ETV Bharat / state

ಮಂಗಳೂರು ಪಾಲಿಕೆಗೆ ಚುನಾವಣೆ ನಡೆಸಲು ಹೈಕೋರ್ಟ್‌ ಸೂಚನೆ, ಎಲೆಕ್ಷನ್‌ ಕಾವು ಶುರು - ಮಂಗಳೂರು ಪಾಲಿಕೆ ಚುನಾವಣೆ

ಐದು ತಿಂಗಳಿನಿಂದ ನಡೆಯದ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಇದೀಗ ಘಳಿಗೆ ಕೂಡಿ ಬಂದಿದ್ದು, ಹೈಕೋರ್ಟ್‌ ನವೆಂಬರ್ 15ರೊಳಗೆ ಹೊಸ ಆಡಳಿತ ವ್ಯವಸ್ಥೆ ಜಾರಿಗೆ ಬರಬೇಕೆಂದು ಸೂಚಿಸಿದೆ.

ಮಂಗಳೂರು ಪಾಲಿಕೆಯಲ್ಲಿ ಚುನಾವಣಾ ಕಾವು
author img

By

Published : Aug 28, 2019, 9:14 PM IST

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ ಶೀಘ್ರದಲ್ಲೇ ಚುನಾವಣೆ ನಡೆಯುವ ಮುನ್ಸೂಚನೆ ಸಿಕ್ಕಿದ್ದು, ನ್ಯಾಯಾಲಯ ನವೆಂಬರ್ 15 ರೊಳಗೆ ಹೊಸ ಆಡಳಿತ ವ್ಯವಸ್ಥೆ ಜಾರಿಗೆ ಬರಬೇಕೆಂದು ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಪಾಲಿಕೆಯಲ್ಲಿ ಚುನಾವಣಾ ಕಾವು ಆರಂಭವಾಗಿದೆ.

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಈ ಹಿಂದಿದ್ದ ಜನಪ್ರತಿನಿಧಿಗಳ ಆಡಳಿತ ಮುಗಿದು 5 ತಿಂಗಳು ಕಳೆದಿದೆ. ಜನಪ್ರತಿನಿಧಿಗಳ ಅಧಿಕಾರವಿಲ್ಲದೆ ಜನರು ತೊಂದರೆಗೆ ಸಿಲುಕಿದ್ದರು. ಈ ಬಗ್ಗೆ ಮಂಗಳೂರಿನ ಅಬ್ದುಲ್ ಫಾರೂಕ್ ಮತ್ತಿತರು ಹೈಕೋರ್ಟ್‌ಗೆ ಪಿಐಎಲ್ ಹಾಕಿ ನ್ಯಾಯಾಲಯದ ಗಮನ ಸೆಳೆದಿದ್ದರು. ಈ ಅರ್ಜಿ ಸ್ವೀಕರಿಸಿ ವಿಚಾರಣೆ ನಡೆಸಿದ ಹೈಕೋರ್ಟ್ ದ್ವಿಸದಸ್ಯ ಪೀಠ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಿ ನ. 15 ರೊಳಗೆ ಹೊಸ ಆಡಳಿತ ವ್ಯವಸ್ಥೆ ಜಾರಿಗೆ ತರಲು ಚುನಾವಣಾ ಆಯೋಗಕ್ಕೆ ಆದೇಶಿಸಿದೆ.

