ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಪಕ್ಕಳ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.
ಪುತ್ತೂರು ವಿವೇಕಾನಂದ ಕಾಲೇಜಿನ ಪಿಯುಸಿ ವಿಜ್ಞಾನ ವಿಭಾಗದ ಪ್ರತಿಭಾನಿತ್ವ ವಿದ್ಯಾರ್ಥಿನಿ ಆಗಿದ್ದ ಶ್ರೇಯಾ ಪಕ್ಕಳ (16 ವರ್ಷ) ಹೃದಯಾಘಾತದಿಂದ ಸಾವನ್ನಪ್ಪಿದ್ದು, ಈಕೆ ಬೆಳ್ಳಿಪ್ಪಾಡಿ ಕುಂಡಾಪು ಪದ್ಮ ಪಕ್ಕಳ ಹಾಗೂ ಉಮಾವತಿ ದಂಪತಿಯ ಎರಡನೇ ಪುತ್ರಿಯಾಗಿದ್ದಾಳೆ.
ಯಾವುದೇ ತೊಂದರೆ ಇಲ್ಲದಿದ್ದರೂ ನಿನ್ನೆ ಶ್ರೇಯಾಳಿಗೆ ದಿಢೀರ್ ಆಗಿ ಅನಾರೋಗ್ಯ ಕಾಣಿಸಿಕೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ಕರೆತರಲಾಯಿತು. ಅದಾಗಲೇ ಸಾವನ್ನಪ್ಪಿದ್ದಾಳೆಂದು ವೈದ್ಯರು ಮಾಹಿತಿ ನೀಡಿದ್ದಾರೆ.