ETV Bharat / state

ಮಂಗಳೂರು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಹೊಸ ಪ್ರಯೋಗ: ಮೂರು ಕಡೆ ಮಾರ್ಗ ಬದಲಾವಣೆ

author img

By

Published : Mar 15, 2023, 8:44 PM IST

ನಗರದ ಪ್ರಮುಖ ಜಂಕ್ಷನ್​ಗಳಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ನೂತನ ಪೊಲೀಸ್ ಕಮಿಷನರ್ ಕುಲದೀಪ್​​ ಕುಮಾರ್ ಆರ್ ಜೈನ್ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ.

A new experiment to solve the traffic problem
ಮಂಗಳೂರು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಹೊಸ ಪ್ರಯೋಗ: ಮೂರು ಕಡೆ ಮಾರ್ಗ ಬದಲಾವಣೆ

ಮಂಗಳೂರು: ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಕುಲದೀಪ್ ಕುಮಾರ್ ಆರ್. ಜೈನ್ ಅವರು ಅಧಿಕಾರ ವಹಿಸಿಕೊಂಡ ಬಳಿಕ ರಸ್ತೆ ಸಂಚಾರದಲ್ಲಿ ಮಹತ್ತರವಾದ ಬದಲಾವಣೆ ತರುತ್ತಿದ್ದಾರೆ. ಬೆಂಗಳೂರಿನಲ್ಲಿ ಸಂಚಾರ ಡಿಸಿಪಿ ಯಾಗಿದ್ದ ಕುಲದೀಪ್ ಕುಮಾರ್ ಜೈನ್, ಅಲ್ಲಿನ ಅನುಭವ ಬಳಸಿಕೊಂಡು ಹೊಸ ಪ್ರಯೋಗ ಮಾಡುತ್ತಿದ್ದಾರೆ. ಇದೀಗ ಮೂರು ಕಡೆ ಹೊಸ ಪ್ರಯೋಗ ಮಾಡಿದ್ದು, ಟ್ರಾಫಿಕ್ ಸಮಸ್ಯೆಗೆ ಪರಿಹಾರ ರೂಪಿಸಿದ್ದಾರೆ.

ಮೊದಲ ಹಂತದಲ್ಲಿ ಅತೀ ಹೆಚ್ಚು ವಾಹನ ದಟ್ಟಣೆಯುಳ್ಳ ನಗರದ ಪ್ರಮುಖ ಜಂಕ್ಷನ್ ಹಂಪನಕಟ್ಟ ಜಂಕ್ಷನ್ ನಲ್ಲಿ ಪ್ರಾಯೋಗಿಕ ಸಂಚಾರ ಬದಲಾವಣೆಗೆ ಮಾಡಲಾಗಿದೆ. ಈ ಜಂಕ್ಷನ್ ನಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡಿ ವಾಹನಗಳ ಸುಗಮ ಸಂಚಾರ ಮತ್ತು ಪಾದಚಾರಿಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ಹಂಪನಕಟ್ಟ ಜಂಕ್ಷನ್‌ನ ಮಧ್ಯದಲ್ಲಿ ಬ್ಯಾರಿಕೇಡ್‌ ಅಳವಡಿಸಲಾಗಿದೆ.

ಸಂಚಾರ ಮಾರ್ಗದಲ್ಲಿ ಪ್ರಾಯೋಗಿಕ ಬದಲಾವಣೆಗಳು ಈ ಕೆಳಗಿನಂತಿವೆ:

