ETV Bharat / state

ಕಿಂಡಿ ಅಣೆಕಟ್ಟಿನ ತಡೆಗೋಡೆ ಕುಸಿತ.. ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಬಾಲಕ

author img

By

Published : May 8, 2021, 7:52 PM IST

Updated : May 8, 2021, 9:13 PM IST

ಕಿಂಡಿ ಅಣೆಕಟ್ಟಿನ ತಡೆಗೋಡೆ ಕುಸಿದಿದ್ದು, ಸ್ವಲ್ಪದರಲ್ಲೇ ಬಾಲಕನೊಬ್ಬ ಪ್ರಾಣಾಪಾಯದಿಂದ ಪಾರಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ.

boy-escaped-from-brutal-injury-when-tiny-dam-barrier-collapsed
ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಬಾಲಕ

ಕಡಬ (ದಕ್ಷಿಣ ಕನ್ನಡ): ಬಾಲಕನೊಬ್ಬನು ಕಿಂಡಿ ಅಣೆಕಟ್ಟಿನಯ ತಡೆಗೋಡೆಯ ಮುಟ್ಟಿದ್ದು, ಆ ತಡೆಗೋಡೆ ಬಾಲಕನ ಮೇಲೆನೇ ಕುಸಿದು ಬಿದ್ದ ಘಟನೆ ಇಲ್ಲಿನ ಕೋಡಿಂಬಾಳ ಗ್ರಾಮದ ಕುತ್ಯಾಡಿ ಎಂಬಲ್ಲಿ ನಡೆದಿದೆ.

ಕುತ್ಯಾಡಿ ನಿವಾಸಿ ಮೋನಪ್ಪ ಗೌಡ ಎಂಬವರ ಪುತ್ರ ಧನ್ವಿತ್ (10) ತಡೆಗೋಡೆಯನ್ನು ಮುಟ್ಟಿದ್ದನು. ಈ ವೇಳೆ ತಡೆಗೋಡೆ ಧನ್ವಿತ್​ ಮೇಲೆ ಬಿದ್ದಿದ್ದು, ತಡೆಗೋಡೆ ಜೊತೆಗೆ ಧನ್ವಿತ್​ ತೋಡಿಗೆ ಬಿದ್ದಿದ್ದಾನೆ. ಈ ಸಂದರ್ಭದಲ್ಲಿ ಸಮೀಪದಲ್ಲಿದ್ದ ಸಹೋದರ ದಕ್ಷಿತ್ ಸಹಾಯಕ್ಕಾಗಿ ಮನೆಯವರನ್ನು ಕೂಗಿ ಕರೆದಿದ್ದಾನೆ. ಮನೆಯಲ್ಲಿದ್ದ ಧನ್ವಿತ್ ತಾಯಿ ವಾರಿಜ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ್ದಾರೆ. ಆದ್ರೆ ತೋಡಿಗೆ ಇಳಿಯಲಾಗದೆ ಇತರನ್ನು ಸಹಾಯಕ್ಕಾಗಿ ಕರೆದಿದ್ದಾರೆ. ಈ ವೇಳೆ ನೆರೆಮನೆಯ ವ್ಯಕ್ತಿಯೊಬ್ಬರು ಆಗಮಿಸಿ ತಡೆಗೋಡೆಯ ಅಡಿಯಲ್ಲಿ ಸಿಲುಕಿಕೊಂಡಿದ್ದ ಬಾಲಕನ್ನು ಮೇಲಕ್ಕೆತ್ತಿದ್ದಾರೆ.

ಕಿಂಡಿ ಅಣೆಕಟ್ಟಿನ ತಡೆಗೋಡೆ ಕುಸಿತ.

ಘಟನೆಯಲ್ಲಿ ಧನ್ವಿತ್​​​ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಗೊಂಡ ಬಾಲಕನನ್ನು ತಕ್ಷಣ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಕಳಪೆ ಕಾಮಗಾರಿಯೇ ತಡೆಗೋಡೆ ಕುಸಿಯಲು ಕಾರಣ?

