ETV Bharat / state

ಬಂಟ್ವಾಳ: ವಿದ್ಯುತ್ ಶಾಕ್​ಗೆ ವ್ಯಕ್ತಿ ಬಲಿ, ಚಾರ್ಮಾಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಅಡಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳದ ಜೀಪಮುನ್ನೂರು ಗ್ರಾಮದಲ್ಲಿ ನಡೆದಿದೆ. ಹಾಗೆಯೇ, ಚಾರ್ಮಾಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಬಂಟ್ವಾಳ ತಾಲೂಕಿನ ಕುಕ್ಕಾಜೆ ನಿವಾಸಿಯ ಮೃತದೇಹವೊಂದು ಪತ್ತೆಯಾಗಿದೆ.

author img

By

Published : Jun 10, 2023, 6:48 AM IST

bantwal
ಬಂಟ್ವಾಳ

ಬಂಟ್ವಾಳ : ಮರದಿಂದ ಅಡಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಲಾಯಿಬೆಟ್ಟು ಎಂಬಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆ ನಡೆದಿದೆ. ಬೋಳಿಯಾರು ಗ್ರಾಮದ ನಿವಾಸಿ ಇಬ್ರಾಹಿಂ ಎಂಬುವರ ಪುತ್ರ ಶಾಫಿ (28) ಮೃತ ದುರ್ದೈವಿ.

ಶಾಫಿ ಅವರು ಕಳೆದ ಅನೇಕ ವರ್ಷಗಳಿಂದ ಅಡಿಕೆ ವ್ಯವಹಾರ ನಡೆಸುತ್ತಿದ್ದರು. ಈ ವರ್ಷ ಅಡಿಕೆ ಕೀಳಲು ಸಾವಿರಾರು ರೂ. ನೀಡಿ ಹೊಸ ಸಲಾಕೆಯನ್ನು ಖರೀದಿಸಿದ್ದರು. ನಿನ್ನೆ ಅದೇ ಹೊಸ ಸಲಾಕೆಯಲ್ಲಿ ಮಲಾಯಿಬೆಟ್ಟುವಿನ ತೋಟದಲ್ಲಿ ಅಡಿಕೆ ಕೀಳುವ ವೇಳೆ ಶಾಫಿ ಅವರ ಕೈಯಿಂದ ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಹಾದು ಹೋಗಿರುವ ಎಲ್.ಟಿ.ವಯರ್​ಗೆ​ ತಾಗಿದೆ.

ಪೈಬರ್ ಸಲಾಕೆಯಲ್ಲಿ ಅಡಕೆ ಕೀಳಲು ಅಳವಡಿಸಿದ ಕಬ್ಬಿಣದ ಕತ್ತಿಯ ಮೂಲಕ ವಿದ್ಯುತ್ ಹರಿದು ಶಾಫಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಜೀಪಮುನ್ನೂರು ಗ್ರಾಮದ ಮೂಸಬ್ಬ ಎಂಬುವರ ತೋಟದಲ್ಲಿ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಸಜೀಪಮುನ್ನೂರು ಗ್ರಾಮಕರಣಿಕೆ ಸ್ವಾತಿ, ಮೆಸ್ಕಾಂನ ಅಧಿಕಾರಿಗಳು ಹಾಗೂ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ : ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಕ್ಕಾಜೆ ನಿವಾಸಿ ಸವಾದ್ (35) ಎಂಬುವರ ಮೃತದೇಹ ಚಾರ್ಮಾಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು 10 ದಿನಗಳಿಂದ ಸವಾದ್ ನಾಪತ್ತೆಯಾಗಿದ್ದ. ಈತ ಗಾಂಜಾ ವ್ಯಸನಿಯಾಗಿದ್ದು, ಈ ಹಿಂದೆಯೂ ಕೆಲವು ಬಾರಿ ನಾಪತ್ತೆಯಾಗಿ, ಕೆಲ ದಿನಗಳ ಬಳಿಕ ಮನೆಗೆ ವಾಪಸಾಗುತ್ತಿದ್ದ. ಈ ಬಾರಿಯೂ ಅದೇ ರೀತಿ ಹೋಗಿರಬಹುದು ಎಂದು ಮನೆಯವರು ಅಂದುಕೊಂಡಿದ್ದರು.