1. ಕ್ಲಾಕ್ ಟವರ್ ಕಡೆಯಿಂದ ಫಳ್ನೀರ್ ರಸ್ತೆ (ಮದರ್ ಥೆರೇಸಾ ರಸ್ತೆ) ಕಡೆಗೆ ಹೋಗುವ ಎಲ್ಲ ವಾಹನಗಳು ಇನ್ನು ಮುಂದೆ ಹಂಪನಕಟ್ಟ ಸರ್ಕಲ್ ನಲ್ಲಿ ನೇರವಾಗಿ ಮುಲ್ಕಿ ಸುಂದರ್‌ರಾಮ್ ಶೆಟ್ಟಿ ರಸ್ತೆಯಲ್ಲಿ ಚಲಿಸಿ, ಜೋಸ್ ಅಲುಕಾಸ್ ಎದುರು ಯೂ ಟರ್ನ್ ಪಡೆದು ವಾಪಾಸ್ ಹಂಪನಕಟ್ಟ ಜಂಕ್ಷನ್‌ಗೆ ಬಂದು ಎಡಕ್ಕೆ ತಿರುಗಿ (ಫ್ರೀ ಲೆಫ್ಟ್) ಫಳ್ನೀರ್‌ ರಸ್ತೆ (ಮದರ್ ಥೆರೇಸಾ ರಸ್ತೆ) ಕಡೆಗೆ ಸಂಚರಿಸಬಹುದಾಗಿದೆ.

2. ಫ‌ಳ್ನೀರ್ ರಸ್ತೆ ಕಡೆಯಿಂದ ನವಭಾರತ್ ಸರ್ಕಲ್ ಕಡೆಗೆ ಹೋಗುವ ವಾಹನಗಳು ಹಂಪನಕಟ್ಟ ಸರ್ಕಲ್‌ನಲ್ಲಿ ಎಡಕ್ಕೆ ತಿರುಗಿ (ಫ್ರೀ ಲೆಫ್ಟ್) ಕ್ಲಾಕ್ ಟವರ್ ಕಡೆಗೆ ಸಂಚಾರ ಮಾಡಬೇಕು. ಅಲ್ಲಿಂದ ಕ್ಲಾಕ್ ಟವರ್ ಜಂಕ್ಷನ್‌ನಲ್ಲಿ ಟರ್ನ್ ತೆಗೆದು ಹಂಪನಕಟ್ಟ ಜಂಕ್ಷನ್‌ಗೆ ಬಂದು ಎಡಕ್ಕೆ ತಿರುಗಿ (ಫ್ರೀ ಲೆಫ್ಟ್) ನವಭಾರತ್ ಸರ್ಕಲ್ ಕಡೆಗೆ ಸಂಚರಿಸಬಹುದಾಗಿದೆ.

3. ನವಭಾರತ್ ಸರ್ಕಲ್ ಕಡೆಯಿಂದ ಕ್ಲಾಕ್ ಟವರ್ ಕಡೆಗೆ ಸಂಚರಿಸುವ ಎಲ್ಲಾ ವಾಹನಗಳು ಪಂಜೆ ಮಂಗೇಶ್ವರ ರಾವ್ ರಸ್ತೆಯ (ಪಿ.ಎಂ.ರಾವ್) ಮೂಲಕ ಚಲಿಸಿ, ಗಣಪತಿ ಹೈಸ್ಕೂಲ್ ರಸ್ತೆ (ಜಿಹೆಚ್‌ಎಸ್) ಮೂಲಕ ಕೃಷ್ಣ ಭವನಕಟ್ಟೆ ಜಂಕ್ಷನ್(ಕೆ.ಬಿ.ಕಟ್ಟೆ) ತಲುಪಿ, ಅಲ್ಲಿಂದ ಕ್ಲಾಕ್ ಟವರ್ ಕಡೆಗೆ ಸಂಚರಿಸಬಹುದಾಗಿದೆ. ಹಾಗೆಯೇ ನವಭಾರತ್ ಸರ್ಕಲ್ ಕಡೆಯಿಂದ ಫಳ್ನೀರ್ ರಸ್ತೆ (ಮದರ್ ಥೆರೇಸಾ ರಸ್ತೆ) ಕಡೆಗೆ ಹೋಗುವ ವಾಹನಗಳು ಹಂಪನಕಟ್ಟ ಜಂಕ್ಷನ್‌ನಲ್ಲಿ ಎಡ ತಿರುವು (ಫ್ರೀ ಲೆಫ್ಟ್) ಪಡೆದು ಮುಲ್ಕಿ ಸುಂದರ್‌ರಾಮ್ ಶೆಟ್ಟಿ ರಸ್ತೆಯಲ್ಲಿ ಚಲಿಸಿ ಜೋಸ್ ಅಲುಕಾಸ್ ಎದುರು ಯೂ ಟರ್ನ್ ಪಡೆದು ಹಂಪನಕಟ್ಟ ಜಂಕ್ಷನ್‌ ಬಂದು ಎಡಕ್ಕೆ ತಿರುಗಿ (ಫ್ರೀ ಲೆಫ್ಟ್) ಫಳ್ನೀರ್ (ಮದರ್ ಥೆರೇಸಾ ರಸ್ತೆ) ಕಡೆಗೆ ಹಾಗೂ ನೇರವಾಗಿ ಕ್ಲಾಕ್‌ ಟವ‌ರ್​ ಕಡೆಗೆ ಸಂಚರಿಸಬಹುದಾಗಿದೆ.

