ETV Bharat / state

ಅನ್ನದಾನ ಮಹಾದಾನ.. ಭಿಕ್ಷೆ ಬೇಡಿ ದೇವಸ್ಥಾನಕ್ಕೆ 1 ಲಕ್ಷ ರೂ ದೇಣಿಗೆ ನೀಡಿದ ಕುಂದಾಪುರದ ಅಶ್ವತ್ಥಮ್ಮ

author img

By

Published : Oct 19, 2022, 11:45 AM IST

Updated : Oct 19, 2022, 1:00 PM IST

ಭಿಕ್ಷುಕಿ ಅಶ್ವತ್ಥಮ್ಮ ಅವರು ಹಲವು ವರ್ಷಗಳಿಂದ ದೇವಸ್ಥಾನ, ಟೋಲ್‌ಗೇಟ್‌ ಸೇರಿದಂತೆ ವಿವಿಧೆಡೆ ಭಿಕ್ಷೆ ಬೇಡಿ ಸಂಗ್ರಹಿಸಿದ ಹಣವನ್ನು ಉಳಿಸಿ ದೇವಸ್ಥಾನಗಳ ಅನ್ನದಾನಕ್ಕೆ ದೇಣಿಗೆಯಾಗಿ ನೀಡುತ್ತ ಬಂದಿದ್ದಾರೆ.

beggar-ashwatthama-donates-money-to-bappanadu-temple
ಭಿಕ್ಷೆ ಬೇಡಿ ಹಣದಲ್ಲಿ ಬಪ್ಪನಾಡು ದೇವಸ್ಥಾನಕ್ಕೆ 1 ಲಕ್ಷ ದೇಣಿಗೆ ನೀಡಿದ ಅಶ್ವತ್ಥಮ್ಮ

ಮಂಗಳೂರು: ದೇವಸ್ಥಾನ ಸುತ್ತಮುತ್ತ ಪ್ರದೇಶಗಳಲ್ಲಿ ಭಿಕ್ಷೆ ಬೇಡಿ ಉಳಿದ ಒಂದು ಲಕ್ಷ ರೂಪಾಯಿ ಹಣವನ್ನು ವೃದ್ಧೆಯೊಬ್ಬರು ಬಪ್ಪನಾಡು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿ ಮಾದರಿಯಾಗಿದ್ದಾರೆ.

80 ಹರೆಯದ ವೃದ್ಧೆ ಈತನಕ ಭಿಕ್ಷೆ ಬೇಡಿ ಬಂದಿರುವ ಹಣದಲ್ಲಿ ವಿವಿಧ ದೇವಸ್ಥಾನಗಳಿಗೆ ಸುಮಾರು 9 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ 80ರ ವೃದ್ಧೆ ಅಶ್ವತ್ಥಮ್ಮ ಈ ಮಾದರಿ ಕೆಲಸ ಮಾಡಿದವರು.

ಸೋಮವಾರ ಮಂಗಳೂರಿನ ಹೊರವಲಯದ ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಆಗಮಿಸಿ ದೇವಸ್ಥಾನದ ಅನ್ನದಾನಕ್ಕೆ 1 ಲಕ್ಷ ರೂಪಾಯಿ ದೇಣಿಗೆಯಾಗಿ ನೀಡಿದ್ದಾರೆ. ದೇಣಿಗೆ ಸ್ವೀಕರಿಸಿದ ಬಳಿಕ ದೇವಳದ ಅರ್ಚಕ ನರಸಿಂಹ ಭಟ್‌ ಅವರು ಅಶ್ವತ್ಥಮ್ಮ ಅವರಿಗೆ ಪ್ರಸಾದ ನೀಡಿ ಹರಸಿದರು. ಆಡಳಿತ ಮೊಕ್ತೇಸರಾದ ಮನೋಹರ್‌ ಶೆಟ್ಟಿದೇವಳದ ವತಿಯಿಂದ ಗೌರವಿಸಿದರು. ಅರ್ಚಕ ಪ್ರಸಾದ್‌ ಭಟ್‌, ಅಕೌಂಟೆಂಟ್‌ ಶಿವಶಂಕರ್‌ ವರ್ಮ, ಕಾರ್ತಿಕ್‌ ಕೋಟ್ಯಾನ್‌ ಮತ್ತಿತರರು ಇದ್ದರು.

beggar-ashwatthama-donates-money-to-bappanadu-temple
ದೇವಸ್ಥಾನಕ್ಕೆ 1 ಲಕ್ಷ ದೇಣಿಗೆ ನೀಡಿದ ಅಶ್ವತ್ಥಮ್ಮ

