ETV Bharat / state

ಮಗುವಿನ ವೈದ್ಯಕೀಯ ಚಿಕಿತ್ಸೆಗೆ 17 ಲಕ್ಷ ರೂ. ಸಂಗ್ರಹಿಸಿದ ಅಮೃತ ಸಂಜೀವಿನಿ ಸಂಸ್ಥೆ - ಮುಖ್ಯಮಂತ್ರಿ ಯಡಿಯೂರಪ್ಪ

ತಣ್ಣೀರುಪಂತದ ದೇಸಿನ್ ಕೊಡಿ ರವಿಶಂಕರ್ ಕೋಟ್ಯಾನ್ ಅವರ 3 ವರ್ಷ 7 ತಿಂಗಳಿನ ಮಗಳು ಆರಾಧ್ಯ ಶ್ರವಣದೋಷ ಎದುರಿಸುತ್ತಿದ್ದಳು. ಚಿಕಿತ್ಸೆಗಾಗಿ ಸುಮಾರು 14 ಲಕ್ಷ ರೂ. ವೆಚ್ಚವಾಗುವುದಾಗಿ ವೈದ್ಯರು ತಿಳಿಸಿದ್ದರು. ಹೀಗಾಗಿ ಅಮೃತ ಸಂಜೀವಿನಿ ಸಂಸ್ಥೆ ಸಾರ್ವಜನಿಕರಿಂದ ಸುಮಾರು 17 ಲಕ್ಷ ರೂ. ಸಂಗ್ರಹಿಸಿ ಹಸ್ತಾಂತರಿಸಿದೆ.

Amrita Sanjeevini Institute collected Rs 17 lakh for medical treatment of the child
ಮಗುವಿನ ವೈದ್ಯಕೀಯ ಚಿಕಿತ್ಸೆಗೆ 17 ಲಕ್ಷ ರೂ ಸಂಗ್ರಹಿಸಿದ ಅಮೃತ ಸಂಜೀವಿನಿ ಸಂಸ್ಥೆ
author img

By

Published : Nov 16, 2020, 7:16 AM IST

ಬೆಳ್ತಂಗಡಿ (ದ.ಕ): ತಣ್ಣೀರುಪಂತದ ದೇಸಿನ್ ಕೊಡಿ ರವಿಶಂಕರ್ ಕೋಟ್ಯಾನ್ ಅವರ ಪುತ್ರಿ ಆರಾಧ್ಯಳ ಚಿಕಿತ್ಸೆಗೆ ‘ಅಮೃತ ಸಂಜೀವಿನಿ’ ಸಂಸ್ಥೆಯಿಂದ 17 ಲಕ್ಷ ರೂ. ಸಂಗ್ರಹಿಸಿ ಉಜಿರೆ ಶಾರದಾ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಸ್ತಾಂತರಿಸಲಾಯಿತು.

ಬಳಿಕ ಮಾತನಾಡಿದ್ದ ಗುರುಪುರ ವಜ್ರದೇಹಿ ಶ್ರೀ ರಾಜಶೇಖರಾನಂದ ಸ್ವಾಮೀಜಿ ‘ಅಮೃತ’ ಎಂಬ ಪದ ಪುನರ್ಜನ್ಮಕ್ಕೆ ಸಿಕ್ಕಿರುವಂತಹ ವರದಾನ. ತನ್ನೊಂದಿಗೆ ಸಮಾಜದ ಅದೆಷ್ಟೋ ದುರ್ಬಲ ವರ್ಗವನ್ನು ಕಟ್ಟುವ ಕೆಲಸದಲ್ಲಿ ಮುಂದಾಗಿರುವುದು ಧರ್ಮದ ಸ್ಥಾಪನೆಯಾಗಿದೆ ಎಂದರು.

