ಸುಬ್ರಹ್ಮಣ್ಯ : ಶ್ರೀ ಸಂಪುಟ ನರಸಿಂಹಸ್ವಾಮಿ ವತಿಯಿಂದ ಅಗ್ರಹಾರ ಸೋಮನಾಥೇಶ್ವರ ದೇಗುಲದಲ್ಲಿ ಮಹಾಶಿವರಾತ್ರಿಯನ್ನು ವೈಭವದಿಂದ ಇಲ್ಲಿನ ಭಕ್ತರು ಆಚರಿಸಿ ಶಿವನ ಕೃಪೆಗೆ ಪಾತ್ರರಾದರು.
ಯಾಜ್ಞೆಶ್ ಆಚಾರ್ಯ ಹಾಗೂ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮಗಳು ನಡೆಯಿತು. ಸಂಪುಟ ನರಸಿಂಹಸ್ವಾಮಿ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ್ ಅವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಶಿವರಾತ್ರಿಯ ಶುಭ ಸಂದರ್ಭದಲ್ಲಿ ವಿಶೇಷ ಅಭಿಷೇಕ, ಪೂಜೆಗಳು ನಡೆದವು. ಶ್ರೀ ದೇವರಿಗೆ ವಿಶೇಷವಾಗಿ ಸಂಜೀವಿನಿ ಮೃತುಂಜಯ ಹೋಮ ಹಾಗೂ ಮಹಾಮಂಗಳಾರತಿಗಳು ನಡೆಸಲಾಯಿತು.
ದೇಗಲಕ್ಕೆ ಆಗಮಿಸಿದ ಎಲ್ಲಾ ಭಕ್ತರಿಗೆ ಶ್ರೀ ಸಂಪುಟ ನರಸಿಂಹಸ್ವಾಮಿ ವತಿಯಿಂದ ಭೋಜನ ವ್ಯವಸ್ತೆ ಮಾಡಲಾಯಿತು.