ದೇವಸ್ಥಾನ ಪರಿಸರದಲ್ಲಿ ವಾಸ್ತವ್ಯ: ಇವರು ಹಲವು ವರ್ಷಗಳಿಂದ ದೇವಸ್ಥಾನ, ಟೋಲ್‌ಗೇಟ್‌ ಸೇರಿದಂತೆ ವಿವಿಧೆಡೆ ಭಿಕ್ಷೆ ಬೇಡಿ ಸಂಗ್ರಹಿಸಿದ ಹಣವನ್ನು ಉಳಿಸಿ ದೇವಸ್ಥಾನಗಳ ಅನ್ನದಾನಕ್ಕೆ ದೇಣಿಗೆಯಾಗಿ ನೀಡುತ್ತ ಬಂದಿದ್ದಾರೆ. ಅಶ್ವತ್ಥಮ್ಮ ಅವರು ಗಂಡ, ಮಕ್ಕಳೊಂದಿಗೆ ಸಂಸಾರ ಸಾಗಿಸುತ್ತಿದ್ದರು. ಕೆಲವು ವರ್ಷಗಳ ಹಿಂದೆ ಮೊದಲು ಗಂಡ, ಮಕ್ಕಳು ಮೃತಪಟ್ಟ ಬಳಿಕ ಜೀವನದಲ್ಲಿ ಜುಗುಪ್ಸೆಗೊಂಡು ಸಾಲಿಗ್ರಾಮ ಗುರು ನರಸಿಂಹ ದೇವಸ್ಥಾನದ ಬಳಿ ಭಿಕ್ಷೆ ಬೇಡಲು ಆರಂಭಿಸಿ, ದೇವಸ್ಥಾನ ಪರಿಸರದಲ್ಲಿ ವಾಸ್ತವ್ಯ ಹೂಡಲು ಆರಂಭಿಸಿದರು.

ದೇವಸ್ಥಾನಕ್ಕೆ ದೇಣಿಗೆ ನೀಡಿದ ಅಶ್ವತ್ಥಮ್ಮ

ಅಶ್ವತ್ಥಮ್ಮ ಅವರು ಭಿಕ್ಷೆ ಬೇಡಿ ಸಂಗ್ರಹವಾದ ಹಣವನ್ನು ಪ್ರತಿದಿನ ಪಿಗ್ಮಿಗೆ ಹಾಕುತ್ತಿದ್ದರು. ಹಗಲು ಭಿಕ್ಷೆ ಬೇಡಿ ಸಂಗ್ರಹಿಸಿದ ಹಣವನ್ನು ಪಿಗ್ಮಿಗೆ ಹಾಕಿ ಸಂಗ್ರಹವಾದ ಹಣ ಲಕ್ಷ ರೂ. ತಲುಪಿದಾಗ ಮೊದಲಿಗೆ ಸಾಲಿಗ್ರಾಮದ ಗುರು ನರಸಿಂಹ ದೇವಸ್ಥಾನಕ್ಕೆ ಆ ಹಣವನ್ನು ದೇಣಿಗೆಯಾಗಿ ನೀಡಿದ್ದರು.

ಭಿಕ್ಷೆ ಹಣ ದೇವಳಗಳಿಗೆ ದೇಣಿಗೆ: ಕೊರೊನಾ ಸಂದರ್ಭದಲ್ಲಿ ಅಯ್ಯಪ್ಪ ವ್ರತಧಾರಿಯಾಗಿ ಶಬರಿಮಲೆ ಅಯ್ಯಪ್ಪ ಸನ್ನಿಧಾನಕ್ಕೆ ಹೋಗಿದ್ದ ಅವರು ಅಲ್ಲಿನ ಎರಿಮಲೆ ಪಂಪಾ ಸನ್ನಿಧಾನದಲ್ಲಿ ಅನ್ನದಾನಕ್ಕೆಂದು 1.5 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಆ ಬಳಿಕ, ಗಂಗೊಳ್ಳಿಯ ದೇವಸ್ಥಾನಕ್ಕೆ 1 ಲಕ್ಷ ರೂ., ಕಂಚುಗೋಡು ಕುಂದಾಪುರ ದೇವಳಕ್ಕೆ 1 ಲಕ್ಷ ರೂ., ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅನ್ನದಾನಕ್ಕೆ 1 ಲಕ್ಷ ರೂ., ಪೊಳಲಿಯ ಅಖಿಲೇಶ್ವರಿ ದೇವಸ್ಥಾನಕ್ಕೆ 1 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ಅಶ್ವತ್ಥಮ್ಮ ಅವರು ಸ್ವಂತಕ್ಕೋಸ್ಕರ ಹಣ ಖರ್ಚು ಮಾಡದೆ, ದೇವಳದಲ್ಲಿ ಸಿಗುವ ಅನ್ನ ಪ್ರಸಾದವನ್ನು ಮಾತ್ರ ಸ್ವೀಕರಿಸುತ್ತಾರೆ.

