ETV Bharat / state

ಸಿಎಂ ಬೊಮ್ಮಾಯಿ ಕೇರಳ ಗಡಿ ಭೇಟಿ ರದ್ದಿಗೆ ಕಾರಣವಾಯ್ತಾ ತಲಪಾಡಿ ಗಡಿಯಲ್ಲಿನ ಕೇರಳಿಗರ ಪ್ರತಿಭಟನೆ.!? - Keralian protests at Talapady border

ಕೆಲವು ದಿನಗಳಿಂದ ಕೇರಳದಿಂದ ದಕ್ಷಿಣ ಕನ್ನಡ ‌ಜಿಲ್ಲೆಗೆ ಬರುವವರಿಗೆ ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿದ್ದರೂ ಆರ್​ಟಿಪಿಸಿಆರ್ ರಿಪೋರ್ಟ್ ಕಡ್ಡಾಯಗೊಳಿಸಲಾಗಿತ್ತು. ಈ ಕಾರಣದಿಂದ ಕೇರಳಿಗರು ತಲಪಾಡಿ ಗಡಿಯಲ್ಲಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಇದೇ ಕಾರಣಕ್ಕೆ ರಾತ್ರಿ ಕೇರಳ ಗಡಿ ಭೇಟಿ ರದ್ದು ಮಾಡಲು ನಿರ್ಧರಿಸಿದ ಸಿಎಂ, ಉಡುಪಿಯಲ್ಲಿ‌ ವಾಸ್ತವ್ಯ ಹೂಡಿ ಇಂದು ಬೆಳಗ್ಗೆ ಮಂಗಳೂರಿಗೆ ಬಂದು ಬೆಂಗಳೂರಿಗೆ ತೆರಳಿದ್ದಾರೆ ಎನ್ನಲಾಗಿದೆ.

CM Bommai cancels visit to Kerala border latest news
ಸಿಎಂ ಬೊಮ್ಮಾಯಿ ಕೇರಳ ಗಡಿ ಭೇಟಿ ರದ್ದಿಗೆ ಕಾರಣವಾಯ್ತಾ ತಲಪಾಡಿ ಗಡಿಯಲ್ಲಿನ ಕೇರಳಿಗರ ಪ್ರತಿಭಟನೆ.!?
author img

By

Published : Aug 13, 2021, 3:42 PM IST

ಮಂಗಳೂರು: ಎರಡು ದಿನಗಳ ಕರಾವಳಿ ಜಿಲ್ಲೆಯ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇರಳ ಗಡಿಗೆ ಭೇಟಿ ನೀಡುವ ಕಾರ್ಯಕ್ರಮ ರದ್ದುಗೊಳಿಸಲು ಕೇರಳಿಗರ ಪ್ರತಿಭಟನೆ ಕಾರಣ ಎಂದು ಹೇಳಲಾಗುತ್ತಿದೆ.

ನಿನ್ನೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಬಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ ಕೇರಳ ಗಡಿ ಭಾಗವಾದ ತಲಪಾಡಿ ಚೆಕ್​ಪೋಸ್ಟ್​ಗೆ ಭೇಟಿ ನೀಡುವ ಕಾರ್ಯಕ್ರಮವಿತ್ತು.

ಕಳೆದ ಕೆಲವು ದಿನಗಳಿಂದ ಕೇರಳದಿಂದ ದಕ್ಷಿಣ ಕನ್ನಡ ‌ಜಿಲ್ಲೆಗೆ ಬರುವವರಿಗೆ ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿದ್ದರೂ ಆರ್​ಟಿಪಿಸಿಆರ್ ರಿಪೋರ್ಟ್ ಕಡ್ಡಾಯಗೊಳಿಸಲಾಗಿತ್ತು. ಈ ಕಾರಣದಿಂದ ಕೇರಳಿಗರು ತಲಪಾಡಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತೀಚಿಗೆ ಎಡಿಜಿಪಿ ಪ್ರತಾಪ್ ರೆಡ್ಡಿ ಅವರ ಪರಿಶೀಲನೆ ವೇಳೆಯಲ್ಲಿಯೂ ತಲಪಾಡಿ ಗಡಿಯ ಕೇರಳ ರಾಜ್ಯಕ್ಕೆ ಸೇರಿದ ಜಾಗದಲ್ಲಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು.

ಮುಖ್ಯಮಂತ್ರಿ ಬರುವ ವೇಳೆಯೂ ಪ್ರತಿಭಟನೆ ನಡೆಯುವ ಸೂಚನೆ ಇದ್ದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಕೇರಳ ಗಡಿ ಭೇಟಿಯನ್ನು ಸಿಎಂ ರದ್ದುಗೊಳಿಸಿದ್ದಾರೆ ಎನ್ನಲಾಗಿದೆ. ನಿಗದಿತ ಪ್ರವಾಸದ ಪ್ರಕಾರ ನಿನ್ನೆ ರಾತ್ರಿ ಉಡುಪಿಯಿಂದ ಮಂಗಳೂರಿಗೆ ಬಂದು ವಾಸ್ತವ್ಯ ಮಾಡಿ ಇಂದು ಬೆಳಗ್ಗೆ ಕೇರಳ ಗಡಿ ಭೇಟಿ ನೀಡುವ ಕಾರ್ಯಕ್ರಮವಿತ್ತು. ರಾತ್ರಿ ಕೇರಳ ಗಡಿ ಭೇಟಿ ರದ್ದು ಮಾಡಲು ನಿರ್ಧರಿಸಿದ ಸಿಎಂ ಉಡುಪಿಯಲ್ಲಿ‌ ವಾಸ್ತವ್ಯ ಹೂಡಿ ಇಂದು ಬೆಳಿಗ್ಗೆ ಮಂಗಳೂರಿಗೆ ಬಂದು ಬೆಂಗಳೂರಿಗೆ ತೆರಳಿದ್ದಾರೆ.

