾರಿಯಾದ ಅಣ್ಣ - Etv Bharat Kannada

ಕುಡಿದ ಮತ್ತಿನಲ್ಲಿ ಸಹೋದರರಿಬ್ಬರು ಜಗಳವಾಡಿದ್ದು, ಈ ವೇಳೆ ಅಣ್ಣ ತಮ್ಮನನ್ನು ಕೊಂದು ಪರಾರಿಯಾಗಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.

kn_mng_
ಪುತ್ತೂರು ಪೊಲೀಸ್​ ಠಾಣೆ
author img

By

Published : Dec 2, 2022, 4:59 PM IST

ಪುತ್ತೂರು/ದಕ್ಷಿಣ ಕನ್ನಡ: ಪುತ್ತೂರಿನ ಕೆಮ್ಮಿಂಜೆಯಲ್ಲಿ ಕಾರ್ಮಿಕ ಕೆಲಸ ಮಾಡುತ್ತಿದ್ದ ಸಹೋದರರಿಬ್ಬರು ಕಳೆದ ರಾತ್ರಿ ಕಂಠಪೂರ್ತಿ ಕುಡಿದು ಜಗಳ ನಡೆಸಿದ್ದು, ಈ ವೇಳೆ ಅಣ್ಣ ನಿಂಗನ ಗೌಡ, ತಮ್ಮ ಮಾದೇವಪ್ಪನ ಮೇಲೆ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಾದೇವಪ್ಪ ಸಾವನ್ನಪ್ಪಿದ್ದಾನೆ.

kn_mng_
ಕೊಲೆ ಆರೋಪಿ

ಪುತ್ತೂರು ನಗರ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಯ ಬಳಿಕ ಆರೋಪಿ ನಿಂಗನ ಗೌಡ ಪರಾರಿಯಾಗಿದ್ದು, ಆರೋಪಿಯ ಪತ್ತೆಗೆ ಸಹಕರಿಸುವಂತೆ ಪೊಲೀಸರು ತಿಳಿಸಿದ್ದಾರೆ. ಇನ್ನು ಆರೋಪಿ ಕಂಡು ಬಂದಲ್ಲಿ ಪುತ್ತೂರು ನಗರ ಠಾಣೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪೊಲೀಸರು ತಿಳಿಸಿದ್ದಾರೆ. ಪುತ್ತೂರು ನಗರ ಠಾಣೆ ದೂರವಾಣಿ ಸಂ: 08251-230555, 9480805361, 8147664989

ಇದನ್ನೂ ಓದಿ: ಸ್ನೇಹಿತರ ನಡುವೆ ಕ್ಷುಲ್ಲಕ ವಿಷಯಕ್ಕೆ ಗಲಾಟೆ: ಕೊಲೆ ಮಾಡಿ ಪರಾರಿಯಾದ ಗೆಳೆಯ

ಪುತ್ತೂರು/ದಕ್ಷಿಣ ಕನ್ನಡ: ಪುತ್ತೂರಿನ ಕೆಮ್ಮಿಂಜೆಯಲ್ಲಿ ಕಾರ್ಮಿಕ ಕೆಲಸ ಮಾಡುತ್ತಿದ್ದ ಸಹೋದರರಿಬ್ಬರು ಕಳೆದ ರಾತ್ರಿ ಕಂಠಪೂರ್ತಿ ಕುಡಿದು ಜಗಳ ನಡೆಸಿದ್ದು, ಈ ವೇಳೆ ಅಣ್ಣ ನಿಂಗನ ಗೌಡ, ತಮ್ಮ ಮಾದೇವಪ್ಪನ ಮೇಲೆ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಾದೇವಪ್ಪ ಸಾವನ್ನಪ್ಪಿದ್ದಾನೆ.

kn_mng_
ಕೊಲೆ ಆರೋಪಿ

ಪುತ್ತೂರು ನಗರ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಯ ಬಳಿಕ ಆರೋಪಿ ನಿಂಗನ ಗೌಡ ಪರಾರಿಯಾಗಿದ್ದು, ಆರೋಪಿಯ ಪತ್ತೆಗೆ ಸಹಕರಿಸುವಂತೆ ಪೊಲೀಸರು ತಿಳಿಸಿದ್ದಾರೆ. ಇನ್ನು ಆರೋಪಿ ಕಂಡು ಬಂದಲ್ಲಿ ಪುತ್ತೂರು ನಗರ ಠಾಣೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪೊಲೀಸರು ತಿಳಿಸಿದ್ದಾರೆ. ಪುತ್ತೂರು ನಗರ ಠಾಣೆ ದೂರವಾಣಿ ಸಂ: 08251-230555, 9480805361, 8147664989

ಇದನ್ನೂ ಓದಿ: ಸ್ನೇಹಿತರ ನಡುವೆ ಕ್ಷುಲ್ಲಕ ವಿಷಯಕ್ಕೆ ಗಲಾಟೆ: ಕೊಲೆ ಮಾಡಿ ಪರಾರಿಯಾದ ಗೆಳೆಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.