ಕಡಬ: ತಾಲೂಕಿನ ಬಂಟ್ರ ಗ್ರಾಮದಲ್ಲಿ ಗಣಿ ಮತ್ತು ಭೂವಿಜ್ಞಾನ ಹಾಗೂ ಕಂದಾಯ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಮರಳು ದಾಸ್ತಾನು ವಶಪಡಿಸಿಕೊಂಡಿದ್ದಾರೆ.
ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ವಸುಧಾ ಹಾಗೂ ಕಂದಾಯ ನಿರೀಕ್ಷಕ ಅವಿನ್ ರಂಗತ್ ಮಲೆ ನೇತೃತ್ವದಲ್ಲಿ ದಾಳಿ ನಡೆದಿದೆ.
ಬಂಟ್ರ ಗ್ರಾಮದ ಸಜಿ ಎಂಬವರು ಅಕ್ರಮವಾಗಿ ದಾಸ್ತಾನು ಮಾಡಿದ್ದರು. ಸುಮಾರು 40 ಲೋಡ್ (400 ಮೆಟ್ರಿಕ್ ಟನ್) ಮರಳು ಅಕ್ರಮ ದಾಸ್ತಾನು ಪತ್ತೆಯಾಗಿದೆ.