ETV Bharat / state

ಅಕ್ರಮ ಗೋವು ಸಾಗಣೆ ಶಂಕೆ: ಮಾವಿನ ಹಣ್ಣು ಸಾಗಿಸುತ್ತಿದ್ದವನ ಮೇಲೆ ಹಲ್ಲೆ -

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದಾರೆಂದು ಶಂಕಿಸಿ ಮಾವಿನ ಹಣ್ಣು ಸಾಗಿಸುತ್ತಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ನಗರದ ಕುಲಶೇಖರ ಸಿಲ್ವರ್‌ ಗೇಟ್ ಬಳಿ ಘಟನೆ ನಡೆದಿದೆ.

ಅಕ್ರಮ ಗೋ ಸಾಗಾಟ ಶಂಕೆ: ಯುವಕನ ಮೇಲೆ ತಲವಾರ್​ನಿಂದ ಹಲ್ಲೆ
author img

By

Published : Jul 8, 2019, 2:50 AM IST

Updated : Jul 8, 2019, 8:19 AM IST

ಮಂಗಳೂರು: ಅಕ್ರಮವಾಗಿ ಜಾನುವಾರು ಸಾಗಿಸಲಾಗುತ್ತಿದೆ ಎಂದು ಶಂಕಿಸಿ, ವ್ಯಕ್ತಿವೋರ್ವನ ಮೇಲೆ ದುಷ್ಕರ್ಮಿಗಳ ಗುಂಪೊಂದು ತಲವಾರ್​​ನಿಂದ ದಾಳಿ ನಡೆಸಿರುವ ಘಟನೆ ನಗರದ ಕುಲಶೇಖರ ಸಿಲ್ವರ್‌ಗೇಟ್ ಬಳಿ ನಡೆದಿದೆ.

ಉಳಾಯಿಬೆಟ್ಟು ನಿವಾಸಿ ಉಮರ್ ಫಾರೂಕ್ (32) ಹಲ್ಲೆಗೊಳಗಾಗಿರುವ ವ್ಯಕ್ತಿ. ಹಲ್ಲೆ ನಡೆಸಿದ ಆರೋಪಿಗಳು ಪರಾರಿಯಾಗಿದ್ದಾರೆ. ಉಮರ್ ಫಾರೂಕ್ ಅವರು ಟೆಂಪೋ ಗೂಡ್ಸ್ ವಾಹನದಲ್ಲಿ ಮಾವಿನ ಹಣ್ಣು ತುಂಬಿಕೊಂಡು ಉಳಾಯಿಬೆಟ್ಟುವಿನಿಂದ ಮಂಗಳೂರಿನ ಮಾರುಕಟ್ಟೆಗೆ ಕೊಂಡೊಯ್ಯುತ್ತಿದ್ದರು. ಆದರೆ ವಾಹನವು ಕುಲಶೇಖರದ ಸಿಲ್ವರ್‌ಗೇಟ್ ಸಮೀಪಿಸುತ್ತಿದ್ದಂತೆ, ಒಂದೇ ಬೈಕ್‌ನಲ್ಲಿ ಆಗಮಿಸಿದ ಮೂವರು ಏಕಾಏಕಿ ವಾಹನವನ್ನು ಅಡ್ಡಗಟ್ಟಿ ನಿಲ್ಲಿಸಿದ್ದರು. ದುಷ್ಕರ್ಮಿಗಳು ವಾಹನದಲ್ಲಿ ಏನಿದೆ? ದನ ಸಾಗಿಸಲಾಗುತ್ತಿದಿಯಾ? ಎಂದು ಉಮರ್ ಫಾರೂಕ್​ರನ್ನು ಪ್ರಶ್ನಿಸಿದ್ದಾರೆ. ಆಗ ವಾಹನದಲ್ಲಿ ಮಾವಿನಹಣ್ಣು ಸಾಗಿಸುತ್ತಿರುವುದಾಗಿ ಫಾರೂಕ್ ಉತ್ತರಿಸಿದ್ದಾರೆ.

ಈ ವೇಳೆ ಅವಾಚ್ಯ ಪದಗಳಿಂದ ನಿಂದಿಸಿ ಫಾರೂಕ್‌ರನ್ನು ಹಿಡಿದೆಳೆದಿದ್ದಾರೆ. ಪರಿಣಾಮ ಹೆದರಿದ ಟೆಂಪೊ ಚಾಲಕ ಅಶ್ಫಕ್ ಸ್ಥಳದಿಂದ ಓಡಿ ಹೋಗಿದ್ದಾರೆ. ಆಗ ದುಷ್ಕರ್ಮಿಗಳು ಉಮರ್ ಫಾರೂಕ್​ ಮೇಲೆ ತಲವಾರು ಮತ್ತು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ. ಪರಿಣಾಮ ಫಾರೂಕ್​ ಅವರ ಕಾಲು, ಕೈ, ಬೆನ್ನಿನ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ‌‌.