ಇದನ್ನೂ ಓದಿ : ವಿಜಯಪುರ ಹೋಟೆಲ್​ ರೂಮ್‌ನಲ್ಲಿ ಇಬ್ಬರ ಶವ ಪತ್ತೆ : ಜೊತೆಗಾರನ ಕೊಲೆಗೈದು ಆತ್ಮಹತ್ಯೆಗೆ ಶರಣಾದ ಶಂಕೆ

ಇನ್ನು ಮೃತನ ಜೊತೆ ಇರುತ್ತಿದ್ದ ಮಾರಿಪಳ್ಳದ ವ್ಯಕ್ತಿಯೊಬ್ಬ ಸವಾದ್‌ನ ಅಣ್ಣನಿಗೆ ಕರೆ ಮಾಡಿ ನಿಮ್ಮ ತಮ್ಮ ಚಾರ್ಮಾಡಿಯಲ್ಲಿ ಕೊಲೆಯಾಗಿದ್ದಾನೆ ಎಂಬ ವಿಷಯ ತಿಳಿಸಿದ್ದಾನೆ. ಬಳಿಕ, ಈ ಬಗ್ಗೆ ವಿಚಾರಿಸಿದಾಗ ಚಾರ್ಮಾಡಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ ಎಂಬ ಸುದ್ದಿ ತಿಳಿದು ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಠಾಣೆಗೆ ತೆರಳಿ ವಿಚಾರಿಸಿದಾಗ ಮೃತದೇಹದ ಮೈಮೇಲಿನ ಬಟ್ಟೆ ಮತ್ತು ಕೈಯಲ್ಲಿರುವ ನೂಲನ್ನು ಆಧರಿಸಿ ಅದು ಸವಾದ್‌ ಎಂದೇ ಕುಟುಂಬಸ್ಥರು ಗುರುತು ಪತ್ತೆ ಮಾಡಿದ್ದಾರೆ.

ಇದನ್ನೂ ಓದಿ : ಕೆರೆಯಲ್ಲಿ ಯುವತಿ ಶವ ಪತ್ತೆ : ರಂಗನಾಥ ಸ್ವಾಮಿ ದೇವಾಲಯದ ಮುಂದೆ ಚಿರತೆ ಪ್ರತ್ಯಕ್ಷ

ಮೃತ ಸವಾದ್‌ನೊಂದಿಗೆ ಇದ್ದ ಇತರೆ ಮೂವರು ಆತನನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿ ಬಿಸಾಕಿರಬಹುದು ಎಂಬ ಶಂಕೆ ವ್ಯಕವಾಗಿದೆ. ಮೃತದೇಹವನ್ನು ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ಇರಿಸಲಾಗಿದ್ದು, ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.

ಬಂಟ್ವಾಳ : ಮರದಿಂದ ಅಡಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಲಾಯಿಬೆಟ್ಟು ಎಂಬಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆ ನಡೆದಿದೆ. ಬೋಳಿಯಾರು ಗ್ರಾಮದ ನಿವಾಸಿ ಇಬ್ರಾಹಿಂ ಎಂಬುವರ ಪುತ್ರ ಶಾಫಿ (28) ಮೃತ ದುರ್ದೈವಿ.

ಶಾಫಿ ಅವರು ಕಳೆದ ಅನೇಕ ವರ್ಷಗಳಿಂದ ಅಡಿಕೆ ವ್ಯವಹಾರ ನಡೆಸುತ್ತಿದ್ದರು. ಈ ವರ್ಷ ಅಡಿಕೆ ಕೀಳಲು ಸಾವಿರಾರು ರೂ. ನೀಡಿ ಹೊಸ ಸಲಾಕೆಯನ್ನು ಖರೀದಿಸಿದ್ದರು. ನಿನ್ನೆ ಅದೇ ಹೊಸ ಸಲಾಕೆಯಲ್ಲಿ ಮಲಾಯಿಬೆಟ್ಟುವಿನ ತೋಟದಲ್ಲಿ ಅಡಿಕೆ ಕೀಳುವ ವೇಳೆ ಶಾಫಿ ಅವರ ಕೈಯಿಂದ ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಹಾದು ಹೋಗಿರುವ ಎಲ್.ಟಿ.ವಯರ್​ಗೆ​ ತಾಗಿದೆ.