4. ಹಂಪನಕಟ್ಟ ಜಂಕ್ಷನ್‌ನಲ್ಲಿ ಪಾದಚಾರಿಗಳ ಸುರಕ್ಷಿತಾ ಸಂಚಾರಕ್ಕೆ ಪಾದಚಾರಿಗಳ ಮಾರ್ಗ (Zebra Cross)ಅನ್ನು ಗುರುತಿಸಿದ್ದು ಪಾದಚಾರಿಗಳು ಕಡ್ಡಾಯವಾಗಿ ಪಾದಚಾರಿಗಳ ಮಾರ್ಗಗಳನ್ನು ಉಪಯೋಗಿಸಬೇಕಾಗಿದೆ.

5. ಸಾರ್ವಜನಿಕರಿಗೆ ವಿಶೇಷ ಸೂಚನೆ ನೀಡಲಾಗಿದೆ. ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣ ಹಾಗೂ ನಗರ ಸರ್ವಿಸ್ ಬಸ್ ನಿಲ್ದಾಣದಿಂದ ಹೊರಡುವ ಬಸ್ಸುಗಳಿಗೆ ಕೃಷ್ಣ ಭವನಕಟ್ಟೆ ಬಸ್​​ ನಿಲ್ದಾಣದ ಬಳಿಕ ಜೋಸ್ ಅಲುಕಾಸ್ ಎದುರಿನ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಬಸ್​​​ಗಳನ್ನು ಹತ್ತಲು ಅನುವು ಮಾಡಲಾಗಿದ್ದು, ಸಾರ್ವಜನಿಕರು ಯಾವುದೇ ಕಾರಣಕ್ಕೂ ಈ ಬಸ್​​ ನಿಲ್ದಾಣಗಳನ್ನು ಹೊರತುಪಡಿಸಿ ಹಂಪನಕಟ್ಟೆಯ ಬಳಿ ಬಸ್​​ ಹತ್ತಲು ನಿಲ್ಲದೇ ಕೃಷ್ಣಭವನಕಟ್ಟೆ ಜಂಕ್ಷನ್ ಅಥವಾ ಜೋಸ್ ಅಲುಕಾಸ್ ಬಸ್ ನಿಲ್ದಾಣಗಳನ್ನೇ ಉಪಯೋಗಿಸಬೇಕು.

ನಗರದ ಓಲ್ಡ್ ಕಂಕನಾಡಿ ಬೈಪಾಸ್ ರಸ್ತೆಯನ್ನು ಏಕಮುಖ ಸಂಚಾರ ರಸ್ತೆಯಾಗಿ ಆದೇಶ ಹೊರಡಿಸಲಾಗಿದೆ:

1. ಕಂಕನಾಡಿ ವೃತ್ತದಿಂದ ಪಂಪ್‌ವೆಲ್ ಕಡೆಗೆ ಓಲ್ಡ್ ಕಂಕನಾಡಿ ಬೈಪಾಸ್ ರಸ್ತೆಯಲ್ಲಿ ಎಲ್ಲ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