ಸ್ಥಳಕ್ಕೆ ಮಂಗಳೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮಾವಿನಹಣ್ಣು ಲೋಡ್ ಮಾಡಿದ್ದ ವಾಹನವನ್ನು ಕಂಕನಾಡಿ ನಗರ ಠಾಣೆಗೆ ಕೊಂಡೊಯ್ಯಲಾಗಿದೆ. ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಅಕ್ರಮವಾಗಿ ಜಾನುವಾರು ಸಾಗಿಸಲಾಗುತ್ತಿದೆ ಎಂದು ಶಂಕಿಸಿ, ವ್ಯಕ್ತಿವೋರ್ವನ ಮೇಲೆ ದುಷ್ಕರ್ಮಿಗಳ ಗುಂಪೊಂದು ತಲವಾರ್​​ನಿಂದ ದಾಳಿ ನಡೆಸಿರುವ ಘಟನೆ ನಗರದ ಕುಲಶೇಖರ ಸಿಲ್ವರ್‌ಗೇಟ್ ಬಳಿ ನಡೆದಿದೆ.

ಉಳಾಯಿಬೆಟ್ಟು ನಿವಾಸಿ ಉಮರ್ ಫಾರೂಕ್ (32) ಹಲ್ಲೆಗೊಳಗಾಗಿರುವ ವ್ಯಕ್ತಿ. ಹಲ್ಲೆ ನಡೆಸಿದ ಆರೋಪಿಗಳು ಪರಾರಿಯಾಗಿದ್ದಾರೆ. ಉಮರ್ ಫಾರೂಕ್ ಅವರು ಟೆಂಪೋ ಗೂಡ್ಸ್ ವಾಹನದಲ್ಲಿ ಮಾವಿನ ಹಣ್ಣು ತುಂಬಿಕೊಂಡು ಉಳಾಯಿಬೆಟ್ಟುವಿನಿಂದ ಮಂಗಳೂರಿನ ಮಾರುಕಟ್ಟೆಗೆ ಕೊಂಡೊಯ್ಯುತ್ತಿದ್ದರು. ಆದರೆ ವಾಹನವು ಕುಲಶೇಖರದ ಸಿಲ್ವರ್‌ಗೇಟ್ ಸಮೀಪಿಸುತ್ತಿದ್ದಂತೆ, ಒಂದೇ ಬೈಕ್‌ನಲ್ಲಿ ಆಗಮಿಸಿದ ಮೂವರು ಏಕಾಏಕಿ ವಾಹನವನ್ನು ಅಡ್ಡಗಟ್ಟಿ ನಿಲ್ಲಿಸಿದ್ದರು. ದುಷ್ಕರ್ಮಿಗಳು ವಾಹನದಲ್ಲಿ ಏನಿದೆ? ದನ ಸಾಗಿಸಲಾಗುತ್ತಿದಿಯಾ? ಎಂದು ಉಮರ್ ಫಾರೂಕ್​ರನ್ನು ಪ್ರಶ್ನಿಸಿದ್ದಾರೆ. ಆಗ ವಾಹನದಲ್ಲಿ ಮಾವಿನಹಣ್ಣು ಸಾಗಿಸುತ್ತಿರುವುದಾಗಿ ಫಾರೂಕ್ ಉತ್ತರಿಸಿದ್ದಾರೆ.

ಈ ವೇಳೆ ಅವಾಚ್ಯ ಪದಗಳಿಂದ ನಿಂದಿಸಿ ಫಾರೂಕ್‌ರನ್ನು ಹಿಡಿದೆಳೆದಿದ್ದಾರೆ. ಪರಿಣಾಮ ಹೆದರಿದ ಟೆಂಪೊ ಚಾಲಕ ಅಶ್ಫಕ್ ಸ್ಥಳದಿಂದ ಓಡಿ ಹೋಗಿದ್ದಾರೆ. ಆಗ ದುಷ್ಕರ್ಮಿಗಳು ಉಮರ್ ಫಾರೂಕ್​ ಮೇಲೆ ತಲವಾರು ಮತ್ತು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ. ಪರಿಣಾಮ ಫಾರೂಕ್​ ಅವರ ಕಾಲು, ಕೈ, ಬೆನ್ನಿನ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ‌‌.