ಮಂಗಳೂರು ಪಾಲಿಕೆಯಲ್ಲಿ ಚುನಾವಣಾ ಕಾವು

ಈ ಹಿಂದೆ ನಿಗದಿಪಡಿಸಲಾಗಿದ್ದ ಮೀಸಲಾತಿಯ ಮೇಲೆ ನ್ಯಾಯಾಲಯದ ಮೆಟ್ಟಿಲೇರಿದ್ದರಿಂದ ಪಾಲಿಕೆ ಆಡಳಿತಾವಧಿ ಮುಗಿದಿದ್ದರೂ ಚುನಾವಣೆ ನಡೆದಿರಲಿಲ್ಲ. ಇತ್ತೀಚೆಗೆ ಮೀಸಲಾತಿ ವಿಚಾರದಲ್ಲಿ ಸರ್ಕಾರ ಸಲ್ಲಿಸಿದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದರ ಮರುಪರಿಶೀಲನಾ ಅರ್ಜಿ ಮಾತ್ರ ಇತ್ಯರ್ಥವಾಗಲು ಬಾಕಿ ಇದೆ. ಈ ಮಧ್ಯೆ ಪಾಲಿಕೆಗೆ ಎಲೆಕ್ಷನ್ ನಡೆಸುವಂತೆ ಕೋರ್ಟ್ ಸೂಚಿಸಿದೆ.

ಕಳೆದ ಚುನಾವಣೆಯಲ್ಲಿ ಪಾಲಿಕೆಯ ಒಟ್ಟು 60 ಸ್ಥಾನಗಳಲ್ಲಿ 35 ಸದಸ್ಯ ಬಲವಿದ್ದ ಕಾಂಗ್ರೆಸ್ ಅಧಿಕಾರದ ಗದ್ದುಗೆ ಪಡೆದಿತ್ತು.

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ ಶೀಘ್ರದಲ್ಲೇ ಚುನಾವಣೆ ನಡೆಯುವ ಮುನ್ಸೂಚನೆ ಸಿಕ್ಕಿದ್ದು, ನ್ಯಾಯಾಲಯ ನವೆಂಬರ್ 15 ರೊಳಗೆ ಹೊಸ ಆಡಳಿತ ವ್ಯವಸ್ಥೆ ಜಾರಿಗೆ ಬರಬೇಕೆಂದು ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಪಾಲಿಕೆಯಲ್ಲಿ ಚುನಾವಣಾ ಕಾವು ಆರಂಭವಾಗಿದೆ.

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಈ ಹಿಂದಿದ್ದ ಜನಪ್ರತಿನಿಧಿಗಳ ಆಡಳಿತ ಮುಗಿದು 5 ತಿಂಗಳು ಕಳೆದಿದೆ. ಜನಪ್ರತಿನಿಧಿಗಳ ಅಧಿಕಾರವಿಲ್ಲದೆ ಜನರು ತೊಂದರೆಗೆ ಸಿಲುಕಿದ್ದರು. ಈ ಬಗ್ಗೆ ಮಂಗಳೂರಿನ ಅಬ್ದುಲ್ ಫಾರೂಕ್ ಮತ್ತಿತರು ಹೈಕೋರ್ಟ್‌ಗೆ ಪಿಐಎಲ್ ಹಾಕಿ ನ್ಯಾಯಾಲಯದ ಗಮನ ಸೆಳೆದಿದ್ದರು. ಈ ಅರ್ಜಿ ಸ್ವೀಕರಿಸಿ ವಿಚಾರಣೆ ನಡೆಸಿದ ಹೈಕೋರ್ಟ್ ದ್ವಿಸದಸ್ಯ ಪೀಠ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಿ ನ. 15 ರೊಳಗೆ ಹೊಸ ಆಡಳಿತ ವ್ಯವಸ್ಥೆ ಜಾರಿಗೆ ತರಲು ಚುನಾವಣಾ ಆಯೋಗಕ್ಕೆ ಆದೇಶಿಸಿದೆ.

ಮಂಗಳೂರು ಪಾಲಿಕೆಯಲ್ಲಿ ಚುನಾವಣಾ ಕಾವು

ಈ ಹಿಂದೆ ನಿಗದಿಪಡಿಸಲಾಗಿದ್ದ ಮೀಸಲಾತಿಯ ಮೇಲೆ ನ್ಯಾಯಾಲಯದ ಮೆಟ್ಟಿಲೇರಿದ್ದರಿಂದ ಪಾಲಿಕೆ ಆಡಳಿತಾವಧಿ ಮುಗಿದಿದ್ದರೂ ಚುನಾವಣೆ ನಡೆದಿರಲಿಲ್ಲ. ಇತ್ತೀಚೆಗೆ ಮೀಸಲಾತಿ ವಿಚಾರದಲ್ಲಿ ಸರ್ಕಾರ ಸಲ್ಲಿಸಿದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದರ ಮರುಪರಿಶೀಲನಾ ಅರ್ಜಿ ಮಾತ್ರ ಇತ್ಯರ್ಥವಾಗಲು ಬಾಕಿ ಇದೆ. ಈ ಮಧ್ಯೆ ಪಾಲಿಕೆಗೆ ಎಲೆಕ್ಷನ್ ನಡೆಸುವಂತೆ ಕೋರ್ಟ್ ಸೂಚಿಸಿದೆ.

