ETV Bharat / state

ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಕಾರು ಪಲ್ಟಿ..  ಮಂಗಳೂರಿನಲ್ಲಿ 6 ಜಾನುವಾರುಗಳ ದುರ್ಮರಣ

author img

By

Published : Jun 7, 2019, 12:38 PM IST

ಗೋವುಗಳನ್ನು ಹಿಂಸಾತ್ಮಕವಾಗಿ ಕೂಡಿ ಹಾಕಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿಯಾಗಿ 6 ಜಾನುವಾರುಗಳು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಎಂಬಲ್ಲಿ ನಡೆದಿದೆ.

6 ಜಾನುವಾರುಗಳು ಸಾವು

ಮಂಗಳೂರು: ಗೋವುಗಳನ್ನು ಹಿಂಸಾತ್ಮಕವಾಗಿ ಕೂಡಿ ಹಾಕಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಕಾರು ಪಲ್ಟಿಯಾಗಿ 6 ಜಾನುವಾರುಗಳು ಮೃತಪಟ್ಟಿರುವ ಘಟನೆ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಎಂಬಲ್ಲಿ ನಡೆದಿದೆ.

ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿ

ಇಂದು ಚಾರ್ಮಾಡಿಯಿಂದ ಉಜಿರೆಯ ಕಡೆ ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕೂಡಿ ಹಾಕಿ ಐಷಾರಾಮಿ ಕಾರೊಂದರಲ್ಲಿ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಕಮರಿಗೆ ಉರುಳಿ ಬಿದ್ದಿದೆ. ಪರಿಣಾಮ ಕಾರಿನೊಳಗಿದ್ದ 6 ದನಗಳು ಮೃತಪಟ್ಟಿವೆ. ಈ ಘಟನೆ ಬಳಿಕ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಈ ಕೃತ್ಯಕ್ಕೆ ಬೆಂಗಳೂರು ನೋಂದಣಿಯ ಕಾರನ್ನು ಬಳಸಲಾಗಿದೆ. ಇದನ್ನ ಕಳ್ಳತನ ಮಾಡಿಯೋ ಅಥವಾ ನಕಲಿ ನೋಂದಣಿ ಪ್ಲೇಟ್ ಹಾಕಿ ಗೋ ಸಾಗಾಟ ಮಾಡಲಾಗ್ತಾಯಿರೋ ಬಗ್ಗೆ ಶಂಕೆ ಮೂಡಿದೆ.

ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳಿಗೆ ಪ್ರಜ್ಞೆ ತಪ್ಪಿಸುವ ಬ್ರೇಡ್​ನಲ್ಲಿ ಮತ್ತು ಬರುವ ಪದಾರ್ಥಗಳನ್ನು ತಿನ್ನಿಸಿರುವ ಶಂಕೆಯಿಗೆ. ಇದಕ್ಕೆ ಪುಷ್ಠಿ ನೀಡುವಂತೆ ಕಾರಿನಲ್ಲಿ ಬ್ರೇಡ್ ಪ್ಯಾಕೇಟ್​ಗಳು ಪತ್ತೆಯಾಗಿದೆ. ಚಾರ್ಮಾಡಿ ಚೆಕ್ ಪೋಸ್ಟ್​​ನಲ್ಲಿ ವಾಹನಗಳನ್ನು ತಪಾಸಣೆ ಮಾಡಬೇಕಾಗಿತ್ತು. ಆದರೆ, ತಪಾಸಣೆ ನಡೆಸದೆ ಇರೋದು ಇಲ್ಲಿನ ಭದ್ರತಾ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ.

ಮಂಗಳೂರು: ಗೋವುಗಳನ್ನು ಹಿಂಸಾತ್ಮಕವಾಗಿ ಕೂಡಿ ಹಾಕಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಕಾರು ಪಲ್ಟಿಯಾಗಿ 6 ಜಾನುವಾರುಗಳು ಮೃತಪಟ್ಟಿರುವ ಘಟನೆ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಎಂಬಲ್ಲಿ ನಡೆದಿದೆ.

ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿ

ಇಂದು ಚಾರ್ಮಾಡಿಯಿಂದ ಉಜಿರೆಯ ಕಡೆ ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕೂಡಿ ಹಾಕಿ ಐಷಾರಾಮಿ ಕಾರೊಂದರಲ್ಲಿ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಕಮರಿಗೆ ಉರುಳಿ ಬಿದ್ದಿದೆ. ಪರಿಣಾಮ ಕಾರಿನೊಳಗಿದ್ದ 6 ದನಗಳು ಮೃತಪಟ್ಟಿವೆ. ಈ ಘಟನೆ ಬಳಿಕ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಈ ಕೃತ್ಯಕ್ಕೆ ಬೆಂಗಳೂರು ನೋಂದಣಿಯ ಕಾರನ್ನು ಬಳಸಲಾಗಿದೆ. ಇದನ್ನ ಕಳ್ಳತನ ಮಾಡಿಯೋ ಅಥವಾ ನಕಲಿ ನೋಂದಣಿ ಪ್ಲೇಟ್ ಹಾಕಿ ಗೋ ಸಾಗಾಟ ಮಾಡಲಾಗ್ತಾಯಿರೋ ಬಗ್ಗೆ ಶಂಕೆ ಮೂಡಿದೆ.

ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳಿಗೆ ಪ್ರಜ್ಞೆ ತಪ್ಪಿಸುವ ಬ್ರೇಡ್​ನಲ್ಲಿ ಮತ್ತು ಬರುವ ಪದಾರ್ಥಗಳನ್ನು ತಿನ್ನಿಸಿರುವ ಶಂಕೆಯಿಗೆ. ಇದಕ್ಕೆ ಪುಷ್ಠಿ ನೀಡುವಂತೆ ಕಾರಿನಲ್ಲಿ ಬ್ರೇಡ್ ಪ್ಯಾಕೇಟ್​ಗಳು ಪತ್ತೆಯಾಗಿದೆ. ಚಾರ್ಮಾಡಿ ಚೆಕ್ ಪೋಸ್ಟ್​​ನಲ್ಲಿ ವಾಹನಗಳನ್ನು ತಪಾಸಣೆ ಮಾಡಬೇಕಾಗಿತ್ತು. ಆದರೆ, ತಪಾಸಣೆ ನಡೆಸದೆ ಇರೋದು ಇಲ್ಲಿನ ಭದ್ರತಾ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ.

Intro:ಮಂಗಳೂರು: ಗೋವುಗಳನ್ನು ಹಿಂಸಾತ್ಮಕವಾಗಿ ಕೂಡಿಹಾಕಿ ಅಕ್ರಮವಾಗಿ ಸಾಗಾಟ ಮಾಡಲಾಗಿರುವ ಕಾರೊಂದು ಕಮರಿಗೆ ಪಲ್ಟಿಯಾದ ಪರಿಣಾಮ 6 ಜಾನುವಾರುಗಳು ಮೃತಪಟ್ಟಿರುವ ಘಟನೆ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಕಡೆಯಿಂದ ಉಜಿರೆಯ ಮುಂಡಾಜೆ ಎಂಬಲ್ಲಿ ಇಂದು ಮುಂಜಾನೆ 5.30ರ ಸುಮಾರಿಗೆ ನಡೆದಿದೆ.

ಅಕ್ರಮವಾಗಿ ಜಾನುವಾರುಗಳನ್ನು ಐಷಾರಾಮಿ ಕಾರೊಂದರಲ್ಲಿ ಹಿಂಸಾತ್ಮಕವಾಗಿ ಕೂಡಿಹಾಕಿ ಸಾಗಾಟ ಮಾಡುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಕಮರಿಗೆ ಉರುಳಿ ಬಿದ್ದಿರಿರುವ ಪರಿಣಾಮ ಕಾರಿನೊಳಗಿದ್ದ 6ದನಗಳು ಸತ್ತು ಹೋಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ.

ಬೆಂಗಳೂರು ನೋಂದಣಿಯ ಕಾರನ್ನು ಅಕ್ರಮ ಗೋ ಸಾಗಾಟಕ್ಕೆ ಬಳಸಲಾಗಿದೆ. ಕಾರು ಕಳ್ಳತನ ಮಾಡಿ ಅಥವಾ ನಕಲಿ ನೊಂದಣಿ ಪ್ಲೇಟ್ ಹಾಕಿರು ಗೋಸಾಗಾಟ ಮಾಡಿರುವ ಬಗ್ಗೆಯೂ ಸಾರ್ವಜನಿಕರಲ್ಲಿ ಶಂಕೆ ಮೂಡಿದೆ.

ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳಿಗೆ ಪ್ರಜ್ಞೆ ತಪ್ಪಿಸುವ ಸಲುವಾಗಿ ಬ್ರೇಡ್ ನಲ್ಲಿ ಅಮಲು ಪದಾರ್ಥಗಳನ್ನು ತಿನ್ನಿಸಿರುವ ಶಂಕೆ ಮೂಡಿದ್ದು ಕಾರಿನಲ್ಲಿ ಬ್ರೇಡ್ ಪ್ಯಾಕೇಟ್ ಗಳು ಪತ್ತೆಯಾಗಿದೆ.

Body:ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ವಾಹನಗಳನ್ನು ತಪಾಸಣೆ ಮಾಡಬೇಕಾಗಿತ್ತು, ಆದರೆ ತಪಾಸಣೆ ನಡೆಸದೇ ಇರೋದು ಇಲ್ಲಿನ ಭದ್ರತಾ ವೈಫಲ್ಯವನ್ನು ಎತ್ತಿ ತೋರಿಸುವಂತಿದೆ. ಇನ್ನಾದರೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಇತ್ತ ಗಮನ ಹರಿಸಬೇಕಾಗಿದೆ ಎಂದು ಸ್ಥಳೀಯರು ಆಗ್ರಹ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಆರೋಪಿಗಳ ಪತ್ತೆ ಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.

Reporter_Vishwanath PanjimogaruConclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.