ETV Bharat / state

ಮಂಗಳೂರಿನಲ್ಲಿ ಬೈಕ್​-ಬಸ್​ ಅಪಘಾತ: ವಾಹನಗಳಿಗೆ ಬೆಂಕಿ, ಓರ್ವನಿಗೆ ಗಾಯ

ಬೈಕ್​ ಹಾಗೂ ಬಸ್​ ನಡುವೆ ಅಪಘಾತ ಸಂಭವಿಸಿ ಎರಡೂ ವಾಹನಗಳು ಹೊತ್ತಿ ಉರಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

author img

By

Published : Apr 8, 2022, 4:08 PM IST

bike-and-bus-caught-fire-after-accident-in-mangaluru
ಮಂಗಳೂರಿನಲ್ಲಿ ಬೈಕ್​-ಬಸ್​ ಅಪಘಾತ: ಬೆಂಕಿ ಹೊತ್ತಿ ಉರಿದ ವಾಹನಗಳು

ಮಂಗಳೂರು: ನಗರದ ಹಂಪನಕಟ್ಟೆ ಸಿಗ್ನಲ್​ನಲ್ಲಿ ಬೈಕ್ ಮತ್ತು ಬಸ್​​ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಎರಡೂ ವಾಹನಗಳಿಗೆ ​​ಬೆಂಕಿ ಹೊತ್ತಿಕೊಂಡಿತು. ಇಂದು ಮಧ್ಯಾಹ್ನ 2.30ರ ಸುಮಾರಿಗೆ ಘಟನೆ ನಡೆದಿದ್ದು, ಅವಘಡದಲ್ಲಿ ವಾಹನಗಳು ಸುಟ್ಟುಹೋಗಿವೆ.

bike-and-bus-caught-fire-after-accident-in-mangaluru

ಜ್ಯೋತಿ ಕಡೆಯಿಂದ ಸ್ಟೇಟ್ ಬ್ಯಾಂಕ್​ನತ್ತ ಬರುವ ಅಸೆಲ್ ಎಂಬ ಖಾಸಗಿ ಸಿಟಿ ಬಸ್ ಹಂಪನಕಟ್ಟೆ ಸಿಗ್ನಲ್ ದಾಟಿ ಮುಂದೆ ಚಲಿಸುತ್ತಿದ್ದಂತೆ ಹಂಪನಕಟ್ಟೆಯಿಂದ ವೆಲೆನ್ಸಿಯ ಕಡೆಗೆ ಹೋಗುತ್ತಿದ್ದ ಬೈಕೊಂದು ಬಸ್ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತವಾದ ತಕ್ಷಣ ಬೈಕ್ ಬಸ್​​ನ ಚಕ್ರದಡಿಗೆ ಬಿದ್ದಿದ್ದು, ಬೈಕ್​ನ ಪೆಟ್ರೋಲ್ ಟ್ಯಾಂಕ್ ಸಿಡಿದು ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಬಸ್​​ನ ಡೀಸೆಲ್ ಟ್ಯಾಂಕ್​ಗೆ ಕೂಡ ಬೆಂಕಿ ಆವರಿಸಿಕೊಂಡು ಬಸ್ ಕೂಡ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.


ಬೈಕ್ ಸವಾರ ಬಲ್ಲಾಳ್ ಬಾಗ್​ನ ಡೈಲನ್ (26) ಎಂಬುವರ ಕಾಲಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್​​ಗೆ ಬೆಂಕಿ ಹೊತ್ತಿದ ತಕ್ಷಣ ಅದರಲ್ಲಿದ್ದ ಪ್ರಯಾಣಿಕರು, ಚಾಲಕ, ನಿರ್ವಾಹಕರು ಕೆಳಗಿಳಿದು ಪಾರಾಗಿದ್ದಾರೆ. ಬಸ್ ಹಾಗೂ ಬೈಕ್​ ಸಂಪೂರ್ಣ ಸುಟ್ಟು ಹೋಗಿದ್ದು ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.

