ETV Bharat / state

ಇಂದು ಮಂಗಳೂರಿನಲ್ಲಿ ಗೃಹ ಸಚಿವರ ಶಾಂತಿ ಸಭೆ.. ಎಲ್ಲ ಸಮುದಾಯಗಳ ಮುಖಂಡರು ಭಾಗಿ.. - basavaraj bommayi statement in mangalore

ಮೊದಲಿನ ಸ್ಥಿತಿಗೆ ಮಂಗಳೂರನ್ನು ತರಬೇಕೆಂಬ ದೃಷ್ಟಿಯಿಂದ ಇಂದು ನಗರದಲ್ಲಿ ಮಹತ್ವದ ಶಾಂತಿ ಸಭೆಯನ್ನು ನಡೆಸುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

basavaraj bommayi statement in mangalore
ಗೃಹ ಸಚಿವ ಬಸವರಾಜ ಬೊಮ್ಮಾಯಿ
author img

By

Published : Dec 31, 2019, 12:10 PM IST

Updated : Dec 31, 2019, 2:27 PM IST

ಮಂಗಳೂರು: ಮೊದಲಿನ ಸ್ಥಿತಿಗೆ ಮಂಗಳೂರನ್ನು ತರಬೇಕೆಂಬ ದೃಷ್ಟಿಯಿಂದ ಇಂದು ನಗರದಲ್ಲಿ ಮಹತ್ವದ ಶಾಂತಿ ಸಭೆಯನ್ನು ನಡೆಸುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಗರದ ಬಜ್ಪೆ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಎಲ್ಲಾ ಶಾಸಕರು, ಸಂಸದರು, ಜನಪ್ರತಿನಿಧಿಗಳು, ಮಾಜಿ ಶಾಸಕರು ಹಾಗೂ ಎಲ್ಲಾ ಸಮುದಾಯದ ಮುಖಂಡರನ್ನು ಸೇರಿಸಿ ಶಾಂತಿ ಸಭೆ ನಡೆಸುವುದಾಗಿ ತಿಳಿಸಿದರು. ಜನರಿಗೆ ಅನುಕೂಲವಾಗುವಂತಹ ರೀತಿ ನಗರವನ್ನು ಯಥಾ ಸ್ಥಿತಿಗೆ ತರಲು ಪ್ರಯತ್ನ ಪಡುತ್ತೇನೆಂದು ಹೇಳಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ..

ನಗರದ ಕಾನೂನು ಮತ್ತು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಅಧ್ಯಯನ ಮಾಡಲು ನಾನು ಮಂಗಳೂರಿಗೆ ಬಂದಿದ್ದೇನೆ‌. ಜೊತೆಗೆ ಅಧಿಕಾರಿಗಳಿಗೆ ಸಮರ್ಪಕ ಮಾರ್ಗಸೂಚಿಯನ್ನು ನೀಡಲಿದ್ದೇನೆ ಎಂದರು. ಎಲ್ಲಾ ಸಮುದಾಯದ ಜನರನ್ನು ಭೇಟಿಯಾಗಿ ಇಲ್ಲಿನ ಪರಿಸ್ಥಿತಿಯನ್ನ ಸಾಮಾನ್ಯ ಸ್ಥಿತಿಗೆ ತರುವ ಪ್ರಯತ್ನ ಮಾಡಲಾಗುವುದು. ಮೊನ್ನೆಯ ಪ್ರಕರಣದ ಬಳಿಕ ಎಲ್ಲಾ ಸಮುದಾಯದವರು ನಮಗೆ ಸಹಕಾರ ನೀಡುತ್ತಿದ್ದಾರೆ ಎಂದು ತಿಳಿಸಿದರು.

ಮಂಗಳೂರು: ಮೊದಲಿನ ಸ್ಥಿತಿಗೆ ಮಂಗಳೂರನ್ನು ತರಬೇಕೆಂಬ ದೃಷ್ಟಿಯಿಂದ ಇಂದು ನಗರದಲ್ಲಿ ಮಹತ್ವದ ಶಾಂತಿ ಸಭೆಯನ್ನು ನಡೆಸುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಗರದ ಬಜ್ಪೆ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಎಲ್ಲಾ ಶಾಸಕರು, ಸಂಸದರು, ಜನಪ್ರತಿನಿಧಿಗಳು, ಮಾಜಿ ಶಾಸಕರು ಹಾಗೂ ಎಲ್ಲಾ ಸಮುದಾಯದ ಮುಖಂಡರನ್ನು ಸೇರಿಸಿ ಶಾಂತಿ ಸಭೆ ನಡೆಸುವುದಾಗಿ ತಿಳಿಸಿದರು. ಜನರಿಗೆ ಅನುಕೂಲವಾಗುವಂತಹ ರೀತಿ ನಗರವನ್ನು ಯಥಾ ಸ್ಥಿತಿಗೆ ತರಲು ಪ್ರಯತ್ನ ಪಡುತ್ತೇನೆಂದು ಹೇಳಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ..

