ETV Bharat / state

ಶಾಸಕ ಅಂಗಾರಗೆ ಕೈ ತಪ್ಪಿದ ಸಚಿವ ಸ್ಥಾನ: ಕಾರ್ಯಕರ್ತರಿಂದ ಅಸಹಾಕಾರ ಚಳುವಳಿ - cabinet grade ministerial post to angara

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ನಿರಂತರವಾಗಿ ಗೆಲುವು ಸಾಧಿಸುತ್ತಾ ಬಂದಿದೆ. ಬಿಜೆಪಿ ಪಕ್ಷಕ್ಕೆ ಇಲ್ಲಿನ ಜನರ ಆಶೀರ್ವಾದ ಇದ್ದೇ ಇದೆ. ಹಾಗಾಗಿ ಈ ಬಾರಿ ಶಾಸಕ ಎಸ್. ಅಂಗಾರ​ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ಸಿಗಬೇಕೆಂದು ಸುಳ್ಯದಲ್ಲಿ ಬಿಜೆಪಿ ಮಂಡಲ ಒತ್ತಾಯಿಸಿದೆ.

ವೆಂಕಟ್ ವಳಲಂಬೆ
author img

By

Published : Aug 21, 2019, 9:41 PM IST

ಮಂಗಳೂರು: ಸುಳ್ಯದಲ್ಲಿ ನಿರಂತರವಾಗಿ ಆರು ಬಾರಿ ಗೆಲುವು ಸಾಧಿಸಿದ ಶಾಸಕ ಎಸ್‌. ಅಂಗಾರ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ಸಿಗುವ ತನಕ ಸುಳ್ಯದಲ್ಲಿ ಬಿಜೆಪಿಯ ಎಲ್ಲಾ ಕೆಲಸ ಕಾರ್ಯಗಳನ್ನೂ ಸ್ಥಗಿತಗೊಳಿಸಲಾಗುವುದು ಎಂದು ಬಿಜೆಪಿ ಮಂಡಲ ಸಮಿತಿಯ ಅಧ್ಯಕ್ಷ ವೆಂಕಟ್ ವಳಲಂಬೆ ತಿಳಿಸಿದರು.

ಶಾಸಕ ಅಂಗಾರಗೆ ಸಚಿವ ಸ್ಥಾನ ಸಿಗಬೇಕೆಂದು ಒತ್ತಾಯಿಸಿದ ಸುಳ್ಯ ಬಿಜೆಪಿ

ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಮ್ಮ ಅಸಮಾಧಾನ ಹೊರ ಹಾಕಿದ ಅವರು, ಸುಳ್ಯ ವಿಧಾನಸಭಾ ಕ್ಷೇತ್ರದ 75 ಗ್ರಾಮದ 250 ಬೂತ್​ಗಳ ಕಾರ್ಯಕರ್ತರು ತಮ್ಮ ಈಗಿನ ಜವಾಬ್ದಾರಿಯಿಂದ ತಕ್ಷಣಕ್ಕೆ ಹೊರಬಂದು ಯಾವುದೇ ಪಕ್ಷದ ಕೆಲಸಗಳನ್ನು ಮಾಡುವುದಿಲ್ಲ. ಶಾಸಕ ಎಸ್.ಅಂಗಾರ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಸುಳ್ಯದಲ್ಲಿ ತೀವ್ರ ಆಕ್ರೋಶ ಭುಗಿಲೆದ್ದಿದೆ. ಪಕ್ಷದ ಪ್ರಮುಖರು ಶಾಸಕ ಅಂಗಾರ ಅವರಿಗೆ ಮುಂದಿನ ಬಾರಿ ಕ್ಯಾಬಿನೆಟ್​ನಲ್ಲಿ ಸಚಿವ ಸ್ಥಾನ ನೀಡುವ ಆಶ್ವಾಸನೆ ಕೊಟ್ಟರೆ ಮಾತ್ರ ನಾವು ಮತ್ತೆ ಪಕ್ಷದ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತೇವೆ ಎಂದು ತಮ್ಮ ನಿರ್ಧಾರವನ್ನು ಪ್ರಕಟಿಸಿದರು.