ಘಟನೆ ಸಂದರ್ಭದಲ್ಲಿ ನೂರಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದರು. ಘಟನಾ ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಶಾಲೆಗಳಿಗೆ ಬಂದಿದ್ದು ಹುಸಿ ಬಾಂಬ್‌ ಬೆದರಿಕೆ: ಪೋಷಕರ ನಿಟ್ಟುಸಿರು

ಮಂಗಳೂರು: ನಗರದ ಹಂಪನಕಟ್ಟೆ ಸಿಗ್ನಲ್​ನಲ್ಲಿ ಬೈಕ್ ಮತ್ತು ಬಸ್​​ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಎರಡೂ ವಾಹನಗಳಿಗೆ ​​ಬೆಂಕಿ ಹೊತ್ತಿಕೊಂಡಿತು. ಇಂದು ಮಧ್ಯಾಹ್ನ 2.30ರ ಸುಮಾರಿಗೆ ಘಟನೆ ನಡೆದಿದ್ದು, ಅವಘಡದಲ್ಲಿ ವಾಹನಗಳು ಸುಟ್ಟುಹೋಗಿವೆ.

bike-and-bus-caught-fire-after-accident-in-mangaluru

ಜ್ಯೋತಿ ಕಡೆಯಿಂದ ಸ್ಟೇಟ್ ಬ್ಯಾಂಕ್​ನತ್ತ ಬರುವ ಅಸೆಲ್ ಎಂಬ ಖಾಸಗಿ ಸಿಟಿ ಬಸ್ ಹಂಪನಕಟ್ಟೆ ಸಿಗ್ನಲ್ ದಾಟಿ ಮುಂದೆ ಚಲಿಸುತ್ತಿದ್ದಂತೆ ಹಂಪನಕಟ್ಟೆಯಿಂದ ವೆಲೆನ್ಸಿಯ ಕಡೆಗೆ ಹೋಗುತ್ತಿದ್ದ ಬೈಕೊಂದು ಬಸ್ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತವಾದ ತಕ್ಷಣ ಬೈಕ್ ಬಸ್​​ನ ಚಕ್ರದಡಿಗೆ ಬಿದ್ದಿದ್ದು, ಬೈಕ್​ನ ಪೆಟ್ರೋಲ್ ಟ್ಯಾಂಕ್ ಸಿಡಿದು ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಬಸ್​​ನ ಡೀಸೆಲ್ ಟ್ಯಾಂಕ್​ಗೆ ಕೂಡ ಬೆಂಕಿ ಆವರಿಸಿಕೊಂಡು ಬಸ್ ಕೂಡ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.


ಬೈಕ್ ಸವಾರ ಬಲ್ಲಾಳ್ ಬಾಗ್​ನ ಡೈಲನ್ (26) ಎಂಬುವರ ಕಾಲಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್​​ಗೆ ಬೆಂಕಿ ಹೊತ್ತಿದ ತಕ್ಷಣ ಅದರಲ್ಲಿದ್ದ ಪ್ರಯಾಣಿಕರು, ಚಾಲಕ, ನಿರ್ವಾಹಕರು ಕೆಳಗಿಳಿದು ಪಾರಾಗಿದ್ದಾರೆ. ಬಸ್ ಹಾಗೂ ಬೈಕ್​ ಸಂಪೂರ್ಣ ಸುಟ್ಟು ಹೋಗಿದ್ದು ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.

ಘಟನೆ ಸಂದರ್ಭದಲ್ಲಿ ನೂರಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದರು. ಘಟನಾ ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಶಾಲೆಗಳಿಗೆ ಬಂದಿದ್ದು ಹುಸಿ ಬಾಂಬ್‌ ಬೆದರಿಕೆ: ಪೋಷಕರ ನಿಟ್ಟುಸಿರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.