ETV Bharat / state

ಸಿದ್ದರಾಮಯ್ಯ ಅವರಷ್ಟು ಹಗುರವಾಗಿ ನಾನು ಮಾತನಾಡುವುದಿಲ್ಲ: ಬಿಎಸ್​ವೈ

ಉಪಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲಿದ್ದಾರೆ ಅಂತ ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು ಇವರ ಹೇಳಿಕೆಗೆ ಮುಖ್ಯಮಂತ್ರಿ ಬಿಎಸ್​ವೈ ಮಂಗಳೂರಿನಲ್ಲಿ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

author img

By

Published : Nov 4, 2020, 9:12 PM IST

CM BS Yeddyurappa Reaction About Ex CM Siddaramaiah Statement
ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ

ಮಂಗಳೂರು: ಶಿರಾ ಹಾಗೂ ಆರ್.ಆರ್.ನಗರದ ಉಪಚುನಾವಣೆ ಸಿದ್ದರಾಮಯ್ಯ ನೇತೃತ್ವದಲ್ಲಿಯೇ ನಡೆಯಿತು‌. ಕಾಂಗ್ರೆಸ್‌ ನೂರಕ್ಕೆ ನೂರು ದಯನೀಯ ಸೋಲು ಅನುಭವಿಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಮಂಗಳೂರಿನಲ್ಲಿ ತಿಳಿಸಿದರು.

ಮುಂದಿನ ಪದವೀಧರ, ಶಿಕ್ಷಕರ ಚುನಾವಣೆಯಲ್ಲಿಯೂ ಬಿಜೆಪಿ ನೂರು ಪ್ರತಿಶತ ಗೆಲುವು ಸಾಧಿಸುತ್ತದೆ. ಎರಡೂ ಚುನಾವಣೆಯಲ್ಲಿಯೂ ಕಾಂಗ್ರೆಸ್ ಸೋತ ಮೇಲೆ ಯಾರು ರಾಜೀನಾಮೆ ನೀಡಬೇಕು ಎಂದು ತಿಳಿಯುತ್ತದೆ. ಬೇರೆ ಬೇರೆ ಕಾರಣಕ್ಕೆ ನಾನು ಸಿದ್ದರಾಮಯ್ಯ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಆದ್ದರಿಂದ ಸಿದ್ದರಾಮಯ್ಯನವರಿಗೆ ನಾನು ಇಷ್ಟು ಮಾತ್ರ ಹೇಳಬಲ್ಲೆ. ಇನ್ನಾದರೂ ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಲಿ ಎಂದರು.

ದೆಹಲಿಯಿಂದ ಸುದ್ದಿ ಬಂದಿದೆ, ರಾಜ್ಯದಲ್ಲಿ ಸಿಎಂ ಬದಲಾಗುತ್ತಾರೆ ಎಂದು ಹೇಳುತ್ತಿದ್ದಾರೆ. ನಾನು ಕೂಡ ದೆಹಲಿಯಿಂದ ಸುದ್ದಿ ಬಂದಿದೆ, ಸಿದ್ದರಾಮಯ್ಯನವರ ಪ್ರತಿಪಕ್ಷ ನಾಯಕರ ಸ್ಥಾನ ಬದಲಾವಣೆ ಆಗುತ್ತದೆ ಎಂದು ಹೇಳಬಹುದು. ಆದರೆ, ಆ ತರಹ ಹಗುರವಾಗಿ ಮಾತನಾಡಲು ಇಷ್ಟಪಡುವುದಿಲ್ಲ. ಜವಾಬ್ದಾರಿಯಿಂದ ಸಿದ್ದರಾಮಯ್ಯ ಮಾತನಾಡಲಿ ಎಂದು ವಿನಂತಿ ಮಾಡುತ್ತೇನೆ ಎಂದು ಸಿಎಂ ಹೇಳಿದರು.

ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ

ಬಹಳ ವರ್ಷಗಳ ಬಳಿಕ ಬಿಜೆಪಿ ಕಾರ್ಯಕಾರಿಣಿ ಸಭೆ ಮಂಗಳೂರಿನಲ್ಲಿ ನಡೆಯಲಿದೆ. ನಳಿನ್ ಕುಮಾರ್ ಕಟೀಲು ಅವರು ರಾಜ್ಯಾಧ್ಯಕ್ಷರಾದ ಬಳಿಕ ಎಲ್ಲಾ ಜಿಲ್ಲೆಗಳನ್ನು ಸುತ್ತಾಡಿ ಪಕ್ಷವನ್ನು ಬಲಪಡಿಸುವಲ್ಲಿ ಶ್ರಮಿಸಿದ್ದಾರೆ. ನಾಳೆ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಪರಿಸ್ಥಿತಿ ಬಗ್ಗೆ ಬೇರೆ ಸಮಸ್ಯೆಗಳ ಬಗ್ಗೆ ಚರ್ಚೆಗಳು ನಡೆಯಲಿದೆ. ಅಲ್ಲದೆ ಮುಂದೆ ಎರಡೂವರೆ ವರ್ಷಗಳ ಬಳಿಕ ನಡೆಯುವ ಚುನಾವಣೆಯಲ್ಲಿಯೂ ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಬೇಕು. ಆ ದಿಕ್ಕಿನಲ್ಲಿ ಪಕ್ಷವನ್ನು, ಸಂಘಟನೆಯನ್ನು ಬಲಪಡಿಸುವ ಮಹತ್ವದ ಬಗ್ಗೆಯೂ ಚರ್ಚೆಗಳು ನಡೆಯಲಿದೆ ಎಂದರು.