ಇದನ್ನೂ ಓದಿ: ಬಿಹಾರದಲ್ಲೊಬ್ಬ 'ಡಿಜಿಟಲ್​ ಭಿಕ್ಷುಕ'.. ಕೊರಳಿನಲ್ಲಿ ಕ್ಯೂಆರ್​ ಕೋಡ್​ ಫಲಕ, ಕೈಯಲ್ಲಿ ಟ್ಯಾಬ್​​ ಹಿಡಿದು ಭಿಕ್ಷಾಟನೆ!!

ಮಂಗಳೂರು: ದೇವಸ್ಥಾನ ಸುತ್ತಮುತ್ತ ಪ್ರದೇಶಗಳಲ್ಲಿ ಭಿಕ್ಷೆ ಬೇಡಿ ಉಳಿದ ಒಂದು ಲಕ್ಷ ರೂಪಾಯಿ ಹಣವನ್ನು ವೃದ್ಧೆಯೊಬ್ಬರು ಬಪ್ಪನಾಡು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿ ಮಾದರಿಯಾಗಿದ್ದಾರೆ.

80 ಹರೆಯದ ವೃದ್ಧೆ ಈತನಕ ಭಿಕ್ಷೆ ಬೇಡಿ ಬಂದಿರುವ ಹಣದಲ್ಲಿ ವಿವಿಧ ದೇವಸ್ಥಾನಗಳಿಗೆ ಸುಮಾರು 9 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ 80ರ ವೃದ್ಧೆ ಅಶ್ವತ್ಥಮ್ಮ ಈ ಮಾದರಿ ಕೆಲಸ ಮಾಡಿದವರು.

ಸೋಮವಾರ ಮಂಗಳೂರಿನ ಹೊರವಲಯದ ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಆಗಮಿಸಿ ದೇವಸ್ಥಾನದ ಅನ್ನದಾನಕ್ಕೆ 1 ಲಕ್ಷ ರೂಪಾಯಿ ದೇಣಿಗೆಯಾಗಿ ನೀಡಿದ್ದಾರೆ. ದೇಣಿಗೆ ಸ್ವೀಕರಿಸಿದ ಬಳಿಕ ದೇವಳದ ಅರ್ಚಕ ನರಸಿಂಹ ಭಟ್‌ ಅವರು ಅಶ್ವತ್ಥಮ್ಮ ಅವರಿಗೆ ಪ್ರಸಾದ ನೀಡಿ ಹರಸಿದರು. ಆಡಳಿತ ಮೊಕ್ತೇಸರಾದ ಮನೋಹರ್‌ ಶೆಟ್ಟಿದೇವಳದ ವತಿಯಿಂದ ಗೌರವಿಸಿದರು. ಅರ್ಚಕ ಪ್ರಸಾದ್‌ ಭಟ್‌, ಅಕೌಂಟೆಂಟ್‌ ಶಿವಶಂಕರ್‌ ವರ್ಮ, ಕಾರ್ತಿಕ್‌ ಕೋಟ್ಯಾನ್‌ ಮತ್ತಿತರರು ಇದ್ದರು.

beggar-ashwatthama-donates-money-to-bappanadu-temple
ದೇವಸ್ಥಾನಕ್ಕೆ 1 ಲಕ್ಷ ದೇಣಿಗೆ ನೀಡಿದ ಅಶ್ವತ್ಥಮ್ಮ