ಸಮಾಜದಲ್ಲಿ ತಾವು ಮತ್ತೊಬ್ಬರ ಜೀವನಕ್ಕೆ ನೆರವಾಗುವುದೇ ಪುಣ್ಯದ ಕೆಲಸ. ಯುವಕರು ಒಗ್ಗೂಡಿ ಅಮೃತ ಸಂಜೀವಿನಿ ಎಂಬ ಸಂಘಟನೆ ಹುಟ್ಟುಹಾಕಿ ಮಹತ್ ಕಾರ್ಯದಲ್ಲಿ ತೊಡಗಿರುವುದು ಇತರ ಸಂಘಟನೆಗಳಿಗೆ ಮಾದರಿ ಎಂದರು.

ತಣ್ಣೀರುಪಂತದ ದೇಸಿನ್ ಕೊಡಿ ರವಿಶಂಕರ್ ಕೋಟ್ಯಾನ್ ಅವರ 3 ವರ್ಷ 7 ತಿಂಗಳಿನ ಮಗಳು ಆರಾಧ್ಯ ಶ್ರವಣದೋಷ ಎದುರಿಸುತ್ತಿದ್ದಳು. ಚಿಕಿತ್ಸೆಗಾಗಿ ಸುಮಾರು 14 ಲಕ್ಷ ರೂ. ವೆಚ್ಚವಾಗುವುದಾಗಿ ವೈದ್ಯರು ತಿಳಿಸಿದ್ದರು. ಇದನ್ನು ಗಮನಿಸಿ ಅಮೃತ ಸಂಜೀವಿನಿ ತಂಡವು 60ನೇ ಕಾರ್ಯಯೋಜನೆಯಾಗಿ ಆರಾಧ್ಯಳ ಚಿಕಿತ್ಸೆಗೆ 17 ಲಕ್ಷ ರೂ. ಸಂಗ್ರಹಿಸಿ ಮಾನವೀಯತೆ ಮೆರೆದಿದೆ.

ನ.5ರಂದು ಮಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ಶಾಸಕ ಹರೀಶ್ ಪೂಂಜ ಮನವಿಯಂತೆ ಮಗುವಿನ ಸಮಸ್ಯೆ ಆಲಿಸಿ ವಿಶೇಷ ಪ್ರಕರಣವೆಂದು ಪರಿಗಣಿಸಿ ವೈದ್ಯಕೀಯ ಸೇವೆಗೆ 5 ಲಕ್ಷ ರೂ. ಪರಿಹಾರ ನೀಡಲು ಸ್ಥಳದಲ್ಲೇ ಆದೇಶ ನೀಡಿದ್ದರು.

ಅಮೃತ ಸಂಜೀವಿನಿ ಸದಸ್ಯ ವಸಂತ ಪಣಪಿಲ, ರಾಜೇಶ್ ಶೆಟ್ಟಿ, ರವಿಶಂಕರ್ ಕೋಟ್ಯಾನ್,ಪ್ರಶಾಂತ್ ರಾಮಗಿರಿ, ಹಾಗೂ ಪೂರ್ಣಿಮಾ ಉಪಸ್ಥಿತರಿದ್ದರು.

ಬೆಳ್ತಂಗಡಿ (ದ.ಕ): ತಣ್ಣೀರುಪಂತದ ದೇಸಿನ್ ಕೊಡಿ ರವಿಶಂಕರ್ ಕೋಟ್ಯಾನ್ ಅವರ ಪುತ್ರಿ ಆರಾಧ್ಯಳ ಚಿಕಿತ್ಸೆಗೆ ‘ಅಮೃತ ಸಂಜೀವಿನಿ’ ಸಂಸ್ಥೆಯಿಂದ 17 ಲಕ್ಷ ರೂ. ಸಂಗ್ರಹಿಸಿ ಉಜಿರೆ ಶಾರದಾ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಸ್ತಾಂತರಿಸಲಾಯಿತು.