ಮಂಗಳೂರು: ಶಿರಾ ಹಾಗೂ ಆರ್.ಆರ್.ನಗರದ ಉಪಚುನಾವಣೆ ಸಿದ್ದರಾಮಯ್ಯ ನೇತೃತ್ವದಲ್ಲಿಯೇ ನಡೆಯಿತು‌. ಕಾಂಗ್ರೆಸ್‌ ನೂರಕ್ಕೆ ನೂರು ದಯನೀಯ ಸೋಲು ಅನುಭವಿಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಮಂಗಳೂರಿನಲ್ಲಿ ತಿಳಿಸಿದರು.

ಮುಂದಿನ ಪದವೀಧರ, ಶಿಕ್ಷಕರ ಚುನಾವಣೆಯಲ್ಲಿಯೂ ಬಿಜೆಪಿ ನೂರು ಪ್ರತಿಶತ ಗೆಲುವು ಸಾಧಿಸುತ್ತದೆ. ಎರಡೂ ಚುನಾವಣೆಯಲ್ಲಿಯೂ ಕಾಂಗ್ರೆಸ್ ಸೋತ ಮೇಲೆ ಯಾರು ರಾಜೀನಾಮೆ ನೀಡಬೇಕು ಎಂದು ತಿಳಿಯುತ್ತದೆ. ಬೇರೆ ಬೇರೆ ಕಾರಣಕ್ಕೆ ನಾನು ಸಿದ್ದರಾಮಯ್ಯ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಆದ್ದರಿಂದ ಸಿದ್ದರಾಮಯ್ಯನವರಿಗೆ ನಾನು ಇಷ್ಟು ಮಾತ್ರ ಹೇಳಬಲ್ಲೆ. ಇನ್ನಾದರೂ ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಲಿ ಎಂದರು.

ದೆಹಲಿಯಿಂದ ಸುದ್ದಿ ಬಂದಿದೆ, ರಾಜ್ಯದಲ್ಲಿ ಸಿಎಂ ಬದಲಾಗುತ್ತಾರೆ ಎಂದು ಹೇಳುತ್ತಿದ್ದಾರೆ. ನಾನು ಕೂಡ ದೆಹಲಿಯಿಂದ ಸುದ್ದಿ ಬಂದಿದೆ, ಸಿದ್ದರಾಮಯ್ಯನವರ ಪ್ರತಿಪಕ್ಷ ನಾಯಕರ ಸ್ಥಾನ ಬದಲಾವಣೆ ಆಗುತ್ತದೆ ಎಂದು ಹೇಳಬಹುದು. ಆದರೆ, ಆ ತರಹ ಹಗುರವಾಗಿ ಮಾತನಾಡಲು ಇಷ್ಟಪಡುವುದಿಲ್ಲ. ಜವಾಬ್ದಾರಿಯಿಂದ ಸಿದ್ದರಾಮಯ್ಯ ಮಾತನಾಡಲಿ ಎಂದು ವಿನಂತಿ ಮಾಡುತ್ತೇನೆ ಎಂದು ಸಿಎಂ ಹೇಳಿದರು.

ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ

ಬಹಳ ವರ್ಷಗಳ ಬಳಿಕ ಬಿಜೆಪಿ ಕಾರ್ಯಕಾರಿಣಿ ಸಭೆ ಮಂಗಳೂರಿನಲ್ಲಿ ನಡೆಯಲಿದೆ. ನಳಿನ್ ಕುಮಾರ್ ಕಟೀಲು ಅವರು ರಾಜ್ಯಾಧ್ಯಕ್ಷರಾದ ಬಳಿಕ ಎಲ್ಲಾ ಜಿಲ್ಲೆಗಳನ್ನು ಸುತ್ತಾಡಿ ಪಕ್ಷವನ್ನು ಬಲಪಡಿಸುವಲ್ಲಿ ಶ್ರಮಿಸಿದ್ದಾರೆ. ನಾಳೆ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಪರಿಸ್ಥಿತಿ ಬಗ್ಗೆ ಬೇರೆ ಸಮಸ್ಯೆಗಳ ಬಗ್ಗೆ ಚರ್ಚೆಗಳು ನಡೆಯಲಿದೆ. ಅಲ್ಲದೆ ಮುಂದೆ ಎರಡೂವರೆ ವರ್ಷಗಳ ಬಳಿಕ ನಡೆಯುವ ಚುನಾವಣೆಯಲ್ಲಿಯೂ ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಬೇಕು. ಆ ದಿಕ್ಕಿನಲ್ಲಿ ಪಕ್ಷವನ್ನು, ಸಂಘಟನೆಯನ್ನು ಬಲಪಡಿಸುವ ಮಹತ್ವದ ಬಗ್ಗೆಯೂ ಚರ್ಚೆಗಳು ನಡೆಯಲಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.