2. ಫಳ್ನೀರ್ (ಮದರ್ ಥೆರಸಾ ರಸ್ತೆ) ರಸ್ತೆಯಿಂದ ಪಂಪ್‌ವೆಲ್ ಕಡೆಗೆ ಹೋಗುವ ಎಲ್ಲಾ ತರಹದ ವಾಹನಗಳು ಕಂಕನಾಡಿ ಜಂಕ್ಷನ್ ನಲ್ಲಿ ಎಡಕ್ಕೆ ತಿರುಗಿ ಕರಾವಳಿ ಜಂಕ್ಷನ್ ನಲ್ಲಿ ಬಲಕ್ಕೆ ತಿರುಗಿ ಪಂಪ್‌ವಲ್ ಕಡೆಗೆ ಸಂಚರಿಸುವುದು.

3. ಮಂಗಳಾದೇವಿ, ವೆಲೆನ್ಸಿಯಾ ಕಡೆಯಿಂದ ಪಂಪ್ ವೆಲ್ ಕಡೆಗೆ ಹೋಗುವ ಎಲ್ಲ ತರಹದ ವಾಹನಗಳು ಕಂಕನಾಡಿ ಜಂಕ್ಷನ್‌ನಲ್ಲಿ ನೇರವಾಗಿ ಕರಾವಳಿ ಜಂಕ್ಷನ್ ಕಡೆಗೆ ಸಂಚರಿಸಿ ಕರಾವಳಿ ಜಂಕ್ಷನ್ ನಲ್ಲಿ ತಿರುಗಿ ಪಂಪ್‌ವೆಲ್ ಕಡೆಗೆ ಸಂಚರಿಸುವುದು.

ಕಂಕನಾಡಿ ವೃತ್ತದಲ್ಲಿ ಮಾರ್ಗ ಬದಲಾವಣೆ:

1. ಫಳ್ನೀರ್ ಕಡೆಯಿಂದ ಪಂಪ್ ವೆಲ್ ಕಡೆಗೆ ಹೋಗುವ ಎಲ್ಲ ತರಹದ ವಾಹನಗಳ ಸವಾರರು ಕಂಕನಾಡಿ ವೃತ್ತದಲ್ಲಿ ಎಡಕ್ಕೆ ತಿರುಗಿ ಕರಾವಳಿ ವೃತ್ತದಲ್ಲಿ ಬಲಕ್ಕೆ ತಿರುಗಿ ಮುಂದಕ್ಕೆ ಹೋಗಬೇಕು.

2. ಫಳ್ನೀರ್ ಕಡೆಯಿಂದ ವೆಲೆನ್ಸಿಯಾ ಕಡೆಗೆ ಹೋಗುವ ಎಲ್ಲ ತರಹದ ವಾಹನ ಸವಾರರು ಕಂಕನಾಡಿ ವೃತ್ತದಲ್ಲಿ ಎಡಕ್ಕೆ ತಿರುಗಿ ಕರಾವಳಿ ವೃತ್ತದಲ್ಲಿ ಯೂ ಟರ್ನ್ ಪಡೆದು ಮುಂದಕ್ಕೆ ಹೋಗಬೇಕು.