ಸಿಎಂ ಭೇಟಿ ರದ್ದತಿಯ ನಡುವೆಯು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಯುಡಿವೈಎಫ್ ಸಮಿತಿಯ ‌ನೇತೃತ್ವದಲ್ಲಿ ಸಾಂಕೇತಿಕವಾಗಿ ಕಪ್ಪು ಮಾಸ್ಕ್ ಧರಿಸಿ ಪ್ರತಿಭಟನೆ ನಡೆಸಲಾಗಿದೆ.

ಓದಿ: ಸಿ ಟಿ ರವಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹೆಚ್​ಡಿ ಕುಮಾರಸ್ವಾಮಿ

ಮಂಗಳೂರು: ಎರಡು ದಿನಗಳ ಕರಾವಳಿ ಜಿಲ್ಲೆಯ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇರಳ ಗಡಿಗೆ ಭೇಟಿ ನೀಡುವ ಕಾರ್ಯಕ್ರಮ ರದ್ದುಗೊಳಿಸಲು ಕೇರಳಿಗರ ಪ್ರತಿಭಟನೆ ಕಾರಣ ಎಂದು ಹೇಳಲಾಗುತ್ತಿದೆ.

ನಿನ್ನೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಬಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ ಕೇರಳ ಗಡಿ ಭಾಗವಾದ ತಲಪಾಡಿ ಚೆಕ್​ಪೋಸ್ಟ್​ಗೆ ಭೇಟಿ ನೀಡುವ ಕಾರ್ಯಕ್ರಮವಿತ್ತು.

ಕಳೆದ ಕೆಲವು ದಿನಗಳಿಂದ ಕೇರಳದಿಂದ ದಕ್ಷಿಣ ಕನ್ನಡ ‌ಜಿಲ್ಲೆಗೆ ಬರುವವರಿಗೆ ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿದ್ದರೂ ಆರ್​ಟಿಪಿಸಿಆರ್ ರಿಪೋರ್ಟ್ ಕಡ್ಡಾಯಗೊಳಿಸಲಾಗಿತ್ತು. ಈ ಕಾರಣದಿಂದ ಕೇರಳಿಗರು ತಲಪಾಡಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತೀಚಿಗೆ ಎಡಿಜಿಪಿ ಪ್ರತಾಪ್ ರೆಡ್ಡಿ ಅವರ ಪರಿಶೀಲನೆ ವೇಳೆಯಲ್ಲಿಯೂ ತಲಪಾಡಿ ಗಡಿಯ ಕೇರಳ ರಾಜ್ಯಕ್ಕೆ ಸೇರಿದ ಜಾಗದಲ್ಲಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು.

ಮುಖ್ಯಮಂತ್ರಿ ಬರುವ ವೇಳೆಯೂ ಪ್ರತಿಭಟನೆ ನಡೆಯುವ ಸೂಚನೆ ಇದ್ದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಕೇರಳ ಗಡಿ ಭೇಟಿಯನ್ನು ಸಿಎಂ ರದ್ದುಗೊಳಿಸಿದ್ದಾರೆ ಎನ್ನಲಾಗಿದೆ. ನಿಗದಿತ ಪ್ರವಾಸದ ಪ್ರಕಾರ ನಿನ್ನೆ ರಾತ್ರಿ ಉಡುಪಿಯಿಂದ ಮಂಗಳೂರಿಗೆ ಬಂದು ವಾಸ್ತವ್ಯ ಮಾಡಿ ಇಂದು ಬೆಳಗ್ಗೆ ಕೇರಳ ಗಡಿ ಭೇಟಿ ನೀಡುವ ಕಾರ್ಯಕ್ರಮವಿತ್ತು. ರಾತ್ರಿ ಕೇರಳ ಗಡಿ ಭೇಟಿ ರದ್ದು ಮಾಡಲು ನಿರ್ಧರಿಸಿದ ಸಿಎಂ ಉಡುಪಿಯಲ್ಲಿ‌ ವಾಸ್ತವ್ಯ ಹೂಡಿ ಇಂದು ಬೆಳಿಗ್ಗೆ ಮಂಗಳೂರಿಗೆ ಬಂದು ಬೆಂಗಳೂರಿಗೆ ತೆರಳಿದ್ದಾರೆ.

ಸಿಎಂ ಭೇಟಿ ರದ್ದತಿಯ ನಡುವೆಯು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಯುಡಿವೈಎಫ್ ಸಮಿತಿಯ ‌ನೇತೃತ್ವದಲ್ಲಿ ಸಾಂಕೇತಿಕವಾಗಿ ಕಪ್ಪು ಮಾಸ್ಕ್ ಧರಿಸಿ ಪ್ರತಿಭಟನೆ ನಡೆಸಲಾಗಿದೆ.

ಓದಿ: ಸಿ ಟಿ ರವಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹೆಚ್​ಡಿ ಕುಮಾರಸ್ವಾಮಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.