ETV Bharat / state

ಮಂಗಳೂರು: ಬೆಂಕಿ ತಗುಲಿ ಸುಟ್ಟು ಕರಕಲಾದ ಖಾಸಗಿ ಬಸ್​ - ಸುಟ್ಟು ಕರಕಲಾದ ಖಾಸಗಿ ಬಸ್​

ಮಂಗಳೂರಿನ ಮಂಗಳಾದೇವಿ ಬಳಿ ಖಾಸಗಿ ಬಸ್ಸೊಂದು ಬೆಂಕಿಗಾಹುತಿಯಾಗಿದೆ.

Bus catches fire in Mangaluru
ಬೆಂಕಿ ತಗುಲಿ ಸುಟ್ಟು ಕರಕಲಾದ ಖಾಸಗಿ ಬಸ್​
author img

By

Published : May 18, 2021, 12:20 PM IST

ಮಂಗಳೂರು: ನಿಂತಿದ್ದ ಬಸ್​ಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಘಟನೆ ನಗರದ ಮಂಗಳಾದೇವಿ ದೇವಸ್ಥಾನದ ಬಳಿ ನಡೆದಿದೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಎಲ್ಲೆಡೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಹಾಗಾಗಿ, ಕಳೆದ ಕೆಲವು ದಿನಗಳಿಂದ ಬಸ್​ ಅನ್ನು ದೇವಸ್ಥಾನದ ಬಳಿ ನಿಲ್ಲಿಸಲಾಗಿತ್ತು. ಆದರೆ, ಮುಂಜಾನೆ 3 ಗಂಟೆಯ ಹೊತ್ತಿಗೆ ಬಸ್​ಗೆ ಏಕಾಏಕಿ ಬೆಂಕಿ ತಗುಲಿ ಹೊತ್ತಿ ಉರಿದಿದೆ.

ಇದನ್ನೂ ಓದಿ: ಮಂಗಳೂರು ಮುಕ್ಕ ಶ್ರೀನಿವಾಸ ಆಸ್ಪತ್ರೆ ಸಿಬ್ಬಂದಿ ಎಡವಟ್ಟು: ಶವ ಅದಲು ಬದಲು

ಈ ಘಟನೆ ನಡೆದ ತಕ್ಷಣ ಸ್ಥಳಕ್ಕೆ ಬಂದ ಪಾಂಡೇಶ್ವರ ಆಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಅಷ್ಟೊತ್ತಿಗಾಗಲೇ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಅವಘಡ ಸಂಭವಿಸಿರಬಹುದು ಎಂದು ಹೇಳಲಾಗ್ತಿದೆ.

ಮಂಗಳೂರು: ನಿಂತಿದ್ದ ಬಸ್​ಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಘಟನೆ ನಗರದ ಮಂಗಳಾದೇವಿ ದೇವಸ್ಥಾನದ ಬಳಿ ನಡೆದಿದೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಎಲ್ಲೆಡೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಹಾಗಾಗಿ, ಕಳೆದ ಕೆಲವು ದಿನಗಳಿಂದ ಬಸ್​ ಅನ್ನು ದೇವಸ್ಥಾನದ ಬಳಿ ನಿಲ್ಲಿಸಲಾಗಿತ್ತು. ಆದರೆ, ಮುಂಜಾನೆ 3 ಗಂಟೆಯ ಹೊತ್ತಿಗೆ ಬಸ್​ಗೆ ಏಕಾಏಕಿ ಬೆಂಕಿ ತಗುಲಿ ಹೊತ್ತಿ ಉರಿದಿದೆ.

ಇದನ್ನೂ ಓದಿ: ಮಂಗಳೂರು ಮುಕ್ಕ ಶ್ರೀನಿವಾಸ ಆಸ್ಪತ್ರೆ ಸಿಬ್ಬಂದಿ ಎಡವಟ್ಟು: ಶವ ಅದಲು ಬದಲು

ಈ ಘಟನೆ ನಡೆದ ತಕ್ಷಣ ಸ್ಥಳಕ್ಕೆ ಬಂದ ಪಾಂಡೇಶ್ವರ ಆಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಅಷ್ಟೊತ್ತಿಗಾಗಲೇ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಅವಘಡ ಸಂಭವಿಸಿರಬಹುದು ಎಂದು ಹೇಳಲಾಗ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.