ETV Bharat / state

ಮಂಗಳೂರು ಪಾಲಿಕೆ ಪ್ರತಿಪಕ್ಷ ನಾಯಕರಾಗಿ ಅಬ್ದುಲ್ ರವೂಫ್ ಅಧಿಕಾರ ಸ್ವೀಕಾರ - ಅಬ್ದುಲ್ ರವೂಫ್ ಅಧಿಕಾರ ಸ್ವೀಕಾರ

ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ಆಡಳಿತ ಪಕ್ಷವು ಆಡಳಿತವಾಗಿ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಲ್ಲಿ ನಾವು ಅವರೊಂದಿಗೆ ಕೈಜೋಡಿಸಿ ಸಂಪೂರ್ಣ ಸಹಕಾರ ನೀಡಲಿದ್ದೇವೆ. ಆದರೆ ನ್ಯೂನತೆಗಳು ಕಂಡು ಬಂದಲ್ಲಿ ಅದನ್ನು ಎತ್ತಿ ಹಿಡಿದು, ಯಾವುದೇ ರಾಜಿ ಇಲ್ಲದೆ ಹೋರಾಟ ಮಾಡುತ್ತೇವೆ ಎಂದು ಪಾಲಿಕೆಯ ಪ್ರತಿಪಕ್ಷ ನಾಯಕ ಅಬ್ದುಲ್ ರವೂಫ್ ಹೇಳಿದರು.

ಅಬ್ದುಲ್ ರವೂಫ್
ಅಬ್ದುಲ್ ರವೂಫ್
author img

By

Published : Mar 3, 2020, 9:12 PM IST

ಮಂಗಳೂರು: ಮಹಾನಗರ ಪಾಲಿಕೆಯ ಪ್ರತಿಪಕ್ಷ ನಾಯಕರಾಗಿ ಇಂದು ಅಬ್ದುಲ್ ರವೂಫ್ ಅಧಿಕಾರ ಸ್ವೀಕರಿಸಿದರು.

ಬಳಿಕ ಮಾತನಾಡಿದ ಅವರು, ಪ್ರತಿಪಕ್ಷವಾಗಿ ನಮ್ಮ ಸಂಪೂರ್ಣ ಸಹಕಾರ ಆಡಳಿತ ಪಕ್ಷಕ್ಕೆ ಇರಲಿದೆ. ಅಂತೆಯೇ ಅವರೂ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಯಾವುದೇ ಗೊಂದಲ, ತಾರತಮ್ಯಗಳಿಲ್ಲದೆ ಅಧಿಕಾರ ನಡೆಸಬೇಕು ಎಂದರು.

ಅಧಿಕಾರ ಸ್ವೀಕಾರ ಬಳಿಕ ಮಾತನಾಡಿದ ಅಬ್ದುಲ್ ರವೂಫ್

ಮಂಗಳೂರು ಮಹಾನಗರ ಪಾಲಿಕೆಯ 21ನೇ ಅವಧಿಗೆ ಅಧಿಕಾರ ವಹಿಸಿಕೊಳ್ಳುವಲ್ಲಿ ಕಾಂಗ್ರೆಸ್ ಹಿನ್ನಡೆ ಕಂಡರೂ ಪ್ರತಿಪಕ್ಷವಾಗಿ ಅಧಿಕಾರ ವಹಿಸಿಕೊಂಡಿದೆ. ಪಕ್ಷ ಹಾಗೂ ಪಕ್ಷದ ನಾಯಕರು ನನ್ನ ಮೇಲೆ ವಿಶ್ವಾಸವಿರಿಸಿ ಪ್ರತಿಪಕ್ಷದ ನಾಯಕನ ಸ್ಥಾನದಲ್ಲಿ ಕೂರಿಸಿದ್ದಾರೆ. ನಾನು ಎಲ್ಲರಿಗೂ ತುಂಬು ಹೃದಯದ ಕೃತಜ್ಞತೆ ಸಲ್ಲಿಸುತ್ತೇನೆ. ಮಂಗಳೂರು ಜನತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ನಾವು ಯಶಸ್ವಿಯಾಗುತ್ತೇವೆ ಎಂದು ಅಬ್ದುಲ್ ರವೂಫ್ ಹೇಳಿದರು.

ಮಂಗಳೂರು: ಮಹಾನಗರ ಪಾಲಿಕೆಯ ಪ್ರತಿಪಕ್ಷ ನಾಯಕರಾಗಿ ಇಂದು ಅಬ್ದುಲ್ ರವೂಫ್ ಅಧಿಕಾರ ಸ್ವೀಕರಿಸಿದರು.

ಬಳಿಕ ಮಾತನಾಡಿದ ಅವರು, ಪ್ರತಿಪಕ್ಷವಾಗಿ ನಮ್ಮ ಸಂಪೂರ್ಣ ಸಹಕಾರ ಆಡಳಿತ ಪಕ್ಷಕ್ಕೆ ಇರಲಿದೆ. ಅಂತೆಯೇ ಅವರೂ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಯಾವುದೇ ಗೊಂದಲ, ತಾರತಮ್ಯಗಳಿಲ್ಲದೆ ಅಧಿಕಾರ ನಡೆಸಬೇಕು ಎಂದರು.

ಅಧಿಕಾರ ಸ್ವೀಕಾರ ಬಳಿಕ ಮಾತನಾಡಿದ ಅಬ್ದುಲ್ ರವೂಫ್

ಮಂಗಳೂರು ಮಹಾನಗರ ಪಾಲಿಕೆಯ 21ನೇ ಅವಧಿಗೆ ಅಧಿಕಾರ ವಹಿಸಿಕೊಳ್ಳುವಲ್ಲಿ ಕಾಂಗ್ರೆಸ್ ಹಿನ್ನಡೆ ಕಂಡರೂ ಪ್ರತಿಪಕ್ಷವಾಗಿ ಅಧಿಕಾರ ವಹಿಸಿಕೊಂಡಿದೆ. ಪಕ್ಷ ಹಾಗೂ ಪಕ್ಷದ ನಾಯಕರು ನನ್ನ ಮೇಲೆ ವಿಶ್ವಾಸವಿರಿಸಿ ಪ್ರತಿಪಕ್ಷದ ನಾಯಕನ ಸ್ಥಾನದಲ್ಲಿ ಕೂರಿಸಿದ್ದಾರೆ. ನಾನು ಎಲ್ಲರಿಗೂ ತುಂಬು ಹೃದಯದ ಕೃತಜ್ಞತೆ ಸಲ್ಲಿಸುತ್ತೇನೆ. ಮಂಗಳೂರು ಜನತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ನಾವು ಯಶಸ್ವಿಯಾಗುತ್ತೇವೆ ಎಂದು ಅಬ್ದುಲ್ ರವೂಫ್ ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.