ಬಳಿಕ ಮಾತನಾಡಿದ್ದ ಗುರುಪುರ ವಜ್ರದೇಹಿ ಶ್ರೀ ರಾಜಶೇಖರಾನಂದ ಸ್ವಾಮೀಜಿ ‘ಅಮೃತ’ ಎಂಬ ಪದ ಪುನರ್ಜನ್ಮಕ್ಕೆ ಸಿಕ್ಕಿರುವಂತಹ ವರದಾನ. ತನ್ನೊಂದಿಗೆ ಸಮಾಜದ ಅದೆಷ್ಟೋ ದುರ್ಬಲ ವರ್ಗವನ್ನು ಕಟ್ಟುವ ಕೆಲಸದಲ್ಲಿ ಮುಂದಾಗಿರುವುದು ಧರ್ಮದ ಸ್ಥಾಪನೆಯಾಗಿದೆ ಎಂದರು.

ಸಮಾಜದಲ್ಲಿ ತಾವು ಮತ್ತೊಬ್ಬರ ಜೀವನಕ್ಕೆ ನೆರವಾಗುವುದೇ ಪುಣ್ಯದ ಕೆಲಸ. ಯುವಕರು ಒಗ್ಗೂಡಿ ಅಮೃತ ಸಂಜೀವಿನಿ ಎಂಬ ಸಂಘಟನೆ ಹುಟ್ಟುಹಾಕಿ ಮಹತ್ ಕಾರ್ಯದಲ್ಲಿ ತೊಡಗಿರುವುದು ಇತರ ಸಂಘಟನೆಗಳಿಗೆ ಮಾದರಿ ಎಂದರು.

ತಣ್ಣೀರುಪಂತದ ದೇಸಿನ್ ಕೊಡಿ ರವಿಶಂಕರ್ ಕೋಟ್ಯಾನ್ ಅವರ 3 ವರ್ಷ 7 ತಿಂಗಳಿನ ಮಗಳು ಆರಾಧ್ಯ ಶ್ರವಣದೋಷ ಎದುರಿಸುತ್ತಿದ್ದಳು. ಚಿಕಿತ್ಸೆಗಾಗಿ ಸುಮಾರು 14 ಲಕ್ಷ ರೂ. ವೆಚ್ಚವಾಗುವುದಾಗಿ ವೈದ್ಯರು ತಿಳಿಸಿದ್ದರು. ಇದನ್ನು ಗಮನಿಸಿ ಅಮೃತ ಸಂಜೀವಿನಿ ತಂಡವು 60ನೇ ಕಾರ್ಯಯೋಜನೆಯಾಗಿ ಆರಾಧ್ಯಳ ಚಿಕಿತ್ಸೆಗೆ 17 ಲಕ್ಷ ರೂ. ಸಂಗ್ರಹಿಸಿ ಮಾನವೀಯತೆ ಮೆರೆದಿದೆ.

ನ.5ರಂದು ಮಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ಶಾಸಕ ಹರೀಶ್ ಪೂಂಜ ಮನವಿಯಂತೆ ಮಗುವಿನ ಸಮಸ್ಯೆ ಆಲಿಸಿ ವಿಶೇಷ ಪ್ರಕರಣವೆಂದು ಪರಿಗಣಿಸಿ ವೈದ್ಯಕೀಯ ಸೇವೆಗೆ 5 ಲಕ್ಷ ರೂ. ಪರಿಹಾರ ನೀಡಲು ಸ್ಥಳದಲ್ಲೇ ಆದೇಶ ನೀಡಿದ್ದರು.

ಅಮೃತ ಸಂಜೀವಿನಿ ಸದಸ್ಯ ವಸಂತ ಪಣಪಿಲ, ರಾಜೇಶ್ ಶೆಟ್ಟಿ, ರವಿಶಂಕರ್ ಕೋಟ್ಯಾನ್,ಪ್ರಶಾಂತ್ ರಾಮಗಿರಿ, ಹಾಗೂ ಪೂರ್ಣಿಮಾ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.