ETV Bharat / state

ಮಂಗಳೂರಲ್ಲಿ ಗೋಮಾಂಸ ಸಾಗಿಸುತ್ತಿದ್ದ ವಾಹನ ತಡೆದು ವ್ಯಕ್ತಿ ಮೇಲೆ ಹಲ್ಲೆ

author img

By

Published : Jun 21, 2020, 3:28 PM IST

ಗೋಮಾಂಸ ಸಾಗಿಸುತ್ತಿದ್ದ ವಾಹನವನ್ನು ಮಾರ್ಗಮಧ್ಯೆ ತಡೆದು ಓರ್ವನಿಗೆ ಥಳಿಸಿ ವಾಹನವನ್ನು ಜಖಂಗೊಳಿಸಿದ ಘಟನೆ ಮಂಗಳೂರು ನಗರದ ಕಂಕನಾಡಿ ಹೈಲ್ಯಾಂಡ್ ಆಸ್ಪತ್ರೆ ಬಳಿ ನಡೆದಿದೆ.

locals
ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನ ಜಖಂ

ಮಂಗಳೂರು: ಕುದ್ರೋಳಿಯ ಕಸಾಯಿಖಾನೆಯಿಂದ ಗೋಮಾಂಸ ಸಾಗಿಸುತ್ತಿದ್ದ ವಾಹನವನ್ನು ಮಾರ್ಗಮಧ್ಯೆ ತಡೆದು ಓರ್ವನಿಗೆ ಥಳಿಸಿ ವಾಹನವನ್ನು ಜಖಂಗೊಳಿಸಿದ ಘಟನೆ ನಗರದ ಕಂಕನಾಡಿ ಹೈಲ್ಯಾಂಡ್ ಆಸ್ಪತ್ರೆ ಬಳಿ ನಡೆದಿದೆ.

ಗೋಮಾಂಸ ಸಾಗಿಸುತ್ತಿದ್ದ ವಾಹನ ಜಖಂ
ಕುದ್ರೋಳಿಯ ಕಸಾಯಿಖಾನೆಯಿಂದ ಕಂಕನಾಡಿಯಲ್ಲಿರುವ ಬೀಫ್ ಸ್ಟಾಲ್​​ಗೆ ವಾಹನದಲ್ಲಿ ಮಾಂಸ ಸಾಗಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ‌. ವಾಹನವನ್ನು ಬೈಕ್​​ನಲ್ಲಿ ಹಿಂಬಾಲಿಸಿದ ಐವರು ಯುವಕರು, ಹೈಲ್ಯಾಂಡ್ ಆಸ್ಪತ್ರೆಯ ಬಳಿ ತಡೆದು ಕುದ್ರೋಳಿಯ ರಶೀದ್ ಎಂಬುವರ ಮೇಲೆ ಹಲ್ಲೆ ನಡೆಸಿ ವಾಹನವನ್ನು ಜಖಂಗೊಳಿಸಿದ್ದಾರೆ. ವಾಹನದಲ್ಲಿ 200 ಕೆಜಿ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.
ಈ ಕುರಿತು ಮಂಗಳೂರು ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳೆದ ಭಾನುವಾರ ಕೂಡ ನಗರದ ಕೊಟ್ಟಾರದ ಇನ್ಫೋಸಿಸ್ ಬಳಿಯಲ್ಲಿ ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ತಡೆದಿದ್ದ ತಂಡವೊಂದು ವಾಹನ ಚಾಲಕನ ಮೇಲೆ ಹಲ್ಲೆ ಮಾಡಿ ವಾಹನವನ್ನು ಜಖಂಗೊಳಿಸಿದ್ದರು. ಈಗ ಅದೇ ರೀತಿಯ ಮತ್ತೊಂದು ಘಟನೆ ಮರುಕಳಿಸಿದೆ.

ಮಂಗಳೂರು: ಕುದ್ರೋಳಿಯ ಕಸಾಯಿಖಾನೆಯಿಂದ ಗೋಮಾಂಸ ಸಾಗಿಸುತ್ತಿದ್ದ ವಾಹನವನ್ನು ಮಾರ್ಗಮಧ್ಯೆ ತಡೆದು ಓರ್ವನಿಗೆ ಥಳಿಸಿ ವಾಹನವನ್ನು ಜಖಂಗೊಳಿಸಿದ ಘಟನೆ ನಗರದ ಕಂಕನಾಡಿ ಹೈಲ್ಯಾಂಡ್ ಆಸ್ಪತ್ರೆ ಬಳಿ ನಡೆದಿದೆ.

ಗೋಮಾಂಸ ಸಾಗಿಸುತ್ತಿದ್ದ ವಾಹನ ಜಖಂ
ಕುದ್ರೋಳಿಯ ಕಸಾಯಿಖಾನೆಯಿಂದ ಕಂಕನಾಡಿಯಲ್ಲಿರುವ ಬೀಫ್ ಸ್ಟಾಲ್​​ಗೆ ವಾಹನದಲ್ಲಿ ಮಾಂಸ ಸಾಗಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ‌. ವಾಹನವನ್ನು ಬೈಕ್​​ನಲ್ಲಿ ಹಿಂಬಾಲಿಸಿದ ಐವರು ಯುವಕರು, ಹೈಲ್ಯಾಂಡ್ ಆಸ್ಪತ್ರೆಯ ಬಳಿ ತಡೆದು ಕುದ್ರೋಳಿಯ ರಶೀದ್ ಎಂಬುವರ ಮೇಲೆ ಹಲ್ಲೆ ನಡೆಸಿ ವಾಹನವನ್ನು ಜಖಂಗೊಳಿಸಿದ್ದಾರೆ. ವಾಹನದಲ್ಲಿ 200 ಕೆಜಿ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.
ಈ ಕುರಿತು ಮಂಗಳೂರು ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳೆದ ಭಾನುವಾರ ಕೂಡ ನಗರದ ಕೊಟ್ಟಾರದ ಇನ್ಫೋಸಿಸ್ ಬಳಿಯಲ್ಲಿ ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ತಡೆದಿದ್ದ ತಂಡವೊಂದು ವಾಹನ ಚಾಲಕನ ಮೇಲೆ ಹಲ್ಲೆ ಮಾಡಿ ವಾಹನವನ್ನು ಜಖಂಗೊಳಿಸಿದ್ದರು. ಈಗ ಅದೇ ರೀತಿಯ ಮತ್ತೊಂದು ಘಟನೆ ಮರುಕಳಿಸಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.