ಸುಳ್ಯ ವಿಧಾನಸಭೆಗೆ ಯಾವ ನ್ಯಾಯ ಸಿಗಬೇಕಿತ್ತೋ, ಅದು ಸಿಗದೆ ನಾವು ಆತಂಕದಲ್ಲಿದ್ದೇವೆ. 1992 ರಿಂದ ಬಿಜೆಪಿ ನಿರಂತರವಾಗಿ ಗೆಲ್ಲಲು ಈ ಭಾಗದ ಜನರ ಆಶೀರ್ವಾದವೇ ಕಾರಣ‌. ದ.ಕ.ಜಿಲ್ಲೆಯಲ್ಲಿ ಯಾವ ವಿಧಾನಸಭಾ ಕ್ಷೇತ್ರಗಳು ಸೋತರೂ ಸುಳ್ಯ ವಿಧಾನಸಭಾ ಕ್ಷೇತ್ರ ನಿರಂತರವಾಗಿ ಗೆಲುವನ್ನು ಸಾಧಿಸುತ್ತಾ ಬಂದಿದೆ. ಆದರೆ ಈ ಬಾರಿಯ ಯಡಿಯೂರಪ್ಪನವರ ಸರಕಾರದಲ್ಲಿ ನಮ್ಮ ತಾಲೂಕಿನ ಶಾಸಕರಿಗೆ ಸಚಿವ ಸ್ಥಾನ ಸಿಗಬಹುದಿತ್ತು ಎಂದು ಎಲ್ಲರ ಅಪೇಕ್ಷೆಯಾಗಿತ್ತು. ಆದರೆ ಅಂಗಾರರಿಗೆ ಯಾವುದೇ ಸಚಿವ ಸ್ಥಾನ ದೊರಕದಿರುವುದು ನಮಗೆಲ್ಲಾ ಅತೀವ ನೋವು ತಂದಿದೆ ಎಂದು ವೆಂಕಟ್ ವಳಲಂಬೆ ಹೇಳಿದರು.

ನಾವು ಪಕ್ಷ ವಿರೋಧಿ ಕೆಲಸ ಮಾಡುವುದಿಲ್ಲ. ಪಕ್ಷವನ್ನು ಕಟ್ಟಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ನಮ್ಮ ನಿರ್ಧಾರ ಪಕ್ಷದ ಉನ್ನತ ಮಟ್ಟದ ನಾಯಕರಿಗೆ ತಿಳಿಯಬೇಕೆನ್ನುವ ಉದ್ದೇಶದಿಂದ ಇಂದು ಚಳವಳಿಯ ರೀತಿಯ ಕಾರ್ಯವನ್ನು ಮಾಡುತ್ತಿದ್ದೇವೆ ಎಂದು ವೆಂಕಟ್ ವಳಲಂಬೆ ಹೇಳಿದರು.

ಮಂಗಳೂರು: ಸುಳ್ಯದಲ್ಲಿ ನಿರಂತರವಾಗಿ ಆರು ಬಾರಿ ಗೆಲುವು ಸಾಧಿಸಿದ ಶಾಸಕ ಎಸ್‌. ಅಂಗಾರ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ಸಿಗುವ ತನಕ ಸುಳ್ಯದಲ್ಲಿ ಬಿಜೆಪಿಯ ಎಲ್ಲಾ ಕೆಲಸ ಕಾರ್ಯಗಳನ್ನೂ ಸ್ಥಗಿತಗೊಳಿಸಲಾಗುವುದು ಎಂದು ಬಿಜೆಪಿ ಮಂಡಲ ಸಮಿತಿಯ ಅಧ್ಯಕ್ಷ ವೆಂಕಟ್ ವಳಲಂಬೆ ತಿಳಿಸಿದರು.

