ETV Bharat / state

ಉಜಿರೆಯಲ್ಲಿ ಪೊಲೀಸ್, ಗೃಹ ರಕ್ಷಕ ಸಿಬ್ಬಂದಿ ಮೇಲೆ ಹಲ್ಲೆ: ನಾಲ್ವರ ಮೇಲೆ ಕೇಸ್

ನೈಟ್ ಬೀಟ್ ಕರ್ತವ್ಯದ ವೇಳೆ‌ ನಾಲ್ವರ ತಂಡ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮತ್ತು ಗೃಹರಕ್ಷಕ ದಳ ಸಿಬ್ಬಂದಿ ಮೇಲೆ‌ ಹಲ್ಲೆ ನಡೆಸಿರುವ ಘಟನೆ ಉಜಿರೆಯಲ್ಲಿ ನಡೆದಿದೆ.

author img

By

Published : Jan 13, 2021, 9:43 AM IST

Assault on duty police and Home Guard in Ujire
ಉಜಿರೆಯಲ್ಲಿ ಕರ್ತವ್ಯ ನಿರತ ಪೊಲೀಸ್, ಗೃಹ ರಕ್ಷಕ ಸಿಬ್ಬಂದಿ ಮೇಲೆ ಹಲ್ಲೆ

ಬೆಳ್ತಂಗಡಿ : ನೈಟ್ ಬೀಟ್ ಕರ್ತವ್ಯದ ವೇಳೆ‌ ಉಜಿರೆ ಜನಾರ್ದನ ದೇವಸ್ಥಾನದ ಬಳಿ ನಾಲ್ವರ ತಂಡ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮತ್ತು ಗೃಹರಕ್ಷಕ ದಳದ ಸಿಬ್ಬಂದಿ ಮೇಲೆ‌ ಹಲ್ಲೆ ನಡೆಸಿ ಸಮವಸ್ತ್ರ ಹರಿದು, ಜೀವ ಬೆದರಿಕೆಯೊಡ್ಡಿದ ಘಟನೆ ಸೋಮವಾರ ರಾತ್ರಿ‌ 11.30 ರ ವೇಳೆಗೆ ನಡೆದಿದೆ.

ಬೆಳ್ತಂಗಡಿ ಠಾಣೆ ಕಾನ್​ಸ್ಟೇಬಲ್ ವೆಂಕಟೇಶ್ ಸಿ.ಬಿ.‌‌ ಅವರು ಈ‌ ಸಂಬಂಧ ಠಾಣೆಗೆ ದೂರು ನೀಡಿದ್ದಾರೆ. ಉಜಿರೆ ನಿವಾಸಿಗಳಾದ ಸಾಬು, ಮಂಜುನಾಥ,‌ ಕಿರಣ ಮತ್ತು ನವೀನ ಎಂಬವರೇ ಹಲ್ಲೆ‌ ನಡೆಸಿದವರೆಂದು ಹೆಸರಿಸಲಾಗಿದೆ.

ಪೊಲೀಸ್ ಕಾನ್​ಸ್ಟೇಬಲ್ ಹಾಗೂ ಹೋಮ್‌ಗಾರ್ಡ್ ಅವರು ಸಮವಸ್ತ್ರದಲ್ಲಿ ಉಜಿರೆ ದ್ವಾರದ ಬಳಿ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ಅಲ್ಲಿ ಸೇರಿದ ಜನರನ್ನು ಅಲ್ಲಿಂದ ಹೋಗುವಂತೆ ತಿಳಿಸಿದ್ದಾರೆ. ಈ ವೇಳೆ ಆರೋಪಿತರು ಪೊಲೀಸರನ್ನು ತುಚ್ಛವಾಗಿ ನಿಂದಿಸಿ ಕಾಲರ್ ಹಿಡಿದೆಳೆದು ಹರಿದಿರುವುದಲ್ಲದೇ, ಆರೋಪಿಗಳೆಲ್ಲರೂ ಸೇರಿ ಕೈಗಳಿಂದ ಹಲ್ಲೆ ನಡೆಸಿ, ಕಾಲಿನಿಂದ ತುಳಿದು ಕುತ್ತಿಗೆಯನ್ನು ಹಿಡಿದು ಕೊಲೆ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಿಬ್ಬಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಓದಿ : ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ಕಳ್ಳರ ಬಂಧನ: ಐದು ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಬೆಳ್ತಂಗಡಿ : ನೈಟ್ ಬೀಟ್ ಕರ್ತವ್ಯದ ವೇಳೆ‌ ಉಜಿರೆ ಜನಾರ್ದನ ದೇವಸ್ಥಾನದ ಬಳಿ ನಾಲ್ವರ ತಂಡ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮತ್ತು ಗೃಹರಕ್ಷಕ ದಳದ ಸಿಬ್ಬಂದಿ ಮೇಲೆ‌ ಹಲ್ಲೆ ನಡೆಸಿ ಸಮವಸ್ತ್ರ ಹರಿದು, ಜೀವ ಬೆದರಿಕೆಯೊಡ್ಡಿದ ಘಟನೆ ಸೋಮವಾರ ರಾತ್ರಿ‌ 11.30 ರ ವೇಳೆಗೆ ನಡೆದಿದೆ.

ಬೆಳ್ತಂಗಡಿ ಠಾಣೆ ಕಾನ್​ಸ್ಟೇಬಲ್ ವೆಂಕಟೇಶ್ ಸಿ.ಬಿ.‌‌ ಅವರು ಈ‌ ಸಂಬಂಧ ಠಾಣೆಗೆ ದೂರು ನೀಡಿದ್ದಾರೆ. ಉಜಿರೆ ನಿವಾಸಿಗಳಾದ ಸಾಬು, ಮಂಜುನಾಥ,‌ ಕಿರಣ ಮತ್ತು ನವೀನ ಎಂಬವರೇ ಹಲ್ಲೆ‌ ನಡೆಸಿದವರೆಂದು ಹೆಸರಿಸಲಾಗಿದೆ.

ಪೊಲೀಸ್ ಕಾನ್​ಸ್ಟೇಬಲ್ ಹಾಗೂ ಹೋಮ್‌ಗಾರ್ಡ್ ಅವರು ಸಮವಸ್ತ್ರದಲ್ಲಿ ಉಜಿರೆ ದ್ವಾರದ ಬಳಿ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ಅಲ್ಲಿ ಸೇರಿದ ಜನರನ್ನು ಅಲ್ಲಿಂದ ಹೋಗುವಂತೆ ತಿಳಿಸಿದ್ದಾರೆ. ಈ ವೇಳೆ ಆರೋಪಿತರು ಪೊಲೀಸರನ್ನು ತುಚ್ಛವಾಗಿ ನಿಂದಿಸಿ ಕಾಲರ್ ಹಿಡಿದೆಳೆದು ಹರಿದಿರುವುದಲ್ಲದೇ, ಆರೋಪಿಗಳೆಲ್ಲರೂ ಸೇರಿ ಕೈಗಳಿಂದ ಹಲ್ಲೆ ನಡೆಸಿ, ಕಾಲಿನಿಂದ ತುಳಿದು ಕುತ್ತಿಗೆಯನ್ನು ಹಿಡಿದು ಕೊಲೆ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಿಬ್ಬಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಓದಿ : ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ಕಳ್ಳರ ಬಂಧನ: ಐದು ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.