ETV Bharat / state

ಬಂಟ್ವಾಳ: ಲಾರಿ ಡಿಕ್ಕಿಯಾಗಿ ಬೈಕ್ ಛಿದ್ರ, ಸವಾರ ಸಾವು- ಸಿಸಿಟಿವಿ ವಿಡಿಯೋ

author img

By

Published : Nov 17, 2021, 10:58 PM IST

ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಸಾವನ್ನಪ್ಪಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

bike-rider-dead-in-lorry-accident-cctv-video
ಬಂಟ್ವಾಳ: ಲಾರಿ ಡಿಕ್ಕಿಯಾಗಿ ಛಿದ್ರಗೊಂಡ ಬೈಕ್ ಸವಾರ ಸಾವು...CCTV Video

ಬಂಟ್ವಾಳ: ಇಲ್ಲಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೇಲ್ಕಾರ್​​ನ ಜಂಕ್ಷನ್​​ನಲ್ಲಿ ಲಾರಿಗೆ ಸಿಲುಕಿ ಬೈಕ್​ ಸವಾರ ಸಾವನ್ನಪ್ಪಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳೀಯ ಸರ್ವೀಸ್ ಸ್ಟೇಷನ್​ನಲ್ಲಿ ಕೆಲಸ ಮಾಡುತ್ತಿದ್ದ ಗಣೇಶ್ (36) ಎಂಬುವರೆ ಮೃತಪಟ್ಟವ.

ಮಂಗಳವಾರ ರಾತ್ರಿ 12 ಗಂಟೆ ವೇಳೆಗೆ ಘಟನೆ ಸಂಭವಿಸಿದೆ. ಮಾರ್ನಬೈಲ್ ಸರ್ವೀಸ್ ಸ್ಟೇಷನ್​ನಲ್ಲಿ ದುಡಿಯುತ್ತಿದ್ದ ಗಣೇಶ್ ಬೈಕ್​ನ್ನು ಕೊಣಾಜೆ ಕಡೆ ತಿರುಗಿಸುತ್ತಿದ್ದ ಸಂದರ್ಭದಲ್ಲಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಬೈಕ್​ಗೆ ಲಾರಿ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದರೂ ಕೂಡ ಸಾಧ್ಯವಾಗಿಲ್ಲ, ಈ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಅಪಘಾತದ ಸಿಸಿಟಿವಿ ವಿಡಿಯೋ

ಘಟನೆ ನಡೆದ ಕೂಡಲೇ ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ತೀವ್ರ ಗಾಯಗಳಿಂದ ಸಾವನ್ನಪ್ಪಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ದೆವ್ವ ಭಯದಲ್ಲಿ ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್ಸ್‌ಟೇಬಲ್‌: ಕನಸಲ್ಲಿ ಬರ್ತಿತ್ತಂತೆ ಹೆಣ್ಣಿನ ಆತ್ಮ

ಬಂಟ್ವಾಳ: ಇಲ್ಲಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೇಲ್ಕಾರ್​​ನ ಜಂಕ್ಷನ್​​ನಲ್ಲಿ ಲಾರಿಗೆ ಸಿಲುಕಿ ಬೈಕ್​ ಸವಾರ ಸಾವನ್ನಪ್ಪಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳೀಯ ಸರ್ವೀಸ್ ಸ್ಟೇಷನ್​ನಲ್ಲಿ ಕೆಲಸ ಮಾಡುತ್ತಿದ್ದ ಗಣೇಶ್ (36) ಎಂಬುವರೆ ಮೃತಪಟ್ಟವ.

ಮಂಗಳವಾರ ರಾತ್ರಿ 12 ಗಂಟೆ ವೇಳೆಗೆ ಘಟನೆ ಸಂಭವಿಸಿದೆ. ಮಾರ್ನಬೈಲ್ ಸರ್ವೀಸ್ ಸ್ಟೇಷನ್​ನಲ್ಲಿ ದುಡಿಯುತ್ತಿದ್ದ ಗಣೇಶ್ ಬೈಕ್​ನ್ನು ಕೊಣಾಜೆ ಕಡೆ ತಿರುಗಿಸುತ್ತಿದ್ದ ಸಂದರ್ಭದಲ್ಲಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಬೈಕ್​ಗೆ ಲಾರಿ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದರೂ ಕೂಡ ಸಾಧ್ಯವಾಗಿಲ್ಲ, ಈ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಅಪಘಾತದ ಸಿಸಿಟಿವಿ ವಿಡಿಯೋ

ಘಟನೆ ನಡೆದ ಕೂಡಲೇ ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ತೀವ್ರ ಗಾಯಗಳಿಂದ ಸಾವನ್ನಪ್ಪಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ದೆವ್ವ ಭಯದಲ್ಲಿ ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್ಸ್‌ಟೇಬಲ್‌: ಕನಸಲ್ಲಿ ಬರ್ತಿತ್ತಂತೆ ಹೆಣ್ಣಿನ ಆತ್ಮ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.