ಪೈಬರ್ ಸಲಾಕೆಯಲ್ಲಿ ಅಡಕೆ ಕೀಳಲು ಅಳವಡಿಸಿದ ಕಬ್ಬಿಣದ ಕತ್ತಿಯ ಮೂಲಕ ವಿದ್ಯುತ್ ಹರಿದು ಶಾಫಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಜೀಪಮುನ್ನೂರು ಗ್ರಾಮದ ಮೂಸಬ್ಬ ಎಂಬುವರ ತೋಟದಲ್ಲಿ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಸಜೀಪಮುನ್ನೂರು ಗ್ರಾಮಕರಣಿಕೆ ಸ್ವಾತಿ, ಮೆಸ್ಕಾಂನ ಅಧಿಕಾರಿಗಳು ಹಾಗೂ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ : ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಕ್ಕಾಜೆ ನಿವಾಸಿ ಸವಾದ್ (35) ಎಂಬುವರ ಮೃತದೇಹ ಚಾರ್ಮಾಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು 10 ದಿನಗಳಿಂದ ಸವಾದ್ ನಾಪತ್ತೆಯಾಗಿದ್ದ. ಈತ ಗಾಂಜಾ ವ್ಯಸನಿಯಾಗಿದ್ದು, ಈ ಹಿಂದೆಯೂ ಕೆಲವು ಬಾರಿ ನಾಪತ್ತೆಯಾಗಿ, ಕೆಲ ದಿನಗಳ ಬಳಿಕ ಮನೆಗೆ ವಾಪಸಾಗುತ್ತಿದ್ದ. ಈ ಬಾರಿಯೂ ಅದೇ ರೀತಿ ಹೋಗಿರಬಹುದು ಎಂದು ಮನೆಯವರು ಅಂದುಕೊಂಡಿದ್ದರು.

ಇದನ್ನೂ ಓದಿ : ವಿಜಯಪುರ ಹೋಟೆಲ್​ ರೂಮ್‌ನಲ್ಲಿ ಇಬ್ಬರ ಶವ ಪತ್ತೆ : ಜೊತೆಗಾರನ ಕೊಲೆಗೈದು ಆತ್ಮಹತ್ಯೆಗೆ ಶರಣಾದ ಶಂಕೆ

ಇನ್ನು ಮೃತನ ಜೊತೆ ಇರುತ್ತಿದ್ದ ಮಾರಿಪಳ್ಳದ ವ್ಯಕ್ತಿಯೊಬ್ಬ ಸವಾದ್‌ನ ಅಣ್ಣನಿಗೆ ಕರೆ ಮಾಡಿ ನಿಮ್ಮ ತಮ್ಮ ಚಾರ್ಮಾಡಿಯಲ್ಲಿ ಕೊಲೆಯಾಗಿದ್ದಾನೆ ಎಂಬ ವಿಷಯ ತಿಳಿಸಿದ್ದಾನೆ. ಬಳಿಕ, ಈ ಬಗ್ಗೆ ವಿಚಾರಿಸಿದಾಗ ಚಾರ್ಮಾಡಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ ಎಂಬ ಸುದ್ದಿ ತಿಳಿದು ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಠಾಣೆಗೆ ತೆರಳಿ ವಿಚಾರಿಸಿದಾಗ ಮೃತದೇಹದ ಮೈಮೇಲಿನ ಬಟ್ಟೆ ಮತ್ತು ಕೈಯಲ್ಲಿರುವ ನೂಲನ್ನು ಆಧರಿಸಿ ಅದು ಸವಾದ್‌ ಎಂದೇ ಕುಟುಂಬಸ್ಥರು ಗುರುತು ಪತ್ತೆ ಮಾಡಿದ್ದಾರೆ.

ಇದನ್ನೂ ಓದಿ : ಕೆರೆಯಲ್ಲಿ ಯುವತಿ ಶವ ಪತ್ತೆ : ರಂಗನಾಥ ಸ್ವಾಮಿ ದೇವಾಲಯದ ಮುಂದೆ ಚಿರತೆ ಪ್ರತ್ಯಕ್ಷ

ಮೃತ ಸವಾದ್‌ನೊಂದಿಗೆ ಇದ್ದ ಇತರೆ ಮೂವರು ಆತನನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿ ಬಿಸಾಕಿರಬಹುದು ಎಂಬ ಶಂಕೆ ವ್ಯಕವಾಗಿದೆ. ಮೃತದೇಹವನ್ನು ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ಇರಿಸಲಾಗಿದ್ದು, ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.