ಶಾಸಕ ಅಂಗಾರಗೆ ಸಚಿವ ಸ್ಥಾನ ಸಿಗಬೇಕೆಂದು ಒತ್ತಾಯಿಸಿದ ಸುಳ್ಯ ಬಿಜೆಪಿ

ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಮ್ಮ ಅಸಮಾಧಾನ ಹೊರ ಹಾಕಿದ ಅವರು, ಸುಳ್ಯ ವಿಧಾನಸಭಾ ಕ್ಷೇತ್ರದ 75 ಗ್ರಾಮದ 250 ಬೂತ್​ಗಳ ಕಾರ್ಯಕರ್ತರು ತಮ್ಮ ಈಗಿನ ಜವಾಬ್ದಾರಿಯಿಂದ ತಕ್ಷಣಕ್ಕೆ ಹೊರಬಂದು ಯಾವುದೇ ಪಕ್ಷದ ಕೆಲಸಗಳನ್ನು ಮಾಡುವುದಿಲ್ಲ. ಶಾಸಕ ಎಸ್.ಅಂಗಾರ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಸುಳ್ಯದಲ್ಲಿ ತೀವ್ರ ಆಕ್ರೋಶ ಭುಗಿಲೆದ್ದಿದೆ. ಪಕ್ಷದ ಪ್ರಮುಖರು ಶಾಸಕ ಅಂಗಾರ ಅವರಿಗೆ ಮುಂದಿನ ಬಾರಿ ಕ್ಯಾಬಿನೆಟ್​ನಲ್ಲಿ ಸಚಿವ ಸ್ಥಾನ ನೀಡುವ ಆಶ್ವಾಸನೆ ಕೊಟ್ಟರೆ ಮಾತ್ರ ನಾವು ಮತ್ತೆ ಪಕ್ಷದ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತೇವೆ ಎಂದು ತಮ್ಮ ನಿರ್ಧಾರವನ್ನು ಪ್ರಕಟಿಸಿದರು.

ಸುಳ್ಯ ವಿಧಾನಸಭೆಗೆ ಯಾವ ನ್ಯಾಯ ಸಿಗಬೇಕಿತ್ತೋ, ಅದು ಸಿಗದೆ ನಾವು ಆತಂಕದಲ್ಲಿದ್ದೇವೆ. 1992 ರಿಂದ ಬಿಜೆಪಿ ನಿರಂತರವಾಗಿ ಗೆಲ್ಲಲು ಈ ಭಾಗದ ಜನರ ಆಶೀರ್ವಾದವೇ ಕಾರಣ‌. ದ.ಕ.ಜಿಲ್ಲೆಯಲ್ಲಿ ಯಾವ ವಿಧಾನಸಭಾ ಕ್ಷೇತ್ರಗಳು ಸೋತರೂ ಸುಳ್ಯ ವಿಧಾನಸಭಾ ಕ್ಷೇತ್ರ ನಿರಂತರವಾಗಿ ಗೆಲುವನ್ನು ಸಾಧಿಸುತ್ತಾ ಬಂದಿದೆ. ಆದರೆ ಈ ಬಾರಿಯ ಯಡಿಯೂರಪ್ಪನವರ ಸರಕಾರದಲ್ಲಿ ನಮ್ಮ ತಾಲೂಕಿನ ಶಾಸಕರಿಗೆ ಸಚಿವ ಸ್ಥಾನ ಸಿಗಬಹುದಿತ್ತು ಎಂದು ಎಲ್ಲರ ಅಪೇಕ್ಷೆಯಾಗಿತ್ತು. ಆದರೆ ಅಂಗಾರರಿಗೆ ಯಾವುದೇ ಸಚಿವ ಸ್ಥಾನ ದೊರಕದಿರುವುದು ನಮಗೆಲ್ಲಾ ಅತೀವ ನೋವು ತಂದಿದೆ ಎಂದು ವೆಂಕಟ್ ವಳಲಂಬೆ ಹೇಳಿದರು.

ನಾವು ಪಕ್ಷ ವಿರೋಧಿ ಕೆಲಸ ಮಾಡುವುದಿಲ್ಲ. ಪಕ್ಷವನ್ನು ಕಟ್ಟಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ನಮ್ಮ ನಿರ್ಧಾರ ಪಕ್ಷದ ಉನ್ನತ ಮಟ್ಟದ ನಾಯಕರಿಗೆ ತಿಳಿಯಬೇಕೆನ್ನುವ ಉದ್ದೇಶದಿಂದ ಇಂದು ಚಳವಳಿಯ ರೀತಿಯ ಕಾರ್ಯವನ್ನು ಮಾಡುತ್ತಿದ್ದೇವೆ ಎಂದು ವೆಂಕಟ್ ವಳಲಂಬೆ ಹೇಳಿದರು.

