ETV Bharat / state

ಮಂಗಳೂರು: ರೈಲಿನಲ್ಲಿ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ 1.48 ಕೋಟಿ ನಗದು, ₹40 ಲಕ್ಷದ ಚಿನ್ನಾಭರಣ ವಶ - Accused arrested by railway police in Mangaluru

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಬಂದ ರೈಲನ್ನು ತಪಾಸಣೆ ನಡೆಸಿದಾಗ ಎಸ್ 4 ಸೀಟ್ ನಂಬರ್ 35ರ ಪ್ರಯಾಣಿಕನ ಬಳಿ ಕಪ್ಪು ಬಣ್ಣದ ಬ್ಯಾಗ್ ಪತ್ತೆಯಾಗಿದೆ. ಅದರಲ್ಲಿ ಆಧಾರ ರಹಿತ 1.48 ಕೋಟಿ ರೂ. ನಗದು ಮತ್ತು ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.

accused-arrested-by-railway-police-in-mangaluru
ಆರೋಪಿಗಳನ್ನು ಬಂಧಿಸಿದ ರೈಲ್ವೆ ಪೊಲೀಸರು
author img

By

Published : Jan 24, 2022, 3:18 PM IST

Updated : Jan 24, 2022, 9:55 PM IST

ಮಂಗಳೂರು: ಮಹಾರಾಷ್ಟ್ರದಿಂದ ಮಂಗಳೂರಿಗೆ ಬಂದ ರೈಲಿನಲ್ಲಿ ಪ್ರಯಾಣಿಕನೋರ್ವ ದಾಖಲಾತಿ ಇಲ್ಲದೆ ಅಪಾರ ಪ್ರಮಾಣದ ನಗದು ಮತ್ತು ಚಿನ್ನವನ್ನು ಸಾಗಿಸುತ್ತಿರುವುದನ್ನು ಮಂಗಳೂರು ರೈಲ್ವೆ ಪೊಲೀಸರು ಪತ್ತೆ ಹಚ್ಚಿ ಪ್ರಯಾಣಿಕನನ್ನು ಬಂಧಿಸಿದ್ದಾರೆ.

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ಬಂದ ರೈಲನ್ನು ತಪಾಸಣೆ ನಡೆಸಿದಾಗ ಎಸ್ 4 ಸೀಟ್ ನಂಬರ್ 35 ರ ಪ್ರಯಾಣಿಕನ ಬಳಿ ಕಪ್ಪು ಬಣ್ಣದ ಬ್ಯಾಗ್ ಪತ್ತೆಯಾಗಿದೆ. ಈತ ಪನ್ವೇಲ್ ರೈಲು ನಿಲ್ದಾಣದಿಂದ ನಗರಕ್ಕೆ ಈ ರೈಲಿನಲ್ಲಿ ಬಂದಿದ್ದ.

police arrested accused in mangaluru
ಚಿನ್ನಾಭರಣ, ನಗದು ವಶಕ್ಕೆ ಪಡೆದ ಪೊಲೀಸರು

ಈತನ ಬಳಿ ಇದ್ದ ಕಪ್ಪು ಬಣ್ಣದ ಬ್ಯಾಗ್ ತಪಾಸಣೆ ನಡೆಸಿದಾಗ ಅದರಲ್ಲಿ ರೂ. 1,48,58,000 ನಗದು ಮತ್ತು 40 ಲಕ್ಷ ರೂ. ಮೌಲ್ಯದ 800 ಗ್ರಾಂ ಚಿನ್ನಾಭರಣ ಪತ್ತೆಯಾಗಿದೆ. ಇವುಗಳಿಗೆ ಪ್ರಯಾಣಿಕನಲ್ಲಿ ಯಾವುದೇ ದಾಖಲಾತಿ ಇಲ್ಲದೆ ಇರುವುದರಿಂದ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ದಾಖಲಾತಿ ಇಲ್ಲದೆ ಅಪಾರ ಪ್ರಮಾಣದ ಹಣ ಸಾಗಿಸುತ್ತಿದ್ದ ಪ್ರಯಾಣಿಕನನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

ಓದಿ: ಕೊರೊನಾ ಲಸಿಕೆ ಮೊದಲ ಡೋಸ್.. ಶೇ.100 ರಷ್ಟು ಸಾಧನೆ: ಸಚಿವ ಡಾ.ಕೆ.ಸುಧಾಕರ್

ಮಂಗಳೂರು: ಮಹಾರಾಷ್ಟ್ರದಿಂದ ಮಂಗಳೂರಿಗೆ ಬಂದ ರೈಲಿನಲ್ಲಿ ಪ್ರಯಾಣಿಕನೋರ್ವ ದಾಖಲಾತಿ ಇಲ್ಲದೆ ಅಪಾರ ಪ್ರಮಾಣದ ನಗದು ಮತ್ತು ಚಿನ್ನವನ್ನು ಸಾಗಿಸುತ್ತಿರುವುದನ್ನು ಮಂಗಳೂರು ರೈಲ್ವೆ ಪೊಲೀಸರು ಪತ್ತೆ ಹಚ್ಚಿ ಪ್ರಯಾಣಿಕನನ್ನು ಬಂಧಿಸಿದ್ದಾರೆ.

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ಬಂದ ರೈಲನ್ನು ತಪಾಸಣೆ ನಡೆಸಿದಾಗ ಎಸ್ 4 ಸೀಟ್ ನಂಬರ್ 35 ರ ಪ್ರಯಾಣಿಕನ ಬಳಿ ಕಪ್ಪು ಬಣ್ಣದ ಬ್ಯಾಗ್ ಪತ್ತೆಯಾಗಿದೆ. ಈತ ಪನ್ವೇಲ್ ರೈಲು ನಿಲ್ದಾಣದಿಂದ ನಗರಕ್ಕೆ ಈ ರೈಲಿನಲ್ಲಿ ಬಂದಿದ್ದ.

police arrested accused in mangaluru
ಚಿನ್ನಾಭರಣ, ನಗದು ವಶಕ್ಕೆ ಪಡೆದ ಪೊಲೀಸರು

ಈತನ ಬಳಿ ಇದ್ದ ಕಪ್ಪು ಬಣ್ಣದ ಬ್ಯಾಗ್ ತಪಾಸಣೆ ನಡೆಸಿದಾಗ ಅದರಲ್ಲಿ ರೂ. 1,48,58,000 ನಗದು ಮತ್ತು 40 ಲಕ್ಷ ರೂ. ಮೌಲ್ಯದ 800 ಗ್ರಾಂ ಚಿನ್ನಾಭರಣ ಪತ್ತೆಯಾಗಿದೆ. ಇವುಗಳಿಗೆ ಪ್ರಯಾಣಿಕನಲ್ಲಿ ಯಾವುದೇ ದಾಖಲಾತಿ ಇಲ್ಲದೆ ಇರುವುದರಿಂದ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ದಾಖಲಾತಿ ಇಲ್ಲದೆ ಅಪಾರ ಪ್ರಮಾಣದ ಹಣ ಸಾಗಿಸುತ್ತಿದ್ದ ಪ್ರಯಾಣಿಕನನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

ಓದಿ: ಕೊರೊನಾ ಲಸಿಕೆ ಮೊದಲ ಡೋಸ್.. ಶೇ.100 ರಷ್ಟು ಸಾಧನೆ: ಸಚಿವ ಡಾ.ಕೆ.ಸುಧಾಕರ್

Last Updated : Jan 24, 2022, 9:55 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.