3. ಫಳ್ನೀರ್ ಕಡೆಯಿಂದ ಮಂಗಳಾದೇವಿ ಕಡೆಗೆ ಹೋಗುವ ವಾಹನ ಸವಾರರು ಸ್ಟರೋಕ್ ರಸ್ತೆ, ನಂದಿಗುಡ್ಡ ರಸ್ತೆ ಮುಖಾಂತರ ಕೋಟಿ ಚೆನ್ನಯ್ಯ ವೃತ್ತವನ್ನು ಬಳಸಿ ಹೋಗಬೇಕು. ನಗರ ಕಮೀಷನರ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ನಗರದ ಪ್ರಮುಖ ಮೂರು ಕಡೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಈಗಾಗಲೇ ಇದು ಅನುಷ್ಠಾನಕ್ಕೆ ಬಂದಿದ್ದು ನಗರದ ಟ್ರಾಫಿಕ್ ಸಮಸ್ಯೆಗೆ ಸ್ಬಲ್ಪ ಪರಿಹಾರ ಸಿಕ್ಕಿದೆ. ಇನ್ನು ಇನ್ನಷ್ಟು ಬದಲಾವಣೆಗಳು ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ:ಮಂಗಳೂರು ವಿವಿ 41ನೇ ಘಟಿಕೋತ್ಸವ: ಪಿಹೆಚ್​ಡಿ ಪಡೆದ 80ರ ವೃದ್ಧ, ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಮಂಗಳೂರು: ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಕುಲದೀಪ್ ಕುಮಾರ್ ಆರ್. ಜೈನ್ ಅವರು ಅಧಿಕಾರ ವಹಿಸಿಕೊಂಡ ಬಳಿಕ ರಸ್ತೆ ಸಂಚಾರದಲ್ಲಿ ಮಹತ್ತರವಾದ ಬದಲಾವಣೆ ತರುತ್ತಿದ್ದಾರೆ. ಬೆಂಗಳೂರಿನಲ್ಲಿ ಸಂಚಾರ ಡಿಸಿಪಿ ಯಾಗಿದ್ದ ಕುಲದೀಪ್ ಕುಮಾರ್ ಜೈನ್, ಅಲ್ಲಿನ ಅನುಭವ ಬಳಸಿಕೊಂಡು ಹೊಸ ಪ್ರಯೋಗ ಮಾಡುತ್ತಿದ್ದಾರೆ. ಇದೀಗ ಮೂರು ಕಡೆ ಹೊಸ ಪ್ರಯೋಗ ಮಾಡಿದ್ದು, ಟ್ರಾಫಿಕ್ ಸಮಸ್ಯೆಗೆ ಪರಿಹಾರ ರೂಪಿಸಿದ್ದಾರೆ.

ಮೊದಲ ಹಂತದಲ್ಲಿ ಅತೀ ಹೆಚ್ಚು ವಾಹನ ದಟ್ಟಣೆಯುಳ್ಳ ನಗರದ ಪ್ರಮುಖ ಜಂಕ್ಷನ್ ಹಂಪನಕಟ್ಟ ಜಂಕ್ಷನ್ ನಲ್ಲಿ ಪ್ರಾಯೋಗಿಕ ಸಂಚಾರ ಬದಲಾವಣೆಗೆ ಮಾಡಲಾಗಿದೆ. ಈ ಜಂಕ್ಷನ್ ನಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡಿ ವಾಹನಗಳ ಸುಗಮ ಸಂಚಾರ ಮತ್ತು ಪಾದಚಾರಿಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ಹಂಪನಕಟ್ಟ ಜಂಕ್ಷನ್‌ನ ಮಧ್ಯದಲ್ಲಿ ಬ್ಯಾರಿಕೇಡ್‌ ಅಳವಡಿಸಲಾಗಿದೆ.

ಸಂಚಾರ ಮಾರ್ಗದಲ್ಲಿ ಪ್ರಾಯೋಗಿಕ ಬದಲಾವಣೆಗಳು ಈ ಕೆಳಗಿನಂತಿವೆ:

1. ಕ್ಲಾಕ್ ಟವರ್ ಕಡೆಯಿಂದ ಫಳ್ನೀರ್ ರಸ್ತೆ (ಮದರ್ ಥೆರೇಸಾ ರಸ್ತೆ) ಕಡೆಗೆ ಹೋಗುವ ಎಲ್ಲ ವಾಹನಗಳು ಇನ್ನು ಮುಂದೆ ಹಂಪನಕಟ್ಟ ಸರ್ಕಲ್ ನಲ್ಲಿ ನೇರವಾಗಿ ಮುಲ್ಕಿ ಸುಂದರ್‌ರಾಮ್ ಶೆಟ್ಟಿ ರಸ್ತೆಯಲ್ಲಿ ಚಲಿಸಿ, ಜೋಸ್ ಅಲುಕಾಸ್ ಎದುರು ಯೂ ಟರ್ನ್ ಪಡೆದು ವಾಪಾಸ್ ಹಂಪನಕಟ್ಟ ಜಂಕ್ಷನ್‌ಗೆ ಬಂದು ಎಡಕ್ಕೆ ತಿರುಗಿ (ಫ್ರೀ ಲೆಫ್ಟ್) ಫಳ್ನೀರ್‌ ರಸ್ತೆ (ಮದರ್ ಥೆರೇಸಾ ರಸ್ತೆ) ಕಡೆಗೆ ಸಂಚರಿಸಬಹುದಾಗಿದೆ.

