ETV Bharat / state

ಯುವತಿಯ ಅಶ್ಲೀಲ ಫೋಟೋ ಜಾಲತಾಣಗಳಿಗೆ ಅಪ್​ಲೋಡ್​ ಮಾಡಿದ ಆರೋಪಿ ಅಂದರ್​ - Arrested, accused of pornography on social networking site

ಯುವತಿಯನ್ನು ಮದುವೆ ಮಾಡಿಕೊಡಲು ಅವರ ಮನೆಯವರು ವಿರೋಧ ವ್ಯಕ್ತಪಡಿಸಿದ ದ್ವೇಷದಿಂದ ಜಿತೇಶ್ ಎಂಬಾತ ಯುವತಿಯ ಆಶ್ಲೀಲ ಚಿತ್ರಗಳನ್ನು ಸೋಶಿಯಲ್​ ಮಿಡೀಯಾದಲ್ಲಿ ಅಪ್​ಲೋಡ್​ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಆರೋಪಿ ಅಂದರ್​
author img

By

Published : Sep 21, 2019, 8:07 PM IST

ಮಂಗಳೂರು: ಯುವತಿಯ ಅಶ್ಲೀಲ ಭಾವಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಜೇಶ್ವರ ನಿವಾಸಿ ಜಿತೇಶ್ ಸಪಲ್ಯ ಬಂಧಿತ ಆರೋಪಿ. ಜಿತೇಶ್​ಗೆ ಸಂತ್ರಸ್ತ ಯುವತಿಯೊಂದಿಗೆ 2-3 ವರ್ಷಗಳಿಂದ ಗೆಳೆತನವಿತ್ತು. ಈ ಹಿನ್ನೆಲೆ ಮೇ 8, 2018 ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಗೆ ಬಂದು ಯುವತಿಯ ಅಶ್ಲೀಲ ಭಾವಚಿತ್ರಗಳನ್ನು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದ.

ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು‌. ಈಗ ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಜಿತೇಶ್​ಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಮಂಗಳೂರು: ಯುವತಿಯ ಅಶ್ಲೀಲ ಭಾವಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಜೇಶ್ವರ ನಿವಾಸಿ ಜಿತೇಶ್ ಸಪಲ್ಯ ಬಂಧಿತ ಆರೋಪಿ. ಜಿತೇಶ್​ಗೆ ಸಂತ್ರಸ್ತ ಯುವತಿಯೊಂದಿಗೆ 2-3 ವರ್ಷಗಳಿಂದ ಗೆಳೆತನವಿತ್ತು. ಈ ಹಿನ್ನೆಲೆ ಮೇ 8, 2018 ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಗೆ ಬಂದು ಯುವತಿಯ ಅಶ್ಲೀಲ ಭಾವಚಿತ್ರಗಳನ್ನು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದ.

ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು‌. ಈಗ ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಜಿತೇಶ್​ಗೆ ನ್ಯಾಯಾಂಗ ಬಂಧನ ವಿಧಿಸಿದೆ.

Intro:ಮಂಗಳೂರು: ಯುವತಿಯ ಅಶ್ಲೀಲ ಭಾವಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವ ಆರೋಪಿಯನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಮಂಜೇಶ್ವರ ನಿವಾಸಿ ಜಿತೇಶ್ ಸಪಲ್ಯ ಎಂಬಾತ ದಸ್ತಗಿರಿಯಾದ ಆರೋಪಿ.

Body:ಆರೋಪಿ ಜಿತೇಶ್ ಗೆ ಸಂತ್ರಸ್ತ ಯುವತಿಯೊಂದಿಗೆ ಸುಮಾರು 2-3 ವರ್ಷಗಳಿಂದ ಗೆಳೆತನವಿತ್ತು. ಈ ಹಿನ್ನೆಲೆಯಲ್ಲಿ ಮೇ 8, 2018 ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಗೆ ಬಂದು ಯುವತಿಯ ಅಶ್ಲೀಲ ಭಾವಚಿತ್ರಗಳನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದನು. ಬಳಿಕ ಆರೋಪಿಯೊಂದಿಗೆ ಸಂತ್ರಸ್ತ ಯುವತಿಯನ್ನು ಮದುವೆ ಮಾಡಲು ಯುವತಿಯ ಮನೆಯವರು ವಿರೋಧ ವ್ಯಕ್ತಪಡಿಸಿದ ದ್ವೇಷದಿಂದ ಆರೋಪಿಯು ಯುವತಿಯ ಅಶ್ಲೀಲ ಭಾವಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದನು. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಾಗಿತ್ತು‌.

ಪೊಲೀಸರು ಆರೋಪಿಯ ಪತ್ತೆಗಾಗಿ ಮಾಹಿತಿ ಸಂಗ್ರಹಿಸಿ ಪುಂಜಾಲಕಟ್ಟೆ ಠಾಣಾ ಪಿಎಸ್ ಐ ಹಾಗೂ ಸಿಬ್ಬಂದಿ ಆರೋಪಿಯನ್ನು ಮಂಜೇಶ್ವರದಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ‌‌. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

Reporter_Vishwanath PanjimogaruConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.