ಕಳೆದ ಚುನಾವಣೆಯಲ್ಲಿ ಪಾಲಿಕೆಯ ಒಟ್ಟು 60 ಸ್ಥಾನಗಳಲ್ಲಿ 35 ಸದಸ್ಯ ಬಲವಿದ್ದ ಕಾಂಗ್ರೆಸ್ ಅಧಿಕಾರದ ಗದ್ದುಗೆ ಪಡೆದಿತ್ತು.

Intro:ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯಲ್ಲಿ ಕಳೆದ ಐದು ತಿಂಗಳಿಂದ ಚುನಾವಣೆ ಶೀಘ್ರದಲ್ಲೇ ನಡೆಯುವ ಮುನ್ಸೂಚನೆ ಸಿಕ್ಕಿದೆ .ನ್ಯಾಯಾಲಯ ನವೆಂಬರ್ 15 ರೊಳಗೆ ಹೊಸ ಆಡಳಿತ ವ್ಯವಸ್ಥೆ ಬರಬೇಕೆಂದು ಸೂಚಿಸಿದ ಹಿನ್ನೆಲೆಯಲ್ಲಿ ಇನ್ನು ಮುಂದೆ ಪಾಲಿಕೆಯಲ್ಲಿ ಚುನಾವಣಾ ಕಾವು ಅರಂಭವಾಗಲಿದೆ.


Body:ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಈ ಹಿಂದೆ ಇದ್ದ ಜನಪ್ರತಿನಿಧಿಗಳ ಆಡಳಿತ ಮುಗಿದು ಐದು ತಿಂಗಳು ಅಗಿದೆ. ಮಾರ್ಚ್ ನಲ್ಲಿ ಜನಪ್ರತಿನಿಧಿಗಳ ಆಡಳಿತ ಮಾರ್ಚ್ ತಿಂಗಳಿಗೆ ಅಗತ್ಯವಾಗಿದೆ. ಆ ಬಳಿಕ ಪಾಲಿಕೆ ಅಧಿಕಾರಿಗಳು ಪಾಲಿಕೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಇದರಿಂದ ಜನಪ್ರತಿನಿಧಿಗಳ ಅಧಿಕಾರವಿಲ್ಲದೆ ಜನರು ಸಂಕಷ್ಟಕ್ಕೊಳಗಾಗಿದ್ದರು. ಈ ಬಗ್ಗೆ ಮಂಗಳೂರಿನ ಅಬ್ದುಲ್ ಫಾರೂಕ್ ಮತ್ತು ಇತರರು ಹೈಕೋರ್ಟ್ ಗೆ ಪಿಐಎಲ್ ಹಾಕಿ ಸರಕಾರ ಪ್ರಕಟಿಸಿದ ಮೀಸಲಾತಿ ಸರಿಯಾಗಿದೆ ಎಂದು ಹೈಕೋರ್ಟ್ ದ್ವಿಸದಸ್ಯ ಪೀಠ ಈಗಾಗಲೇ ಆದೇಶ ನೀಡಿದ್ದರೂ ಆಯೋಗ ಪಾಲಿಕೆ ಚುನಾವಣೆ ನಡೆಸಿಲ್ಲ. ಪಾಲಿಕೆಗೆ ಆಡಳಿತಾಧಿಕಾರಿ ನೇಮಕ ಮಾಡಿದ್ದರೂ ಅದರ ಅವಧಿ ಮುಂದಿನ ತಿಂಗಳಿಗೆ ಆರು ತಿಂಗಳು ಭರ್ತಿಯಾಗಲಿದೆ. ಚುನಾವಣೆ ನಡೆಸಲು ತಡೆಯಾಜ್ಞೆ ಕೂಡ ಇಲ್ಲ ಎಂದು ವಾದಿಸಿದ್ದರು.ಈ ಅರ್ಜಿ ಸ್ವೀಕರಿಸಿದ ಹೈಕೋರ್ಟ್ ದ್ವಿಸದಸ್ಯ ಪೀಠ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಿ ನ. 15 ರೊಳಗೆ ಹೊಸ ಆಡಳಿತ ವ್ಯವಸ್ಥೆ ಜಾರಿಗೆ ತರಲು ಚುನಾವಣಾ ಆಯೋಗ ಆದೇಶಿಸಿದೆ.