Intro:ಮಂಗಳೂರು: ಸುಳ್ಯದಲ್ಲಿ ನಿರಂತರವಾಗಿ ಆರು ಬಾರಿ ಗೆಲುವು ಸಾಧಿಸಿಕೊಟ್ಟ ಶಾಸಕ ಅಂಗಾರ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ಸಿಗುವ ತನಕ ಸುಳ್ಯದಲ್ಲಿ ಬಿಜೆಪಿಯ ಎಲ್ಲಾ ಕೆಲಸ ಕಾರ್ಯಗಳನ್ನೂ ಸ್ಥಗಿತಗೊಳಿಸಲಾಗುವುದು. ಸುಳ್ಯ ವಿಧಾನ ಸಭಾಕ್ಷೇತ್ರದ 75 ಗ್ರಾಮದ 250 ಬೂತ್ ಗಳ ಕಾರ್ಯಕರ್ತರು ತಮ್ಮ ಈಗಿನ ಜವಾಬ್ದಾರಿಯಿಂದ ತಕ್ಷಣಕ್ಕೆ ಹೊರಬಂದು ಯಾವುದೇ ಪಕ್ಷದ ಕೆಲಸಗಳನ್ನು ಮಾಡುವುದಿಲ್ಲ ಎಂದು ಬಿಜೆಪಿ ಮಂಡಲ ಸಮಿತಿಯ ಅಧ್ಯಕ್ಷ ವೆಂಕಟ್ ವಳಲಂಬೆ ತಿಳಿಸಿದರು.

ಶಾಸಕ ಎಸ್.ಅಂಗಾರ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಸುಳ್ಯದಲ್ಲಿ ತೀವ್ರ ಆಕ್ರೋಶ ಭುಗಿಲೆದ್ದಿದೆ. ಈ ಬಗ್ಗೆ ಸುಳ್ಯ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ತಮ್ಮ ಅಸಮಾಧಾನ ಹೊರ ಹಾಕಿದ ಅವರು ಪಕ್ಷದ ಪ್ರಮುಖರು ಶಾಸಕ ಅಂಗಾರ ಅವರಿಗೆ ಮುಂದಿನ ಬಾರಿ ಕ್ಯಾಬಿನೆಟ್ ನಲ್ಲಿ ಸಚಿವ ಸ್ಥಾನ ನೀಡುವ ಆಶ್ವಾಸನೆ ಕೊಟ್ಟರೆ ಮಾತ್ರ ನಾವು ಮತ್ತೆ ಪಕ್ಷದ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತೇವೆ ಎಂದು ತಮ್ಮ ನಿರ್ಧಾರವನ್ನು ಪ್ರಕಟಿಸಿದರು.

ಸುಳ್ಯ ವಿಧಾನಸಭೆಗೆ ಯಾವ ನ್ಯಾಯ ಸಿಗಬೇಕಿತ್ತೋ, ಅದು ಸಿಗದೆ ನಾವು ಆತಂಕದಲ್ಲಿದ್ದೇವೆ. 1992 ರಿಂದ ಬಿಜೆಪಿ ನಿರಂತರವಾಗಿ ಗೆಲ್ಲಲು ಈ ಭಾಗದ ಜನರ ಆಶೀರ್ವಾದ ವೇ ಕಾರಣ‌. ದ.ಕ.ಜಿಲ್ಲೆಯಲ್ಲಿ ಯಾವ ವಿಧಾನಸಭಾ ಕ್ಷೇತ್ರಗಳು ಸೋತರೂ ಸುಳ್ಯ ವಿಧಾನಸಭಾ ಕ್ಷೇತ್ರ ನಿರಂತರವಾಗಿ ಗೆಲುವನ್ನು ಸಾಧಿಸುತ್ತಾ ಬಂದಿದೆ. ಆದರೆ ಈ ಬಾರಿಯ ಯಡಿಯೂರಪ್ಪ ನವರ ಸರಕಾರದಲ್ಲಿ ನಮ್ಮ ತಾಲೂಕಿನ ಶಾಸಕರಿಗೆ ಸಚಿವ ಸ್ಥಾನ ಸಿಗಬಹುದಿತ್ತು ಎಂದು ಎಲ್ಲರ ಅಪೇಕ್ಷೆಯಾಗಿತ್ತು. ಆದರೆ ಅಂಗಾರರಿಗೆ ಯಾವುದೇ ಸಚಿವಸ್ಥಾನ ದೊರಕದಿರುವುದು ನಮಗೆಲ್ಲಾ ಅತೀವ ನೋವು ತಂದಿದೆ ಎಂದು ವೆಂಕಟ್ ವಳಲಂಬೆ ಹೇಳಿದರು.