2. ಫ‌ಳ್ನೀರ್ ರಸ್ತೆ ಕಡೆಯಿಂದ ನವಭಾರತ್ ಸರ್ಕಲ್ ಕಡೆಗೆ ಹೋಗುವ ವಾಹನಗಳು ಹಂಪನಕಟ್ಟ ಸರ್ಕಲ್‌ನಲ್ಲಿ ಎಡಕ್ಕೆ ತಿರುಗಿ (ಫ್ರೀ ಲೆಫ್ಟ್) ಕ್ಲಾಕ್ ಟವರ್ ಕಡೆಗೆ ಸಂಚಾರ ಮಾಡಬೇಕು. ಅಲ್ಲಿಂದ ಕ್ಲಾಕ್ ಟವರ್ ಜಂಕ್ಷನ್‌ನಲ್ಲಿ ಟರ್ನ್ ತೆಗೆದು ಹಂಪನಕಟ್ಟ ಜಂಕ್ಷನ್‌ಗೆ ಬಂದು ಎಡಕ್ಕೆ ತಿರುಗಿ (ಫ್ರೀ ಲೆಫ್ಟ್) ನವಭಾರತ್ ಸರ್ಕಲ್ ಕಡೆಗೆ ಸಂಚರಿಸಬಹುದಾಗಿದೆ.

3. ನವಭಾರತ್ ಸರ್ಕಲ್ ಕಡೆಯಿಂದ ಕ್ಲಾಕ್ ಟವರ್ ಕಡೆಗೆ ಸಂಚರಿಸುವ ಎಲ್ಲಾ ವಾಹನಗಳು ಪಂಜೆ ಮಂಗೇಶ್ವರ ರಾವ್ ರಸ್ತೆಯ (ಪಿ.ಎಂ.ರಾವ್) ಮೂಲಕ ಚಲಿಸಿ, ಗಣಪತಿ ಹೈಸ್ಕೂಲ್ ರಸ್ತೆ (ಜಿಹೆಚ್‌ಎಸ್) ಮೂಲಕ ಕೃಷ್ಣ ಭವನಕಟ್ಟೆ ಜಂಕ್ಷನ್(ಕೆ.ಬಿ.ಕಟ್ಟೆ) ತಲುಪಿ, ಅಲ್ಲಿಂದ ಕ್ಲಾಕ್ ಟವರ್ ಕಡೆಗೆ ಸಂಚರಿಸಬಹುದಾಗಿದೆ. ಹಾಗೆಯೇ ನವಭಾರತ್ ಸರ್ಕಲ್ ಕಡೆಯಿಂದ ಫಳ್ನೀರ್ ರಸ್ತೆ (ಮದರ್ ಥೆರೇಸಾ ರಸ್ತೆ) ಕಡೆಗೆ ಹೋಗುವ ವಾಹನಗಳು ಹಂಪನಕಟ್ಟ ಜಂಕ್ಷನ್‌ನಲ್ಲಿ ಎಡ ತಿರುವು (ಫ್ರೀ ಲೆಫ್ಟ್) ಪಡೆದು ಮುಲ್ಕಿ ಸುಂದರ್‌ರಾಮ್ ಶೆಟ್ಟಿ ರಸ್ತೆಯಲ್ಲಿ ಚಲಿಸಿ ಜೋಸ್ ಅಲುಕಾಸ್ ಎದುರು ಯೂ ಟರ್ನ್ ಪಡೆದು ಹಂಪನಕಟ್ಟ ಜಂಕ್ಷನ್‌ ಬಂದು ಎಡಕ್ಕೆ ತಿರುಗಿ (ಫ್ರೀ ಲೆಫ್ಟ್) ಫಳ್ನೀರ್ (ಮದರ್ ಥೆರೇಸಾ ರಸ್ತೆ) ಕಡೆಗೆ ಹಾಗೂ ನೇರವಾಗಿ ಕ್ಲಾಕ್‌ ಟವ‌ರ್​ ಕಡೆಗೆ ಸಂಚರಿಸಬಹುದಾಗಿದೆ.