ನಗರದ ಕಾನೂನು ಮತ್ತು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಅಧ್ಯಯನ ಮಾಡಲು ನಾನು ಮಂಗಳೂರಿಗೆ ಬಂದಿದ್ದೇನೆ‌. ಜೊತೆಗೆ ಅಧಿಕಾರಿಗಳಿಗೆ ಸಮರ್ಪಕ ಮಾರ್ಗಸೂಚಿಯನ್ನು ನೀಡಲಿದ್ದೇನೆ ಎಂದರು. ಎಲ್ಲಾ ಸಮುದಾಯದ ಜನರನ್ನು ಭೇಟಿಯಾಗಿ ಇಲ್ಲಿನ ಪರಿಸ್ಥಿತಿಯನ್ನ ಸಾಮಾನ್ಯ ಸ್ಥಿತಿಗೆ ತರುವ ಪ್ರಯತ್ನ ಮಾಡಲಾಗುವುದು. ಮೊನ್ನೆಯ ಪ್ರಕರಣದ ಬಳಿಕ ಎಲ್ಲಾ ಸಮುದಾಯದವರು ನಮಗೆ ಸಹಕಾರ ನೀಡುತ್ತಿದ್ದಾರೆ ಎಂದು ತಿಳಿಸಿದರು.

Intro:ಮಂಗಳೂರು: ಮಂಗಳೂರನ್ನು ಮೊದಲಿನ ಸ್ಥಿತಿಗೆ ತರಬೇಕೆಂಬ ದೃಷ್ಟಿಯಿಂದ ಇಂದು ನಗರದಲ್ಲಿ ಮಹತ್ವದ ಶಾಂತಿ ಸಭೆಯನ್ನು ನಡೆಸಲಿದ್ದೇನೆ‌‌. ಅದಕ್ಕಾಗಿ ಎಲ್ಲಾ ಶಾಸಕರು, ಸಂಸದರು, ಜನಪ್ರತಿನಿಧಿಗಳು, ಮಾಜಿ ಶಾಸಕರು, ಎಲ್ಲಾ ಸಮುದಾಯದ ಮುಖಂಡರನ್ನು ಸೇರಿಸಿ ಯಥಾ ಸ್ಥಿತಿಯನ್ನು ಜನರಿಗೆ ಅನುಕೂಲವಾಗುವಂತಹ ರೀತಿಯಲ್ಲಿ ಮಾಡಲು ಪ್ರಯತ್ನ ಪಡುತ್ತೇನೆ ಎಂದು ಗೃಹಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ಬಜ್ಪೆ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ಕಾನೂನು ಮತ್ತು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಅಧ್ಯಯನ ಮಾಡಲು ನಾನು ಮಂಗಳೂರಿಗೆ ಬಂದಿದ್ದೇನೆ‌. ಜೊತೆಗೆ ಅಧಿಕಾರಿಗಳಿಗೆ ಸಮರ್ಪಕವಾದ ಮಾರ್ಗಸೂಚಿ ಯನ್ನು ನೀಡಲಿದ್ದೇನೆ ಎಂದು ಹೇಳಿದರು.




Body:ಮಂಗಳೂರಿನ ಎಲ್ಲಾ ಸಮುದಾಯದ ಜನರನ್ನು ಭೇಟಿಯಾಗಿ ಇಲ್ಲಿನ ಪರಿಸ್ಥಿತಿಯನ್ನು ಸಾಮಾನ್ಯ ಸ್ಥಿತಿಗೆ ಬರುವ ಪ್ರಯತ್ನ ಮಾಡಲಾಗುವುದು. ಅಲ್ಲದೆ ಜನರಿಗೆ ಎಲ್ಲಾ ರೀತಿಯ ಅನುಕೂಲ ಆಗುವಂತಹ ಪ್ರಯತ್ನ ಮಾಡಲಾಗುದು. ಮೊನ್ನೆಯ ಪ್ರಕರಣದ ಬಳಿಕ ಎಲ್ಲಾ ಸಮುದಾಯದವರೂ ನಮಗೆ ಸಹಕಾರ ನೀಡುತ್ತಿದ್ದಾರೆ ಬಸವರಾಜ ಬೊಮ್ಮಾಯಿ ತಿಳಿಸಿದರು.

Reporter_Vishwanath Panjimogaru



Conclusion:
Last Updated : Dec 31, 2019, 2:27 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.