ಸಂಸದ ನಳಿನ್ ಕುಮಾರ್ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ದೊರಕಿರುವುದಕ್ಕೆ ಸ್ವಾಗತ‌. ಆದರೆ ಮೊದಲ ಆದ್ಯತೆಯಲ್ಲಿ ಸುಳ್ಯ ವನ್ನು ಪರಿಗಣಿಸಬೇಕಿತ್ತು. ಇದಕ್ಕೆ ರಾಜ್ಯಾಧ್ಯಕ್ಷರು ನ್ಯಾಯ ದೊರಕಿಸಿಕೊಡಬೇಕು. ಈ ಬಗ್ಗೆ ರಾಜ್ಯದ ಎಲ್ಲಾ ಹಿರಿಯ ನಾಯಕರಿಗೆ ತಿಳಿಸುವಂತಹ ಕೆಲಸ ಮಾಡುತ್ತೇವೆ. ಈ ಬಗ್ಗೆ ಸರಿಯಾಹಿ ಚರ್ಚೆ ಮಾಡಿ ಬಳಿಕ ಉನ್ನತ ಮಟ್ಟದ ನಾಯಕರ ಬಳಿ ನಿಯೋಗವೊಂದನ್ನು ತೆಗೆದುಕೊಂಡು ಹೋಗಬೇಕು ಎಂದು ಅವರು ಬೇಡಿಕೆ ಇಟ್ಟರು.

Body:ನಾವು ಪಕ್ಷ ವಿರೋಧವಾದ ಯಾವುದೇ ಕೆಲಸ ಮಾಡುವುದಿಲ್ಲ. ಪಕ್ಷವನ್ನು ಕಟ್ಟಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ನಮ್ಮ ನಿರ್ಧಾರ ಪಕ್ಷದ ಉನ್ನತ ಮಟ್ಟದ ನಾಯಕರಿಗೆ ತಿಳಿಯಬೇಕೆನ್ನುವ ಉದ್ದೇಶದಿಂದ ಇಂದು ಚಳವಳಿಯ ರೀತಿಯ ಕಾರ್ಯವನ್ನು ಮಾಡುತ್ತಿದ್ದೇವೆ ಎಂದು ವೆಂಕಟ್ ವಳಲಂಬೆ ಹೇಳಿದರು.

ಈ ಸಂದರ್ಭ ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋಧ್ ಶೆಟ್ಟಿ ಮೇನಾಲ, ಪ್ರಮುಖರಾದ ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ಹರೀಶ್ ಕಂಜಿಪಿಲಿ, ದಿನೇಶ್ ಮೆದು, ರಾಕೇಶ್ ರೈ ಕೆಡೆಂಜಿ, ಭಾಗೀರಥಿ ಮುರುಳ್ಯ, ಮುಳಿಯ ಕೇಶವ ಭಟ್, ಚನಿಯ ಕಲ್ತಡ್ಕ, ರಾಧಾಕೃಷ್ಣ ಬೊಳ್ಳೂರು, ಮಹೇಶ್ ರೈ ಮೇನಾಲ, ಸುರೇಶ್ ಕಣೆಮರಡ್ಕ, ಚಂದ್ರಶೇಖರ ಪನ್ನೆ, ಮಾಧವ ಚಾಂತಾಳ ಉಪಸ್ಥಿತರಿದ್ದರು.

Reporter_Vishwanath PanjimogaruConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.