4. ಹಂಪನಕಟ್ಟ ಜಂಕ್ಷನ್‌ನಲ್ಲಿ ಪಾದಚಾರಿಗಳ ಸುರಕ್ಷಿತಾ ಸಂಚಾರಕ್ಕೆ ಪಾದಚಾರಿಗಳ ಮಾರ್ಗ (Zebra Cross)ಅನ್ನು ಗುರುತಿಸಿದ್ದು ಪಾದಚಾರಿಗಳು ಕಡ್ಡಾಯವಾಗಿ ಪಾದಚಾರಿಗಳ ಮಾರ್ಗಗಳನ್ನು ಉಪಯೋಗಿಸಬೇಕಾಗಿದೆ.

5. ಸಾರ್ವಜನಿಕರಿಗೆ ವಿಶೇಷ ಸೂಚನೆ ನೀಡಲಾಗಿದೆ. ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣ ಹಾಗೂ ನಗರ ಸರ್ವಿಸ್ ಬಸ್ ನಿಲ್ದಾಣದಿಂದ ಹೊರಡುವ ಬಸ್ಸುಗಳಿಗೆ ಕೃಷ್ಣ ಭವನಕಟ್ಟೆ ಬಸ್​​ ನಿಲ್ದಾಣದ ಬಳಿಕ ಜೋಸ್ ಅಲುಕಾಸ್ ಎದುರಿನ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಬಸ್​​​ಗಳನ್ನು ಹತ್ತಲು ಅನುವು ಮಾಡಲಾಗಿದ್ದು, ಸಾರ್ವಜನಿಕರು ಯಾವುದೇ ಕಾರಣಕ್ಕೂ ಈ ಬಸ್​​ ನಿಲ್ದಾಣಗಳನ್ನು ಹೊರತುಪಡಿಸಿ ಹಂಪನಕಟ್ಟೆಯ ಬಳಿ ಬಸ್​​ ಹತ್ತಲು ನಿಲ್ಲದೇ ಕೃಷ್ಣಭವನಕಟ್ಟೆ ಜಂಕ್ಷನ್ ಅಥವಾ ಜೋಸ್ ಅಲುಕಾಸ್ ಬಸ್ ನಿಲ್ದಾಣಗಳನ್ನೇ ಉಪಯೋಗಿಸಬೇಕು.

ನಗರದ ಓಲ್ಡ್ ಕಂಕನಾಡಿ ಬೈಪಾಸ್ ರಸ್ತೆಯನ್ನು ಏಕಮುಖ ಸಂಚಾರ ರಸ್ತೆಯಾಗಿ ಆದೇಶ ಹೊರಡಿಸಲಾಗಿದೆ:

1. ಕಂಕನಾಡಿ ವೃತ್ತದಿಂದ ಪಂಪ್‌ವೆಲ್ ಕಡೆಗೆ ಓಲ್ಡ್ ಕಂಕನಾಡಿ ಬೈಪಾಸ್ ರಸ್ತೆಯಲ್ಲಿ ಎಲ್ಲ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

2. ಫಳ್ನೀರ್ (ಮದರ್ ಥೆರಸಾ ರಸ್ತೆ) ರಸ್ತೆಯಿಂದ ಪಂಪ್‌ವೆಲ್ ಕಡೆಗೆ ಹೋಗುವ ಎಲ್ಲಾ ತರಹದ ವಾಹನಗಳು ಕಂಕನಾಡಿ ಜಂಕ್ಷನ್ ನಲ್ಲಿ ಎಡಕ್ಕೆ ತಿರುಗಿ ಕರಾವಳಿ ಜಂಕ್ಷನ್ ನಲ್ಲಿ ಬಲಕ್ಕೆ ತಿರುಗಿ ಪಂಪ್‌ವಲ್ ಕಡೆಗೆ ಸಂಚರಿಸುವುದು.