ಈ ಹಿಂದೆ ನಿಗದಿಪಡಿಸಲಾಗಿದ್ದ ಮೀಸಲಾತಿ ಯ ಮೇಲೆ ನ್ಯಾಯಲಯದ ಮೆಟ್ಟಿಲೇರಿದ್ದರಿಂದ ಪಾಲಿಕೆ ಆಡಳಿತ ಅವಧಿ ಮುಗಿದಿದ್ದರೂ ಚುನಾವಣೆ ನಡೆದಿರಲಿಲ್ಲ. ಇತ್ತೀಚೆಗೆ ಮೀಸಲಾತಿ ವಿಚಾರದಲ್ಲಿ ಸರಕಾರ ಸಲ್ಲಿಸಿದ ಮೇಲ್ಮನವಿ ಹೈಕೋರ್ಟ್ ವಜಾ ಮಾಡಿತ್ತು. ಇದರ ಮರುಪರಿಶೀಲನ ಅರ್ಜಿ ಮಾತ್ರ ಇತ್ಯರ್ಥ ವಾಗಲು ಬಾಕಿ ಇದೆ. ಇದರ ನಡುವೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿರುವ ತೀರ್ಪು ಶೀಘ್ರ ಚುನಾವಣೆ ನಡೆಯುವ ನಿರೀಕ್ಷೆ ಮೂಡಿಸಿದೆ.
ಕಳೆದ ಅವಧಿಯಲ್ಲಿ 60 ಸ್ಥಾನದಲ್ಲಿ 35 ಸ್ಥಾನ ಕಾಂಗ್ರೆಸ್ ಪಡೆದು ಅಧಿಕಾರ ನಡೆಸಿತ್ತು. ಈ ಬಾರಿ ಕಾಂಗ್ರೆಸ್ ಗೆ ಮತ್ತೆ ಅಧಿಕಾರ ಉಳಿಸಿಕೊಳ್ಳುವ ನಿರೀಕ್ಷೆ ಹೊಂದಿದ್ದರೆ ಈಗಾಗಲೆ ನಡೆದ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಬಿಜೆಪಿ ಬಹುಮತ ಪಡೆದುಕೊಂಡಿರುವುದು ಪಾಲಿಕೆಯಲ್ಲಿ ಈ ಬಾರಿ ಅಧಿಕಾರಕ್ಕೇರುವ ನಿರೀಕ್ಷೆಯನ್ನು ಹೊಂದಿದೆ.

ಚುನಾವಣೆ ಶೀಘ್ರ ನಡೆಯುವ ಸಾಧ್ಯತೆಯಿರುವುದರಿಂದ ಪಾಲಿಕೆಯಲ್ಲಿ ಚುನಾವಣಾ ರಂಗು ಪಡೆದುಕೊಳ್ಳಲಿದೆ.

ಬೈಟ್- ಶಶಿಧರ್ ಹೆಗ್ಡೆ, ಮಾಜಿ ಸಚೇತಕ, ಮಂಗಳೂರು ಮಹಾನಗರ ಪಾಲಿಕೆ
ಬೈಟ್ - ಮುಹಮ್ಮದ್, ಮಾಜಿ ಉಪಮೇಯರ್, ಮಂಗಳೂರು ಮಹಾನಗರ ಪಾಲಿಕೆ

reporter- vinodpudu



Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.