ಸ್ಥಳಕ್ಕೆ ಮಂಗಳೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮಾವಿನಹಣ್ಣು ಲೋಡ್ ಮಾಡಿದ್ದ ವಾಹನವನ್ನು ಕಂಕನಾಡಿ ನಗರ ಠಾಣೆಗೆ ಕೊಂಡೊಯ್ಯಲಾಗಿದೆ. ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಂಗಳೂರು: ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದಾರೆಂಬ ಶಂಕಿಸಿ ತಂಡವೊಂದು ಯುವಕನೋರ್ವನಿಗೆ ತಲವಾರಿನಿಂದ ದಾಳಿ ನಡೆಸಿದ ಘಟನೆ ನಗರದ ಇಂದು ಬೆಳ್ಳಂಬೆಳಗ್ಗೆ ಕುಲಶೇಖರ ಸಿಲ್ವರ್‌ಗೇಟ್ ಬಳಿ ನಡೆದಿದೆ.

ಉಳಾಯಿಬೆಟ್ಟು ನಿವಾಸಿ ಉಮರ್ ಫಾರೂಕ್ (32) ಹಲ್ಲೆಗೊಳಗಾದ ಯುವಕ. ಹಲ್ಲೆ ನಡೆಸಿದ ಆರೋಪಿಗಳು ಪರಾರಿಯಾಗಿದ್ದಾರೆ.

ಉಮರ್ ಫಾರೂಕ್ ಅವರು ಟೆಂಪೋ ಗೂಡ್ಸ್ ವಾಹನದಲ್ಲಿ ಮಾವಿನಹಣ್ಣನ್ನು ಲೋಡ್ ಮಾಡಿಕೊಂಡು ಇಂದು ಬೆಳಗ್ಗೆ 4:30ರ ಸುಮಾರಿಗೆ ಉಳಾಯಿಬೆಟ್ಟುವಿನಿಂದ
ಮಂಗಳೂರಿನ ಮಾರುಕಟ್ಟೆಗೆ ಕೊಂಡೊಯ್ಯುತ್ತಿದ್ದರು. ಆದರೆ ವಾಹನವು ಕುಲಶೇಖರದ ಸಿಲ್ವರ್‌ಗೇಟ್ ಸಮೀಪಿಸುತ್ತಿದ್ದಂತೆ ಒಂದೇ ಬೈಕ್‌ನಲ್ಲಿ ಆಗಮಿಸಿದ ಮೂವರಿದ್ದ ದುಷ್ಕರ್ಮಿಗಳ ತಂಡವೊಂದು ಏಕಾಏಕಿ ವಾಹನವನ್ನು ಅಡ್ಡಗಟ್ಟಿ ನಿಲ್ಲಿಸಿದ್ದಾರೆ ಎನ್ನಲಾಗಿದೆ.
ದುಷ್ಕರ್ಮಿಗಳು ‘ವಾಹನದಲ್ಲಿ ಏನಿದೆ? ದನ ಸಾಗಾಟ ಮಾಡಲಾಗುತ್ತಿದೆಯೇ’ ಎಂದು ಉಮರ್ ಫಾರೂಕ್ ರನ್ನು ಪ್ರಶ್ನಿಸಿದ್ದಾರೆ. ವಾಹನದಲ್ಲಿ ಮಾವಿನಹಣ್ಣು ಸಾಗಾಟ ಮಾಡಲಾಗುತ್ತಿದೆ ಎಂದು ಫಾರೂಕ್ ಉತ್ತರಿಸಿದ್ದಾರೆ.

Body:ಈ ವೇಳೆ ಜಾತಿ ನಿಂದನೆ ಮಾಡಿದ ದುಷ್ಕರ್ಮಿಗಳು, ಫಾರೂಕ್‌ನನ್ನು ಹಿಡಿದೆಳೆದಿದ್ದಾರೆ. ಪರಿಣಾಮ ಹೆದರಿದ ಟೆಂಪೊ ಚಾಲಕ ಅಶ್ಫಕ್ ಸ್ಥಳದಿಂದ ಓಡಿ ಹೋಗಿದ್ದಾರೆ. ಈ ಸಂದರ್ಭ ದುಷ್ಕರ್ಮಿಗಳು ಉಮರ್ ಫಾರೂಕ್ ಅವರಿಗೆ ತಲವಾರು ಮತ್ತು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ. ಪರಿಣಾಮ ಅವರ ಕಾಲು, ಕೈ, ಬೆನ್ನಿನ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಘಟನೆಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ‌‌.

ಸ್ಥಳಕ್ಕೆ ಮಂಗಳೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮಾವಿನಹಣ್ಣು ಲೋಡ್ ಮಾಡಿದ್ದ ವಾಹನವನ್ನು ಕಂಕನಾಡಿ ನಗರ ಠಾಣೆಗೆ ಕೊಂಡೊಯ್ಯಲಾಗಿದೆ. ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Reporter_Vishwanath PanjimogaruConclusion:
Last Updated : Jul 8, 2019, 8:19 AM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.