3. ಮಂಗಳಾದೇವಿ, ವೆಲೆನ್ಸಿಯಾ ಕಡೆಯಿಂದ ಪಂಪ್ ವೆಲ್ ಕಡೆಗೆ ಹೋಗುವ ಎಲ್ಲ ತರಹದ ವಾಹನಗಳು ಕಂಕನಾಡಿ ಜಂಕ್ಷನ್‌ನಲ್ಲಿ ನೇರವಾಗಿ ಕರಾವಳಿ ಜಂಕ್ಷನ್ ಕಡೆಗೆ ಸಂಚರಿಸಿ ಕರಾವಳಿ ಜಂಕ್ಷನ್ ನಲ್ಲಿ ತಿರುಗಿ ಪಂಪ್‌ವೆಲ್ ಕಡೆಗೆ ಸಂಚರಿಸುವುದು.

ಕಂಕನಾಡಿ ವೃತ್ತದಲ್ಲಿ ಮಾರ್ಗ ಬದಲಾವಣೆ:

1. ಫಳ್ನೀರ್ ಕಡೆಯಿಂದ ಪಂಪ್ ವೆಲ್ ಕಡೆಗೆ ಹೋಗುವ ಎಲ್ಲ ತರಹದ ವಾಹನಗಳ ಸವಾರರು ಕಂಕನಾಡಿ ವೃತ್ತದಲ್ಲಿ ಎಡಕ್ಕೆ ತಿರುಗಿ ಕರಾವಳಿ ವೃತ್ತದಲ್ಲಿ ಬಲಕ್ಕೆ ತಿರುಗಿ ಮುಂದಕ್ಕೆ ಹೋಗಬೇಕು.

2. ಫಳ್ನೀರ್ ಕಡೆಯಿಂದ ವೆಲೆನ್ಸಿಯಾ ಕಡೆಗೆ ಹೋಗುವ ಎಲ್ಲ ತರಹದ ವಾಹನ ಸವಾರರು ಕಂಕನಾಡಿ ವೃತ್ತದಲ್ಲಿ ಎಡಕ್ಕೆ ತಿರುಗಿ ಕರಾವಳಿ ವೃತ್ತದಲ್ಲಿ ಯೂ ಟರ್ನ್ ಪಡೆದು ಮುಂದಕ್ಕೆ ಹೋಗಬೇಕು.

3. ಫಳ್ನೀರ್ ಕಡೆಯಿಂದ ಮಂಗಳಾದೇವಿ ಕಡೆಗೆ ಹೋಗುವ ವಾಹನ ಸವಾರರು ಸ್ಟರೋಕ್ ರಸ್ತೆ, ನಂದಿಗುಡ್ಡ ರಸ್ತೆ ಮುಖಾಂತರ ಕೋಟಿ ಚೆನ್ನಯ್ಯ ವೃತ್ತವನ್ನು ಬಳಸಿ ಹೋಗಬೇಕು. ನಗರ ಕಮೀಷನರ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ನಗರದ ಪ್ರಮುಖ ಮೂರು ಕಡೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಈಗಾಗಲೇ ಇದು ಅನುಷ್ಠಾನಕ್ಕೆ ಬಂದಿದ್ದು ನಗರದ ಟ್ರಾಫಿಕ್ ಸಮಸ್ಯೆಗೆ ಸ್ಬಲ್ಪ ಪರಿಹಾರ ಸಿಕ್ಕಿದೆ. ಇನ್ನು ಇನ್ನಷ್ಟು ಬದಲಾವಣೆಗಳು ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ:ಮಂಗಳೂರು ವಿವಿ 41ನೇ ಘಟಿಕೋತ್ಸವ: ಪಿಹೆಚ್​ಡಿ ಪಡೆದ 80ರ ವೃದ್ಧ, ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.