ETV Bharat / state

ಬಂಟ್ವಾಳದಲ್ಲಿ ಬಾರ್‌ ಕಳ್ಳತನ ಪ್ರಕರಣ : ಮೂವರ ಬಂಧನ

author img

By

Published : Jul 11, 2020, 11:16 PM IST

ಬಾರ್‌ಗೆ ನುಗ್ಗಿ ಮದ್ಯದ ಬಾಟಲಿಗಳನ್ನು ಹೊತ್ತೊಯ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

bantwal
bantwal

ಬಂಟ್ವಾಳ: ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ಪೆರುವಾಯಿ ಎಂಬಲ್ಲಿ ಬಾರ್ ಒಂದಕ್ಕೆ ನುಗ್ಗಿ ಮದ್ಯದ ಬಾಟಲಿಗಳನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಎಸ್ಐ ರಾಜೇಶ್ ಕೆ.ವಿ ನೇತೃತ್ವದ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಗಳ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಮಾಣಿಲ ನಿವಾಸಿ ವಿಜಯಕುಮಾರ್ ಕ್ರಾಸ್ತ (40), ಗಣೇಶ್ ನಾಯ್ಕ (34), ಪೆರುವಾಯಿ ನಿವಾಸಿ ಸುರೇಶ್ ನಾಯ್ಕ (32) ಬಂಧಿತರು. ಜುಲೈ 7 ರಂದು ರಾತ್ರಿಯಿಂದ ಬೆಳಗ್ಗೆ 8 ರ ನಡುವೆ ಬಾರ್‌ನ ಹಿಂಬದಿಯ ಬಾಗಿಲು ಹಾಗೂ ಬೀಗವನ್ನು ಮುರಿದು ಒಳ ನುಗ್ಗಿದ್ದಾರೆ. ಸುಮಾರು 50 ಸಾವಿರ ರೂ. ಮೌಲ್ಯದ ಮದ್ಯವನ್ನು ಕದ್ದು ಪರಾರಿಯಾಗಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ, ತನಿಖೆಯನ್ನು ಕೈಗೊಂಡ ಸಂದರ್ಭದಲ್ಲಿ ಆರೋಪಿಗಳ ಪತ್ತೆಯಾಗಿದೆ. ಘಟನೆಗೆ ಸಂಬಂಧಿಸಿದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಬಂಟ್ವಾಳ: ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ಪೆರುವಾಯಿ ಎಂಬಲ್ಲಿ ಬಾರ್ ಒಂದಕ್ಕೆ ನುಗ್ಗಿ ಮದ್ಯದ ಬಾಟಲಿಗಳನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಎಸ್ಐ ರಾಜೇಶ್ ಕೆ.ವಿ ನೇತೃತ್ವದ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಗಳ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಮಾಣಿಲ ನಿವಾಸಿ ವಿಜಯಕುಮಾರ್ ಕ್ರಾಸ್ತ (40), ಗಣೇಶ್ ನಾಯ್ಕ (34), ಪೆರುವಾಯಿ ನಿವಾಸಿ ಸುರೇಶ್ ನಾಯ್ಕ (32) ಬಂಧಿತರು. ಜುಲೈ 7 ರಂದು ರಾತ್ರಿಯಿಂದ ಬೆಳಗ್ಗೆ 8 ರ ನಡುವೆ ಬಾರ್‌ನ ಹಿಂಬದಿಯ ಬಾಗಿಲು ಹಾಗೂ ಬೀಗವನ್ನು ಮುರಿದು ಒಳ ನುಗ್ಗಿದ್ದಾರೆ. ಸುಮಾರು 50 ಸಾವಿರ ರೂ. ಮೌಲ್ಯದ ಮದ್ಯವನ್ನು ಕದ್ದು ಪರಾರಿಯಾಗಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ, ತನಿಖೆಯನ್ನು ಕೈಗೊಂಡ ಸಂದರ್ಭದಲ್ಲಿ ಆರೋಪಿಗಳ ಪತ್ತೆಯಾಗಿದೆ. ಘಟನೆಗೆ ಸಂಬಂಧಿಸಿದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.