ಕಿಂಡಿ ಅಣೆಕಟ್ಟಿನ ತಡೆಗೋಡೆಯು ಸಿಮೆಂಟ್ ಇಟ್ಟಿಗೆಯಲ್ಲಿ ನಿರ್ಮಿಸಿದ್ದಾರೆ. ಸುಮಾರು 3 ಲಕ್ಷ ಅನುದಾನದಲ್ಲಿ ಈ ತಡೆಗೋಡೆ ನಿರ್ಮಿಸಿದ್ದು, ಕಳಪೆ ಕಾಮಗಾರಿ ನಡೆಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

ಕಡಬ (ದಕ್ಷಿಣ ಕನ್ನಡ): ಬಾಲಕನೊಬ್ಬನು ಕಿಂಡಿ ಅಣೆಕಟ್ಟಿನಯ ತಡೆಗೋಡೆಯ ಮುಟ್ಟಿದ್ದು, ಆ ತಡೆಗೋಡೆ ಬಾಲಕನ ಮೇಲೆನೇ ಕುಸಿದು ಬಿದ್ದ ಘಟನೆ ಇಲ್ಲಿನ ಕೋಡಿಂಬಾಳ ಗ್ರಾಮದ ಕುತ್ಯಾಡಿ ಎಂಬಲ್ಲಿ ನಡೆದಿದೆ.

ಕುತ್ಯಾಡಿ ನಿವಾಸಿ ಮೋನಪ್ಪ ಗೌಡ ಎಂಬವರ ಪುತ್ರ ಧನ್ವಿತ್ (10) ತಡೆಗೋಡೆಯನ್ನು ಮುಟ್ಟಿದ್ದನು. ಈ ವೇಳೆ ತಡೆಗೋಡೆ ಧನ್ವಿತ್​ ಮೇಲೆ ಬಿದ್ದಿದ್ದು, ತಡೆಗೋಡೆ ಜೊತೆಗೆ ಧನ್ವಿತ್​ ತೋಡಿಗೆ ಬಿದ್ದಿದ್ದಾನೆ. ಈ ಸಂದರ್ಭದಲ್ಲಿ ಸಮೀಪದಲ್ಲಿದ್ದ ಸಹೋದರ ದಕ್ಷಿತ್ ಸಹಾಯಕ್ಕಾಗಿ ಮನೆಯವರನ್ನು ಕೂಗಿ ಕರೆದಿದ್ದಾನೆ. ಮನೆಯಲ್ಲಿದ್ದ ಧನ್ವಿತ್ ತಾಯಿ ವಾರಿಜ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ್ದಾರೆ. ಆದ್ರೆ ತೋಡಿಗೆ ಇಳಿಯಲಾಗದೆ ಇತರನ್ನು ಸಹಾಯಕ್ಕಾಗಿ ಕರೆದಿದ್ದಾರೆ. ಈ ವೇಳೆ ನೆರೆಮನೆಯ ವ್ಯಕ್ತಿಯೊಬ್ಬರು ಆಗಮಿಸಿ ತಡೆಗೋಡೆಯ ಅಡಿಯಲ್ಲಿ ಸಿಲುಕಿಕೊಂಡಿದ್ದ ಬಾಲಕನ್ನು ಮೇಲಕ್ಕೆತ್ತಿದ್ದಾರೆ.

ಕಿಂಡಿ ಅಣೆಕಟ್ಟಿನ ತಡೆಗೋಡೆ ಕುಸಿತ.

ಘಟನೆಯಲ್ಲಿ ಧನ್ವಿತ್​​​ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಗೊಂಡ ಬಾಲಕನನ್ನು ತಕ್ಷಣ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಕಳಪೆ ಕಾಮಗಾರಿಯೇ ತಡೆಗೋಡೆ ಕುಸಿಯಲು ಕಾರಣ?

ಕಿಂಡಿ ಅಣೆಕಟ್ಟಿನ ತಡೆಗೋಡೆಯು ಸಿಮೆಂಟ್ ಇಟ್ಟಿಗೆಯಲ್ಲಿ ನಿರ್ಮಿಸಿದ್ದಾರೆ. ಸುಮಾರು 3 ಲಕ್ಷ ಅನುದಾನದಲ್ಲಿ ಈ ತಡೆಗೋಡೆ ನಿರ್ಮಿಸಿದ್ದು, ಕಳಪೆ ಕಾಮಗಾರಿ ನಡೆಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

Last Updated : May 8, 2021, 9:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.