ದೇವಸ್ಥಾನ ಪರಿಸರದಲ್ಲಿ ವಾಸ್ತವ್ಯ: ಇವರು ಹಲವು ವರ್ಷಗಳಿಂದ ದೇವಸ್ಥಾನ, ಟೋಲ್‌ಗೇಟ್‌ ಸೇರಿದಂತೆ ವಿವಿಧೆಡೆ ಭಿಕ್ಷೆ ಬೇಡಿ ಸಂಗ್ರಹಿಸಿದ ಹಣವನ್ನು ಉಳಿಸಿ ದೇವಸ್ಥಾನಗಳ ಅನ್ನದಾನಕ್ಕೆ ದೇಣಿಗೆಯಾಗಿ ನೀಡುತ್ತ ಬಂದಿದ್ದಾರೆ. ಅಶ್ವತ್ಥಮ್ಮ ಅವರು ಗಂಡ, ಮಕ್ಕಳೊಂದಿಗೆ ಸಂಸಾರ ಸಾಗಿಸುತ್ತಿದ್ದರು. ಕೆಲವು ವರ್ಷಗಳ ಹಿಂದೆ ಮೊದಲು ಗಂಡ, ಮಕ್ಕಳು ಮೃತಪಟ್ಟ ಬಳಿಕ ಜೀವನದಲ್ಲಿ ಜುಗುಪ್ಸೆಗೊಂಡು ಸಾಲಿಗ್ರಾಮ ಗುರು ನರಸಿಂಹ ದೇವಸ್ಥಾನದ ಬಳಿ ಭಿಕ್ಷೆ ಬೇಡಲು ಆರಂಭಿಸಿ, ದೇವಸ್ಥಾನ ಪರಿಸರದಲ್ಲಿ ವಾಸ್ತವ್ಯ ಹೂಡಲು ಆರಂಭಿಸಿದರು.

ದೇವಸ್ಥಾನಕ್ಕೆ ದೇಣಿಗೆ ನೀಡಿದ ಅಶ್ವತ್ಥಮ್ಮ

ಅಶ್ವತ್ಥಮ್ಮ ಅವರು ಭಿಕ್ಷೆ ಬೇಡಿ ಸಂಗ್ರಹವಾದ ಹಣವನ್ನು ಪ್ರತಿದಿನ ಪಿಗ್ಮಿಗೆ ಹಾಕುತ್ತಿದ್ದರು. ಹಗಲು ಭಿಕ್ಷೆ ಬೇಡಿ ಸಂಗ್ರಹಿಸಿದ ಹಣವನ್ನು ಪಿಗ್ಮಿಗೆ ಹಾಕಿ ಸಂಗ್ರಹವಾದ ಹಣ ಲಕ್ಷ ರೂ. ತಲುಪಿದಾಗ ಮೊದಲಿಗೆ ಸಾಲಿಗ್ರಾಮದ ಗುರು ನರಸಿಂಹ ದೇವಸ್ಥಾನಕ್ಕೆ ಆ ಹಣವನ್ನು ದೇಣಿಗೆಯಾಗಿ ನೀಡಿದ್ದರು.

ಭಿಕ್ಷೆ ಹಣ ದೇವಳಗಳಿಗೆ ದೇಣಿಗೆ: ಕೊರೊನಾ ಸಂದರ್ಭದಲ್ಲಿ ಅಯ್ಯಪ್ಪ ವ್ರತಧಾರಿಯಾಗಿ ಶಬರಿಮಲೆ ಅಯ್ಯಪ್ಪ ಸನ್ನಿಧಾನಕ್ಕೆ ಹೋಗಿದ್ದ ಅವರು ಅಲ್ಲಿನ ಎರಿಮಲೆ ಪಂಪಾ ಸನ್ನಿಧಾನದಲ್ಲಿ ಅನ್ನದಾನಕ್ಕೆಂದು 1.5 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಆ ಬಳಿಕ, ಗಂಗೊಳ್ಳಿಯ ದೇವಸ್ಥಾನಕ್ಕೆ 1 ಲಕ್ಷ ರೂ., ಕಂಚುಗೋಡು ಕುಂದಾಪುರ ದೇವಳಕ್ಕೆ 1 ಲಕ್ಷ ರೂ., ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅನ್ನದಾನಕ್ಕೆ 1 ಲಕ್ಷ ರೂ., ಪೊಳಲಿಯ ಅಖಿಲೇಶ್ವರಿ ದೇವಸ್ಥಾನಕ್ಕೆ 1 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ಅಶ್ವತ್ಥಮ್ಮ ಅವರು ಸ್ವಂತಕ್ಕೋಸ್ಕರ ಹಣ ಖರ್ಚು ಮಾಡದೆ, ದೇವಳದಲ್ಲಿ ಸಿಗುವ ಅನ್ನ ಪ್ರಸಾದವನ್ನು ಮಾತ್ರ ಸ್ವೀಕರಿಸುತ್ತಾರೆ.

ಇದನ್ನೂ ಓದಿ: ಬಿಹಾರದಲ್ಲೊಬ್ಬ 'ಡಿಜಿಟಲ್​ ಭಿಕ್ಷುಕ'.. ಕೊರಳಿನಲ್ಲಿ ಕ್ಯೂಆರ್​ ಕೋಡ್​ ಫಲಕ, ಕೈಯಲ್ಲಿ ಟ್ಯಾಬ್​​ ಹಿಡಿದು ಭಿಕ್ಷಾಟನೆ!!

Last Updated : Oct 19, 2022, 1:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.